ಬೈಕ್ ಸವಾರರ ಹಿಂದೆ ಬಿದ್ದಿರುವ ಯಮನ ಯಮ ಯಾತನೆಯೇನು?
ಬೆಂಗಳೂರು, ಜು.23: ಹೆಲ್ಮೆಟ್ ಹಾಕದಿದ್ದರೆ ಯಮ ಬರ್ತಾನೆ, ನಿಮ್ಮ ಬೈಕ್ ಹಿಂದೆ ಕೂರ್ತಾನೆ ಈ ಸುದ್ದಿಯನ್ನು ಎಲ್ಲರೂ ಓದಿರ್ತೀರಾ, ಆದರೆ ಈ ಯಮನ ವೇಷತೊಟ್ಟು ಇಡೀ ಬೆಂಗಳೂರಿನಲ್ಲಿ ರಸ್ತೆ ನಿಯಮಗಳು, ಹೆಲ್ಮೆಟ್ ಧರಿಸುವ ಕುರಿತು ಜಾಗೃತಿ ಮೂಡಿಸುತ್ತಿರುವ ಈ ಯಮ ಯಾರು ಅವರ ಹಿಂದಿರುವ ಕತೆ, ವ್ಯಥೆ ಏನು ಎಂದು ಯಾರಿಗೂ ತಿಳಿದಿಲ್ಲ.
ಇಲ್ಲಿದೆ ಓದಿ ಈ ಅಭಿಯಾನದ ಹಿಂದಿರುವ ಕಾರಣ, ವೀರೇಶ ಮುಟ್ಟಿನಮಠ ಇವರು ಒಬ್ಬ ಕಲಾವಿದರು, ನಾಟಕಗಳನ್ನು ನಿರ್ದೇಶಿಸಿ ತಾವೇ ಸ್ವತಃ ಅಭಿನಯಿಸಿದ ಅನುಭವವೂ ಇವರಿಗಿದೆ, ಅವರು ಪುಟ್ಟಗೌರಿ ಮದುವೆ, ಕುಲವಧು ಇನ್ನಿತರೆ ಟಿವಿ ದಾರವಾಹಿಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಆದರೆ ಕೆಲವು ದಿನಗಳಿಂದ ವೀರೇಶ್ ಅವರು ನಗರದ ರಸ್ತೆಗಳಲ್ಲಿ ಯಮನ ವೇಷ ತೊಟ್ಟು ತಿರುಗಾಡುತ್ತಿರುವುದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಸಂಚಾರ ನಿಯಮಗಳನ್ನು ಪಾಲಿಸದಿದ್ದವರನ್ನು ಅಲ್ಲಿಯೇ ತಡೆದು ಅವರಿಗೆ ಸಂಚಾರ ನಿಯಮಗಳನ್ನು ಹೇಳಿ ಜಾಗೃತಿ ಮೂಡಿಸುತ್ತಿದ್ದಾರೆ. ಇವರ ಈ ಕಾರ್ಯದಿಂದ ಪೊಲೀಸರು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

2017ರ ಜೂನ್ 21ರಂದು ವೀರೇಶ್ ಅವರ ಅಣ್ಣ ಮರಿಸ್ವಾಮಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರು ಬೈಕ್ ಓಡಿಸುವಾಗ ಹೆಲ್ಮೆಟ್ ಧರಿಸಿದೇ ಇರುವುದೇ ಅವರ ಸಾವಿಗೆ ಕಾರಣವಾಗಿತ್ತು. ತಲೆಗೆ ಹೆಚ್ಚು ಪಟ್ಟು ಬಿದ್ದಿದ್ದರಿಂದ ಕೋಮಾಕ್ಕೆ ಹೋಗಿ ಬಳಿಕ ಜು.23ರಂದು ಮೃತಪಟ್ಟಿದ್ದರು.
ವೈದ್ಯರು ಅವರ ಸಾವಿಗೆ ಕಾರಣವನ್ನು ತಿಳಿಸಿದಾಗ ತನ್ನ ಅಣ್ಣನನ್ನು ತಾನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಆದರೆ ಉಳಿದವರ ಪ್ರಾಣವನ್ನಾದರೂ ಈ ರೀತಿ ಜಾಗೃತಿ ಮೂಡಿಸುವ ಮೂಲಕ ಉಳಿಸಿಕೊಳ್ಳಬಹುದೇನೋ ಎಂಬ ನಿರ್ಧಾರ ಮಾಡಿದರು.
ಬಳಿಕ ಬೆಂಗಳೂರಿನ ರಸ್ತೆಯಲ್ಲಿ ಓಡಾಡುವಾಗ ಸಾವಿರಾರು ಮಂದಿ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸುತ್ತಿದುದನ್ನು ಗಮನಿಸಿದ ಅವರು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲು ತೀರ್ಮಾನಿಸಿದರು. ನಮಗೆ ತಿಳಿಯದೆ ಸಾವಿರಾರು ಪ್ರಯಾಣಿಕರ ಜೀವವನ್ನು ಅವರು ಉಳಿಸಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications