ತಾನು ಸತ್ತು ಐವರ ಜೀವ ಉಳಿಸಿದ ಪುಣ್ಯಾತ್ಮ
ಬೆಂಗಳೂರು, ಮಾರ್ಚ್ 10: ಬೆಂಗಳೂರಿನ ಗ್ರನೈಟ್ ವ್ಯಾಪಾರಿಯೊಬ್ಬರು ತಾವು ಸತ್ತು ಐದು ಜನರನ್ನು ಬದುಕಿಸಿದ್ದಾರೆ! ಆ ಮೂಲಕ ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.
ಮಾರ್ಚ್ 2 ರಂದು ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಅಶೋಕಾ ಪಿಲ್ಲರ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗ್ರನೈಟ್ ವ್ಯಾಪಾರಿಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಮೂಲತಃ ರಾಜಸ್ಥಾನದವರಾದ ಇವರು ಪತ್ನಿ, ಇಬ್ಬರು ಮಕ್ಕಳ ಜೊತೆ ಬೆಂಗಳೂರಿನಲ್ಲೇ ನೆಲೆಸಿದ್ದರು.

ಅಪಘಾತ ಸಂಭವಿಸಿದ 6 ದಿನದ ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರು ವ್ಯಕ್ತಿಯ ಬ್ರೇನ್ ಡೆಡ್ ಆಗಿದೆ ಎಂದು ಘೋಷಿಸಿದ್ದರು. ತಕ್ಷಣವೇ ವ್ಯಕ್ತಿಯ ಕುಟುಂಬ ಅವರ ದೇಹದ ಕೆಲವು ಅಂಗಗಳನ್ನು ದಾನಮಾಡಲು ಮುಂದಾಯಿತು. ಅವರ ಹೃದಯವನ್ನು ಹೊತ್ತ ಅಂಬುಲೆನ್ಸ್ ಗ್ರೀನ್ ಕಾರಿಡಾರ್ ಮೂಲಕ 25 ಕಿ.ಮೀ.ದೂರವನ್ನು ಕೇವಲ 19 ನಿಮಿಷದಲ್ಲಿ ತಲುಪಿತು. ನಾರಾಯಣ ಹೃದಯಾಲಯದಲ್ಲಿ ಹೃದಯ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಈ ಹೃದಯವನ್ನು ಕಸಿ ಮಾಡಲಾಯಿತು.
ಕಿಡ್ನಿ ಮತ್ತು ಇನ್ನಿತರ ಉಪಯುಕ್ತ ಅಂಗಗಳನ್ನೂ ದಾನ ಮಾಡಿ ಕನಿಷ್ಠ ಐದು ಜನರಿಗೆ ಹೊಸ ಬದುಕು ನೀಡಲಾಯಿತು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications