ರಾಜ್ಯದಲ್ಲಿ ಅನಗತ್ಯ ಸ್ಕ್ಯಾನಿಂಗ್ಗೆ ಸರ್ಕಾರ ಬ್ರೇಕ್, ಜನರ 200 ಕೋಟಿ ರೂ. ಉಳಿಕೆ: ಆರೋಗ್ಯ ಸಚಿವ
ಬೆಂಗಳೂರು: ಕರ್ನಾಟಕದಲ್ಲಿ ಆರೋಗ್ಯ ಚಿಕಿತ್ಸೆ ಹೆಸರಿನಲ್ಲಿ ನಡೆಯುತ್ತಿದ್ದ ಅನಗತ್ಯ ಸ್ಕ್ಯಾನಿಂಗ್ಗಳಿಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಸರ್ಕಾರ ಜಾರಿಗೆ ತಂದ ನಿಯಮದಿಂದ ಅಗತ್ಯವಿರುವವರಿಗೆ ಸಿಟಿ ಮತ್ತು ಎಂಆರ್ಐ ಸ್ಕ್ಯಾನಿಂಗ್ ಸೇವೆಗೆ ಸಿಗುತ್ತಿದೆ. ಅನಗತ್ಯವಾಗಿ ಮಾಡಿಸುತ್ತಿದ್ದ ಸ್ಕ್ಯಾನಿಂಗ್ ದುರ್ಬಳಕೆ ತಡೆಯಲಾಗಿದೆ. ಇದರಿಂದ ಸರ್ಕಾರಕ್ಕೆ ಬರೋಬ್ಬರಿ 200 ಕೋಟಿ ರೂಪಾಯಿ ಉಳಿದಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಕಿ ಸಂಖ್ಯೆ ಸಮೇತ ವಿವರಿಸಿದ್ದಾರೆ.
ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಈ ಬಗ್ಗೆ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ಕಾರದ ಹಣದ ಸರಿಯಾದ ಸದ್ಬಳಕೆ ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಬದ್ಧತೆಯಾಗಿದೆ. CT ಮತ್ತು MRI ಸ್ಕ್ಯಾನಿಂಗ್ ಸೇವೆ ಪಡೆಯಲು ಜನರಿಗೆ ಯಾವುದೇ ಅಡಚಣೆ ಆಗಬಾರದು ಎಂಬ ಉದ್ದೇಶದಿಂದ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸಲಾಗಿದೆ.

ಸಿಟಿ ಮತ್ತು ಎಂಆರ್ಐ ಸೇವೆ ನೀಡುತ್ತಿದ್ದ Krsnaa Diagnostics Ltd ಸಂಸ್ಥೆ ಸರಿಯಾದ ದಾಖಲೆ ಹಾಗೂ ದೃಢೀಕರಣ ಪದ್ಧತಿಗಳನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಸ್ಕ್ಯಾನಿಂಗ್ ಪ್ರಕ್ರಿಯೆಗೆ ವ್ಯವಸ್ಥಿತ ನಿಯಮಾವಳಿ ಮತ್ತು ಪರಿಶೀಲನಾ ಕ್ರಮಗಳನ್ನು 2024ರ ಆಗಸ್ಟ್ 30 ರಂದು ಜಾರಿಗೆ ತಂದಿತು.
ಇದರ ಪರಿಣಾಮವಾಗಿ 2024ರ ಏಪ್ರಿಲ್ನಿಂದ 2025ರ ಡಿಸೆಂಬರ್ ತನಕ ಅಗತ್ಯವಿರುವಷ್ಟೇ ಸಿಟಿ ಸ್ಕ್ಯಾನಿಂಗ್ ನಡೆಯಿತು. ಏಪ್ರಿಲ್ 2024 ರಿಂದ ಜುಲೈ 2024ರ ಅವಧಿಯಲ್ಲಿ ಒಟ್ಟು 98,311 ಸ್ಕ್ಯಾನಿಂಗ್ ನಡೆಸಲಾಗಿದೆ. ಅದಕ್ಕೆ 15.24 ಕೋಟಿ ರೂಪಾಯಿ ವೆಚ್ಚವಾಗಿತ್ತು. ಆಗಸ್ಟ್ 2024ರಿಂದ ನವೆಂಬರ್ 2024ರ ಅವಧಿಯಲ್ಲಿ ಈ ಪ್ರಮಾಣ 76,217ಕ್ಕೆ ಇಳಿದು 11.81 ಕೋಟಿ ರೂ. ವೆಚ್ಚವಾಯಿತು ಎಂದು ಸಚಿವರು ಲೆಕ್ಕ ನೀಡಿದ್ದಾರೆ.
ಸಾರ್ವಜನಿಕರ 200 ಕೋಟಿ ರೂ.ಉಳಿಕೆ
ಮುಂದೆ ಡಿಸೆಂಬರ್ 2024 ಮಾರ್ಚ್ ನಿಂದ 2025ರ ಅವಧಿಯಲ್ಲಿ ಗಣನೀಯ ಸ್ಕ್ಯಾನಿಂಗ್ ಮಾಡುವ ಪ್ರಮಾಣ ತಗ್ಗಿದೆ. ಆ ಅವಧಿಯಲ್ಲಿ 23,426 ಸ್ಕ್ಯಾನಿಂಗ್ ನಡೆದು ಕೇವಲ 3.36 ಕೋಟಿ ರೂಪಾಯಿ ವೆಚ್ಚವಾಯಿತು. ನಮ್ಮ ಪಾರದರ್ಶಕ ನಿಯಮಾವಳಿ ಸರ್ಕಾರಕ್ಕೆ ಆಗುತ್ತಿದ್ದ ಅನಗತ್ಯ ನಷ್ಟವನ್ನು ತಡೆಯಲಾಯಿತು. ಒಟ್ಟು ಸಿಟಿ ಸ್ಕ್ಯಾನಿಂಗ್ ಪ್ರಮಾಣದಲ್ಲಿ 76.18ರಷ್ಟು ಹಾಗೂ ಎಂಆರ್ಐನಲ್ಲಿ 64.32ರಷ್ಟು ಇಳಿಕೆ ಆಯಿತು. ಅನಗತ್ಯ ಸ್ಕ್ಯಾನಿಂಗ್ಗಳಿಗೆ ಕಡಿವಾಣ ಹಾಕುವ ಮೂಲಕ ಕಳೆದ ಒಂದೂವರೆ ವರ್ಷದಲ್ಲಿ ಸುಮಾರು 200 ಕೋಟಿ ರೂಪಾಯಿ ಸಾರ್ವಜನಿಕ ಹಣವನ್ನು ಉಳಿಸಲಾಗಿದೆ ಎಂದರು.
ಸಿಟಿ ಸ್ಕ್ಯಾನ್ ಯಂತ್ರ ಅಳವಡಿಕೆಗೆ ಟೆಂಡರ್
ಕೇಂದ್ರ ಸರ್ಕಾರದಿಂದ ಬರಬೇಕಾದ ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ಅನುದಾನ ವಿಳಂಬವಾದರೂ, ಆರೋಗ್ಯ ಸೇವೆಗಳಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗಿಲ್ಲ. ಈಗಾಗಲೇ ಏಳು ಸರ್ಕಾರಿ ಆಸ್ಪತ್ರೆಗಳಲ್ಲಿ ಎಂಆರ್ಐ ಮತ್ತು ಮೂರು ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಯಂತ್ರಗಳನ್ನು ಅಳವಡಿಸಲು ಟೆಂಡರ್ ಕರೆಯಲಾಗಿದೆ. ಶೀಘ್ರದಲ್ಲೇ ಇಲಾಖೆಯ ವತಿಯಿಂದ ಸುಧಾರಿತ ಯಂತ್ರಗಳನ್ನು ಪೂರೈಸಲಾಗುತ್ತದೆ ಎಂದು ಅವರು ಹೇಳಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್












Click it and Unblock the Notifications