ಆರೋಗ್ಯ ಸಚಿವರಿಗೆ ಅನಾರೋಗ್ಯ; ಕಲಾಪಕ್ಕೆ ಹಾಜರಾಗಲ್ಲ ಡಾ. ಸುಧಾಕರ್
ಬೆಂಗಳೂರು, ಸೆಪ್ಟೆಂಬರ್ 15: ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭಾಗವಹಿಸದಿರಲು ಕಾರಣವೇನು ಎಂಬುದನ್ನು ತಿಳಿಸಿದ್ದಾರೆ.
ಬಿಜೆಪಿಯ ಜನೋತ್ಸೋವ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿದ್ದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಪಕ್ಷದ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ನಾಯಕರಿಂದ ಶಹಬ್ಬಾಶ್ ಗಿರಿ ಅನ್ನು ಸಂಪಾದಿಸಿಕೊಂಡಿದ್ದರು.
ಅದೇ ಆರೋಗ್ಯ ಸಚಿವರು ಇದೀಗ ಮುಂಗಾರು ಅಧಿವೇಶನದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕಳೆದ ಸೋಮವಾರದಿಂದ ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಆರೋಗ್ಯ ಸಚಿವರೇ ಕಾಣಿಸಿಕೊಳ್ಳುತ್ತಿಲ್ಲ. ತಾವು ಮುಂಗಾರು ಕಲಾಪಕ್ಕೆ ಬಾರದಿರಲು ತಮ್ಮ ಅನಾರೋಗ್ಯವೇ ಕಾರಣ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿರುವ ವೈದ್ಯರು: "ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ," ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನೋತ್ಸವ: ಸೆಪ್ಟೆಂಬರ್ 10ರ ಶನಿವಾರದಂದು ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ಜನಸ್ಪಂದನೆ ಸಮಾವೇಶವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ಅನ್ನು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೆಗಲಿಗೆ ವಹಿಸಲಾಗಿತ್ತು. ಬಿಜೆಪಿಯ ಜನಸ್ಪಂದನೆ ಕಾರ್ಯಕ್ರಮದ ಬೆನ್ನಲ್ಲೇ ಅವರಲ್ಲಿ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಸಚಿವರು ವಿಶ್ರಾಂತಿಯ ಮೊರೆ ಹೋಗಿದ್ದಾರೆ.
-
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications