Heart attack: ವಾಯು ಮಾಲಿನ್ಯ'ದಿಂದಲೂ 'ಹೃದ್ರೋಗ' ಸಮಸ್ಯೆ: ತಜ್ಞರ ವಿವರಣೆ
ಬೆಂಗಳೂರು, ನವೆಂಬರ್ 06: ಇತ್ತೀಚಿನ ದಿನಗಳಲ್ಲಿ 'ಹೃದಯ ಸಂಬಂಧಿ' ಆರೋಗ್ಯ ಸಮಸ್ಯೆಗಳು ಸಾಮಾನ್ಯ ಎಂಬತಾಗಿದೆ. ಅತೀಯಾದ ತಂಬಾಕು ಸೇವನೆ, ವ್ಯಾಯಾಮ ಮಾಡದಿರುವುದು ಸೇರಿದಂತೆ ಹಲವು ಕಾರಣಗಳಿಂದ ಹೃದ್ರೋಗದಿಂದ ಜನರು ಬಳಲುತ್ತಿದ್ದರು. ಇದರಲ್ಲಿ ಕೆಲವರಿಗೆ ವಾಯು ಮಾಲಿನ್ಯ ಕಾರಣದಿಂದ ಹೃದಯ ಕಾಯಿಲೆಗಳು ಹೆಚ್ಚಾಗುತ್ತಿವೆ. ಅಚ್ಚರಿ ಎನಿಸಿದರೂ ಇದು ಸತ್ಯ.
ಹೌದು, ಅತೀಯಾದ ಮದ್ಯಪಾನ, ತಂಬಾಕು ಸೇವನೆ, ವ್ಯಾಯಾಮದ ಕೊರತೆ, ಒತ್ತಡದಂತಹ ಸಮಸ್ಯೆಗಳು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿದ್ದರು. ಇದೀಗ ವಾಯು ಮಾಲಿನ್ಯ ಕಾರಣದಿಂದಾಗಿ ಶೇ. 10ರಷ್ಟು ರೋಗಿಗಳು ಹೃದ್ರೋಗದಿಂದ ಬಳಲುತ್ತಿದ್ದಾರೆ ಎಂದು ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಭಾರತದ ಅನೇಕ ನಗರಗಳಲ್ಲಿ ವಾಯು ಮಾಲಿನ್ಯ ಹದಗೆಡುತ್ತಿದೆ. ದಿನೇ ದಿನೆ ಈ ಉಸಿರಾಟ ಸಮಸ್ಯೆ ಬಿಗಡಾಯಿಸುತ್ತಿದೆ. ವಾಯು ಗುಣಮಟ್ಟ ಸೂಚ್ಯಂಕವು ಹೆಚ್ಚು ಜನರ ಮೇಲೆ ಪರಿಣಾಮ ಬೀರುತ್ತಿದೆ. ಆದರೆ ಇದು ಕಡಿಮೆ ಜನರ ಮೇಲೆ ಗುರುತಿಸಲ್ಪಟ್ಟಿದೆ. ಹೀಗಾಗಿ ಇದನ್ನು 'ಅದೃಶ್ಯ ಕೊಲೆಗಾರ' ಎಂದು ಕರೆಯಲಾಗುತ್ತಿದೆ.
Air pollution is an important and under recognised risk factor for cardiovascular events. #HeartAttack
— Dr Deepak Krishnamurthy (@DrDeepakKrishn1) November 5, 2023
Higher levels of fine particulate matter (PM2.5) lead to endothelial dysfunction and slow flow in coronaries and systemic inflammation, leading to accelerated atherosclerosis… pic.twitter.com/2YW4lRX5x3
ಅಸ್ತಮಾ, ಉಸಿರಾಟ ತೊಂದರೆ
ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಕಾರ, ಮಾಲಿನ್ಯ ಹದಗೆಡುತ್ತಿರುವ 252 ದೇಶಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ ಎಂಬುದು ಕಳವಳಕಾರಿ ಸಂಗತಿ. ಇಂದಿನ ವಾಯು ಮಾಲಿನ್ಯವು ಮನುಷ್ಯನ ಹೃದಯ ರಕ್ತನಾಳದ ಕಾಯಿಲೆಗಳನ್ನು ತಂದೊಡ್ಡುತ್ತುದೆ. ವಾಯು ಮಾಲಿನ್ಯದಲ್ಲಿನ ಬ್ರಾಂಕೈಟಿಸ್ ಅಥವಾ ಅಸ್ತಮಾದಂತಹ ಉಸಿರಾಟದ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ ಎಂದು ಅವರು ಎಚ್ಚರಿಸಿದರು.
ಮಾಲಿನ್ಯದಲ್ಲಿ 2.5 ಮೈಕ್ರಾನ್ಗಳಿಗಿಂತ ಕಡಿಮೆ ಇರುವ ಪರ್ಟಿಕ್ಯುಲೇಟ್ ಮ್ಯಾಟರ್ (PM) ಇದು ಶ್ವಾಸಕೋಶದ ತಡೆಗೋಡೆಗಳ ಮೂಲಕ ಹಾದು ಹೋಗಿ ದೇಹ ಸೇರುತ್ತದೆ. ನಂತರ ರಕ್ತನಾಳಗಳೊಳಗೆ ಹರಿಯುತ್ತದೆ. ನಂತರ ರಕ್ತ ಹೆಪ್ಪುಗಟ್ಟುವಿಕೆ ಸೇರಿದಂತೆ ಹಲವು ಅನಾರೋಗ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತದೆ.

ಮಾಲಿನ್ಯದಿಂದ ಮೃತಪಟ್ಟವರು ಸಂಖ್ಯೆ ಹೀಗಿದೆ
ವ್ಯಕ್ತಿಯ ಜೀವ ಹಿಂಡುವ ಈ ವಾಯು ಮಾಲಿನ್ಯವು ಒಂದು ರೀತಿಯ ತಂಬಾಕು ಎಂದು ಕರೆಯಲಾಗುತ್ತಿದೆ. ಈ ವಾಯು ಮಾಲಿನ್ಯ ಕಾರಣದಿಂದ ದೇಶದಲ್ಲಿ 22 ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ಸದಾ ವಾಹನ ದಟ್ಟಣೆಗಳಿಂದಲೇ ತುಂಬಿರುವ ರಸ್ತೆಗಳು, ಇಂಧನ ಪೂರೈಕೆ ಮತ್ತು ಕೃಷಿ ಪ್ರದೇಶಗಳಲ್ಲಿ ಕೆಲಸ ಮಾಡುವವರು ವಾಯು ಮಾಲಿನ್ಯ ಕಾರಣದಿಂದ ಹೃದ್ರೋಗ ಸಮಸ್ಯೆಯಿಂದ ಬಳಲುವ ಅಪಾಯ ಹೆಚ್ಚಿರುತ್ತದೆ ಎಂದು ವೈದ್ಯರು ವಿವರಿಸಿದರು.
ಸದ್ಯ ನಮ್ಮ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಜತೆಗೆ ಹೃದಯ ಸಂಬಂಧಿ ಸಮಸ್ಯೆಗಳ ಪರಿಶೀಲನೆ, ತಪಾಸಣೆಗೆ ಒಪ್ಪಂದ ಮಾಡಿಕೊಂಡಿದೆ. ನಿಯಮಿತವಾಗಿ ಚಾಲಕರು, ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡುತ್ತಿದೆ. ಈ ಒಪ್ಪಂದವನ್ನು ರಾಜ್ಯ ಪೊಲೀಸ್ ಇಲಾಖೆಗೂ ವಿಸ್ತರಿಸಬೇಕಿದೆ ಎಂದು ಅವರು ಸಲಹೆ ನೀಡಿದರು.
ಮಾಲಿನ್ಯ ತಡೆಗೆ ನೀತಿ ರೂಪಿಸಬೇಕಿದೆ
ವಾಯು ಮಾಲಿನ್ಯದಿಂದ ತಪ್ಪಿಸಿಕೊಳ್ಳಲು ವರ್ಲ್ಡ್ ಹಾರ್ಟ್ ಫೆಡರೇಶನ್ ಕ್ಲೀನರ್ ಸಂಸ್ತೆ ಉತ್ತಮ ಸಾರಿಗೆ ಸಂಪರ್ಕ, ಸ್ವಚ್ಛತೆ, ಸೂಕ್ತ ತ್ಯಾಜ್ಯ ನಿರ್ವಹಣೆ, ವಿದ್ಯುತ್ ಉತ್ಪಾದನೆ ಮತ್ತು ಶುದ್ಧ ಇಂಧನ ಮತ್ತು ತಂತ್ರಜ್ಞಾನಗಳಿಗೆ ಆದ್ಯತೆ ನೀಡುವ ನೀತಿ ರೂಪಿಸುವಂತೆ ಸಲಹೆ ನೀಡಿದೆ.
ಭಾನುವಾರ ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಹಿರಿಯ ಇಂಟರ್ವೆನ್ಷನಲ್ ಹೃದ್ರೋಗ ತಜ್ಞ ಡಾ.ದೀಪಕ್ ಕೃಷ್ಣಮೂರ್ತಿ ಅವರು, ವಾಯು ಮಾಲಿನ್ಯದಲ್ಲಿ ಹೃದಯರಕ್ತನಾಳ ಸಮಸ್ಯೆ ಉಂಟುಮಾಡುವ ಅಪಾಯಕಾರಿ ಅಂಶ ಹೊಂದಿದೆ. ಅದರಲ್ಲಿರುವ ಉನ್ನತ ಮಟ್ಟದ ಸೂಕ್ಷ್ಮ ಕಣಗಳ ಮ್ಯಾಟರ್ (PM2.5) ಎಂಡೋಥೀಲಿಯಲ್ ರಕ್ತನಾಳಗಳ ಸಮರ್ಥ ನಿರ್ವಹಣೆಗೆ ಅಡ್ಡಿ ಮಾಡುತ್ತದೆ. ಹೃದಯ ಪರಿಧಮನಿಗಳಲ್ಲಿ ನಿಧಾನಗತಿಯ ರಕ್ತ ಹರಿವು ಮತ್ತು ವ್ಯವಸ್ಥಿತ ಉರಿಯೂತ, ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications