Heart attack: ಐಟಿ ದಾಳಿಯಾದ ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ನಿಧನ
ಬೆಂಗಳೂರು, ನವೆಂಬರ್, 27: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಸಂಜೆ (ನವೆಂಬರ್ 27) ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಕಳೆದ ತಿಂಗಳು ಅಂಬಿಕಾಪತಿ ನಿವಾಸಕ್ಕೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅಂಬಿಕಾಪತಿ ಮನೆಯಲ್ಲಿ ಬರೋಬ್ಬರಿ 44 ಕೊಟಿ ರೂಪಾಯಿ ಪತ್ತೆ ಆಗಿತ್ತು. ಈ ಘಟನೆಯಾದ ಬಳಿಕ ಇಂದು (ನವೆಂಬರ್ 27) ಸಂಜೆ ಅಂಬಿಕಾಪತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಮ್ಮ ಮನೆಯಲ್ಲಿ ಭಾರೀ ಪ್ರಮಾಣದ ಹಣ ಪತ್ತೆಯಾದ ಬಳಿಕ ಅಂಬಿಕಾಪತಿ ಮಾನಸಿಕ ಒತ್ತಡಕ್ಕೆ ಒಳಗಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಹೃದಯಾಘಾತಕ್ಕೆ ಒಳಗಾಗಿ ಅಂಬಿಕಾಪತಿ ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ. ಇದೀಗ ಅಂಬಿಕಾಪತಿ ಮೃತದೇಹವನ್ನು ಕುಟುಂಬಸ್ಥರು ಆಸ್ಪತ್ರೆಯಿಂದ ಮನೆಗೆ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ಚಾಲಕನಿಗೆ ಹೃದಯಾಘಾತ
ಇನ್ನು ಖಾಸಗಿ ಬಸ್ ಚಾಲಕ ಬಸ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ, ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ನಗರದ ಗಾಂಧಿ ಸರ್ಕಲ್ ನೆಹರೂ ಮಾರುಕಟ್ಟೆ ಮುಂಭಾಗದಲ್ಲಿ ಇತ್ತೀಚೆಗಷ್ಟೇ ನಡೆದಿದತ್ತು.
ಚಳ್ಳಕೆರೆ ತಾಲ್ಲೂಕಿನ ದೇವರಮರಿಕುಂಟೆ ಗ್ರಾಮದ ಕುಮಾರ್ (45)ಮೃತ ಬಸ್ ಚಾಲಕ ಎಂದು ಗುರುತಿಸಲಾಗಿದೆ. ರೆಡ್ಡಿಹಳ್ಳಿ ಗ್ರಾಮದ ಮಂಜುನಾಥ ಲ್ಲಿ ಹಲವಾರು ವರ್ಷಗಳಿಂದ ಬಸ್ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹಿರಿಯೂರು ನಗರದ ಖಾಸಗಿ ಬಸ್ ನಿಲ್ದಾಣದಿಂದ ಹೇಮದಳ, ರಂಗೇನಹಳ್ಳಿ, ಬೆಳಗೆರೆ ಕಡೆ ಹೋರಾಟಾಗ ನಗರದಲ್ಲಿದ್ದಾಗ ಚಾಲಕನಿಗೆ ಹಠಾತ್ ಹೃದಯಘಾತ ಸಂಭವಿಸಿದೆ. ಇದರಿಂದ ದೊಡ್ಡ ದುರಂತ ತಪ್ಪಿದೆ. ನಿಯಂತ್ರಣ ಇಲ್ಲದ ಬಸ್ ರಸ್ತೆ ಪಕ್ಕದಲಿದ್ದ ಟೆಲಿಪೋನ್ ಕಂಬಕ್ಕೆ ಗುದ್ದಿದೆ. ಅಲ್ಲಿದ್ದ ಫರ್ನಿಚರ್ ಅಂಗಡಿಯ ಮುಂಭಾಗದಲ್ಲಿದ್ದ ಚೇರ್ ಸೇರಿದಂತೆ ಕೆಲವು ವಸ್ತುಗಳು ಮುರಿದು ಬಿದ್ದು ದೊಡ್ಡ ಅನಾಹುತ ತಪ್ಪಿದೆ. ಸದ್ಯ ಈ ಪ್ರಕರಣ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ತಿಳಿದುಬಂದಿತ್ತು.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications