ಆಂಧ್ರದ ವ್ಯಕ್ತಿಗೆ ಮರು ಜೀವ ನೀಡಿದ ಹಾಸನದ ವ್ಯಕ್ತಿಯ ಹೃದಯ
ಬೆಂಗಳೂರು / ಹಾಸನ, ಮಾರ್ಚ್ 30: ರಸ್ತೆ ಅಪಘಾತದಿಂದ ಮೆದುಳು ನಿಷ್ಕ್ರಿಯಗೊಂಡಿರುವ ಹಾಸನ ಮೂಲದ 26 ವರ್ಷದ ಯುವಕನ ಹೃದಯವನ್ನು ಆಂಧ್ರಪ್ರದೇಶದ 18 ವರ್ಷದ ವ್ಯಕ್ತಿಗೆ ಹೃದಯ ಕಸಿ ಮಾಡುವಲ್ಲಿ ನಾರಾಯಣ ಹೆಲ್ತ್ ಸಿಟಿ ವೈದ್ಯರು ಯಶಸ್ವಿಯಾಗಿದ್ದಾರೆ.
ದಾನಿಯು 26 ವರ್ಷದ ಯುವಕನಾಗಿದ್ದು, ಬುಧವಾರದಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಾದರು. ಹೆಚ್ಚಿನ ಚಿಕಿತ್ಸೆಗಾಗಿ ಉತ್ತರಹಳ್ಳಿಯಲ್ಲಿರುವ ಬಿ.ಜಿ.ಎಸ್. ಗ್ಲೋಬಲ್ ಆಸ್ಪತ್ರೆಗೆ ಅವರನ್ನು ಶಿಫಾರಸು ಮಾಡಲಾಯಿತು.
ಆದರೆ, ಬಿ.ಜಿ. ಎಸ್. ಗ್ಲೋಬಲ್ ಆಸ್ಪತ್ರೆಯ ವೈದ್ಯರು ನಿನ್ನೆ ಮೆದುಳು ನಿಷ್ಕ್ರಿಯಗೊಂಡಿರುವುದು ಪ್ರಕಟಿಸಿದರು. ಮೆದುಳು ನಿಷ್ಕ್ರಿಯಗೊಂಡಿರುವುದು ಪ್ರಕಟಿಸಿದನಂತರ ಮೃತ ಯುವಕನ ಮನೆಯವರು ಅಂಗಾಂಗದಾನಕ್ಕೆ ಮುಂದಾದರು.
ಮೃತ ಯುವಕನ ಮನೆಯವರು ಅಂಗಾಂಗದಾನಕ್ಕೆ ಒಪ್ಪಿಗೆ ಸೂಚಿಸಿದ ನಂತರ ಇಂದು ಬೆಳಗಿನ ಜಾವ ಹಸಿರು ಪಥ (ಗ್ರೀನ್ ಕಾರಿಡಾರ್) ಸಹಾಯದಿಂದ ದಾನಿಯ ಹೃದಯವನ್ನು ಬೊಮ್ಮಸಂದ್ರ ಕೈಗಾರಿಕ ಪ್ರದೇಶದಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ರವಾನಿಸಲಾಯಿತು.

ಹಸಿರು ಪಥ (ಗ್ರೀನ್ ಕಾರಿಡಾರ್) ಸಹಾಯ
ಜೋಸೆಫ್ ಪಸಂಘಾ, ಸಿ.ಒ.ಒ, ನಾರಾಯಣ ಹೆಲ್ತ್ ಸಿಟಿ, ಮಾತನಾಡಿ, "ನಾವು ಖಾಸಿಂ ರಾಜ, ಎ.ಸಿ.ಪಿ, ಪೂರ್ವ ವಿಭಾಗದ ಸಂಚಾರಿ ಪೋಲಿಸ್ ಹಾಗು ಹಿತೇಂದ್ರ, ಬೆಂಗಳೂರು ಸಂಚಾರಿ ಪೋಲಿಸ್ ಇಲಾಖೆಯಿಂದ ಪ್ರತಿಬಾರಿ ಅಂಗಾಂಗವನ್ನು ರವಾನಿಸಲು ನೀಡಲ್ಪಟ್ಟ ಬೆಂಬಲವನ್ನು ಪ್ರಶಂಸಿಸಿದರು ಹಾಗು ಅಂಗಾಂಗ ದಾನ ಮಾಡಲು ಮುಂದೆ ಬಂದ ದಾನಿಯ ಕುಟುಂಬಕ್ಕೂ ಸಹ ಕೃತಜ್ಞತೆ ಸಲ್ಲಿಸಿದರು.

ಹೃದಯ ಪಡೆದವರ ವಿವರಗಳು
ಆಂಧ್ರಪ್ರದೇಶದ ನೆಲ್ಲೂರಿನ 18 ವರ್ಷದ ವ್ಯಕ್ತಿಗೆ ಹೃದಯ ಕಸಿ ಶಸ್ತ್ರಚಿಕಿತ್ಸೆಮಾಡಲಾಗಿದೆ. ಇವರು ಕಂಜೆನೈಟಲ್ ಹಾರ್ಟ್ ಡಿಸೀಸ್ (ಜನ್ಮಜಾತ ಹೃದಯ ರೋಗ) ಸಮಸ್ಯೆಯಿಂದ ಬಳಲುತ್ತಿದ್ದರು. ಹಾಗು ಇವರಿಗೆ ಮರುಕಳಿಸುವ ಹೃದಯ ವೈಫಲ್ಯ (ಹಾರ್ಟ್ ಫೇಲ್ಯೂರ್), ಹೊಂದಿದ್ದು, ಇದಕ್ಕಾಗಿ ಇವರು ಡಾ. ಭಗೀರಥ್ ರಘುರಾಮ್ , ಹಿರಿಯ ಕನ್ಸಲ್ಟಂಟ್, ಇಂಟರ್ವೆನ್ಷಲ್ ಹಾಗು ಹೃದಯ ಕಸಿ ನಿರ್ದೆಶಕರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ಹೃದಯಕ್ಕಾಗಿ ಜೀವಸಾಥರ್Àಕತೆಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದರು. ಇಂದು ಇವರಿಗೆ ಸರಿಹೊಂದುವ ಹೃದಯ ದೊರಕಿದೆ.

ಹೃದಯ ಪಡೆದ ಪ್ರಕ್ರಿಯೆ
ರವಿಯವರ ಹೃದಯವನ್ನು ಹೊತ್ತು ಹೊರಟ ಆಂಬುಲೆನ್ಸ್ ಬಿ.ಜಿ.ಎಸ್. ಗ್ಲೋಬಲ್ ನಿಂದ 38 ಕಿ.ಮೀ ದೂರದಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ನೈಸ್ ರಸ್ತೆ ಮುಖಾಂತರ 28 ನಿಮಿಷ 40 ಸೆಕೆಂಡುಗಳಲ್ಲಿ ಬಂದು ತಲುಪಿತು.
ಎಸ್. ರಾಮಯ್ಯದಲ್ಲಿರುವ ನಾರಾಯಣ ಹಾರ್ಟ್ ಸೆಂಟರ್ನ ಡಾ. ರವಿ ಶಂಕರ್ ಶೆಟ್ಟಿಯವರು, ಹಿರಿಯ ಕಾರ್ಡಿಯೋವ್ಯಾಸ್ಕುಲರ್ ಹಾಗು ಹೃದಯ ಕಸಿ ಶಸ್ತ್ರಚಿಕಿತ್ಸಕರವರು , ಹೃದಯ ಪಡೆಯುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಹೃದಯ ಕಸಿ ಪ್ರಕ್ರಿಯೆಯ ವೈದ್ಯರ ತಂಡ
ಹೃದಯ ಕಸಿ ಪ್ರಕ್ರಿಯೆಯಲ್ಲಿ, ನಾರಾಯಣ ಹೆಲ್ತ್ ಸಿಟಿಯ ಹಿರಿಯ ಕಾರ್ಡಿಯೋತೋರಾಸಿಕ್, ವಾಸ್ಕುಲರ್ ಮತ್ತು ಕಸಿ ಶಸ್ತ್ರಚಿಕಿತ್ಸಕರಾದ ಡಾ. ಜೂಲಿಯೆಸ್ ಪುನ್ನೆನ್, ಡಾ. ವರುಣ್ ಶೆಟ್ಟಿ, ಕನ್ಸಲ್ಟಂಟ್, ಕಾರ್ಡಿಯೋತೋರಾಸಿಕ್, ವಾಸ್ಕುಲರ್ ಮತ್ತು ಕಸಿ ಶಸ್ತ್ರಚಿಕಿತ್ಸಕರು, ಡಾ. ರಘು, ಕನ್ಸಲ್ಟಂಟ್, ಕಾರ್ಡಿಯೋತೋರಾಸಿಕ್, ವಾಸ್ಕುಲರ್ ಮತ್ತು ಕಸಿ ಶಸ್ತ್ರಚಿಕಿತ್ಸಕರು ಹಾಗು, ಅರಿವಳಿಕೆ ತಜ್ಞರು ಮತ್ತು ಐ.ಸಿ.ಯು. ತಂಡದವರಿಂದ ಈ ಹೃದಯ ಕಸಿಯನ್ನು ಪೂರ್ಣಗೊಳಿಸಿದರು. ಇದು ನಾರಾಯಣ ಇನ್ಸ್ಟಿಟ್ಯುಟ್ ಆಫ್ ಕಾರ್ಡಿಯಾಕ್ ಸೈನ್ಸ್ ನಲ್ಲಿ 28ನೇ ಹೃದಯ ಕಸಿಯಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications