Heavy Rain: ಮಳೆ ಅಬ್ಬರ ಹಿನ್ನೆಲೆ ಶಾಲೆ & ಕಾಲೇಜುಗಳಿಗೆ ದಿಢೀರ್ ರಜೆ...
ಮಳೆ... ಮಳೆ... ಮಳೆ... ಭಾರಿ ಭರ್ಜರಿ ಮಳೆ... ಹೀಗೆ ಕರ್ನಾಟಕದಲ್ಲಿ ಈ ವರ್ಷದಲ್ಲಿ ಮಳೆಗೆ ಬ್ರೇಕ್ ಇಲ್ಲ ಅಂತಾ ಕಾಣುತ್ತದೆ. ಯಾಕಂದ್ರೆ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಹಾಗೇ ಭಾರಿ ಮಳೆ ಕಾರಣಕ್ಕೆ ಜನರು ಕೂಡ ರೊಚ್ಚಿಗೇಳುವ ವಾತಾವರಣ ಇದೀಗ ನಿರ್ಮಾಣ ಆಗಿದೆ. ಮುಂಗಾರು ಮಳೆ, ಹಿಂಗಾರು ಮಳೆ ನಂತರ ಚಳಿಯಲ್ಲೂ ಮಳೆ ಸುರಿಯುತ್ತಿದೆ. ಈ ರೀತಿ ಅಕಾಲಿಕ ಮಳೆಯಿಂದಾಗಿ ಭಾರಿ ದೊಡ್ಡ ದೊಡ್ಡ ಅವಾಂತರ ಸೃಷ್ಟಿಯಾಗುತ್ತಿದೆ. ಈ ಎಲ್ಲಾ ಗೊಂದಲಗಳ ನಡುವೆ, ಮಳೆ ಅಬ್ಬರ ಹಿನ್ನೆಲೆ ಶಾಲೆ & ಕಾಲೇಜುಗಳಿಗೆ ದಿಢೀರ್ ರಜೆ....
ಮಳೆ ಬಂದು ರೈತರ ಬೆಳೆ ಎಲ್ಲಾ ನಾಶವಾಗಿ ಹೋಗುತ್ತಿದೆ, ಅಲ್ಲದೆ ಭಾರಿ ಮಳೆ ಕಾರಣಕ್ಕೆ ಜನರಿಗೆ ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಹಲವು ರೀತಿಯ ಆರೋಗ್ಯ ಸಮಸ್ಯೆ ಕೂಡ ಈ ಸಮಯದಲ್ಲಿ ಆವರಿಸುತ್ತಿವೆ. ಇದರಿಂದಾಗಿ ಜನರು ಕೂಡ ತೀವ್ರ ಆಕ್ರೋಶಗೊಂಡ ರೀತಿಯೇ ಕಂಡು ಬರುತ್ತಿದೆ. ಹೀಗೆ ಮಳೆ ಯಾವಾಗ ನಿಲ್ಲುತ್ತೆ? ಅಂತಾ ಜನ ಪ್ರಶ್ನೆ ಕೇಳುತ್ತಿದ್ದಾರೆ. ಇದೇ ಸಮಯದಲ್ಲಿ ಮತ್ತೊಂದು ವಿಚಾರವು ಕೂಡ ಸಂಚಲನ ಸೃಷ್ಟಿ ಮಾಡಿದ್ದು, ಮುಂದಿನ 48 ಗಂಟೆಗಳ ಕಾಲ ಭಾರಿ ಭರ್ಜರಿ ಮಳೆ ಗ್ಯಾರಂಟಿ ಆಗಿದೆ!

ಮಳೆ... ಮಳೆ... ಯಾವ ಯಾವ ಜಿಲ್ಲೆಗೆ?
ಮೊದಲೇ ಹೇಳಿದಂತೆ ಬಂಗಾಳ ಕೊಲ್ಲಿ ಸಮುದ್ರ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ನಿರ್ಮಾಣ ಆಗಿ ಚಂಡಮಾರುತ ಜನ್ಮ ಪಡೆದು ಮಳೆ ಬರಲು ಶುರುವಾಗಿದೆ. ಈಗ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಿದೆ. ಸೋಮವಾರ ಮುಗಿದರೂ ಮಳೆಯ ಅಬ್ಬರ ಕಡಿಮೆ ಆಗುವ ಲಕ್ಷಣ ಕಾಣುತ್ತಿಲ್ಲ. ಇದು ದಕ್ಷಿಣ ಕರ್ನಾಟಕ ಭಾಗದ ಜನರಿಗೆ ಭಯ ಹುಟ್ಟಿಸಿದೆ.
ಇದೀಗ ಹವಾಮಾನ ಇಲಾಖೆ ನೀಡಿರುವ ಮಳೆ ಎಚ್ಚರಿಕೆ ಪ್ರಕಾರ, ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ & ಚಿಕ್ಕಬಳ್ಳಾಪುರ ಸೇರಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ವಾರ್ನಿಂಗ್ ಕೊಡಲಾಗಿದೆ. ಇದೇ ಕಾರಣಕ್ಕೆ ಭಾರಿ ಮುನ್ನೆಚ್ಚರಿಕೆ ವಹಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ಪರಿಸ್ಥಿತಿ ಕೈಮೀರುವ ಆತಂಕ ಕಾಡುತ್ತಿದೆ. ಹಾಗಾದ್ರೆ, ಈಗ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದು ಎಲ್ಲಿ?
ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ!
ಮಳೆ ಅಬ್ಬರ ಹೆಚ್ಚಾದ ಕಾರಣಕ್ಕೆ ತಮಿಳುನಾಡು, ಕೇರಳ ಸೇರಿ ಅಕ್ಕಪಕ್ಕದ ರಾಜ್ಯಗಳಲ್ಲಿ ಭಾರಿ ಕಟ್ಟೆಚ್ಚರವನ್ನು ವಹಿಸಲಾಗಿದೆ. ಇದರ ಜೊತೆ ಅಲ್ಲಿನ ಶಾಲಾ & ಕಾಲೇಜುಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ. ಅದರಲ್ಲೂ ತಮಿಳುನಾಡು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ದೊಡ್ಡ ಅವಾಂತರ ಸಂಭವಿಸುವ ಆತಂಕ ಇದ್ದು, ಹೀಗಾಗಿ ಬಹುತೇಕ ಜಿಲ್ಲೆಗಳಲ್ಲಿ ಈಗ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಈಗ ಮಳೆ ಸುರಿದರೂ, ದೊಡ್ಡ ವಿನಾಶ ಸೃಷ್ಟಿ ಮಾಡುವ ಆತಂಕ ಇಲ್ಲ.
-
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ












Click it and Unblock the Notifications