ಬೆಂಗಳೂರಲ್ಲಿ ಗುಡುಗು ಸಹಿತ ಮಳೆ ಆರ್ಭಟ, ಜನರ ಪರದಾಟ
ಬೆಂಗಳೂರು, ನವೆಂಬರ್ 15; ಬೆಂಗಳೂರು ನಗರದಲ್ಲಿ ಸಂಜೆಯ ಬಳಿಕ ಗುಡುಗು ಸಹಿತ ಮಳೆಯು ಆರ್ಭಟಿಸುತ್ತಿದೆ. ಈಗಾಗಲೇ ನಗರದ ಜನರು ಮಳೆ ಬಿಟ್ಟರೆ ಸಾಕು ಎಂದು ಅಂದಾಜಿಸುತ್ತಿದ್ದು, ಸಂಜೆ ಮಳೆಯ ಮತ್ತೆ ಮಳೆ ಮುಂದುವರೆಯುವ ಸೂಚನೆ ನೀಡಿದೆ.
ಸೋಮವಾರ ಸಂಜೆ 4 ಗಂಟೆಯ ಬಳಿಕ ನಗರದ ವಿವಿಧ ಬಡಾವಣೆಗಳಲ್ಲಿ ಮಳೆ ಆರಂಭವಾಯಿತು. ಗಡುಗಿನ ಆರ್ಭಟವೂ ಜೋರಾಗಿತ್ತು. ಸಂಜೆ 8 ಗಂಟೆಯ ತನಕ ಧಾರಾಕಾರ ಮಳೆ ಸುರಿದಿದ್ದು, ಜನರು ಪರದಾಡುವಂತಾಯಿತು.
ಭಾನುವಾರ ಬೆಳಗ್ಗೆಯಿಂದ ನಗರಲ್ಲಿ ಮಳೆ ಕೊಂಚ ಬಿಡುವು ನೀಡಿತ್ತು. ಸೋಮವಾರ ಬೆಳಗ್ಗೆ ನೀಲಿ ಆಕಾಶ, ಸೂರ್ಯನ ಬೆಳಕು ಕಂಡ ಜನರು ಅಂತೂ ಮಳೆ ಹೋಯಿತು ಎಂದು ನಿಟ್ಟುಸಿರು ಬಿಟ್ಟಿದ್ದರು. ಆದರೆ ಸಂಜೆ ಮತ್ತೆ ಭಾರೀ ಮಳೆಯಾಗಿದೆ.

ಜಯನಗರ, ಹನುಂತನಗರ, ವಿದ್ಯಾಪೀಠ ವೃತ್ತ, ಕತ್ರಿಗುಪ್ಪೆ, ರಾಮಕೃಷ್ಣ ಆಶ್ರಮ ಸರ್ಕಲ್, ಶಾಂತಿನಗರ, ಮೆಜೆಸ್ಟಿಕ್, ಲಾಲ್ ಭಾಗ್, ಕೆ. ಆರ್. ಸರ್ಕಲ್, ರಿಚ್ಮಂಡ್ ಸರ್ಕಲ್, ವಿಲ್ಸನ್ ಗಾರ್ಡನ್, ಕೋರಮಂಗಲ, ಜೆ. ಪಿ. ನಗರ ಸೇರಿದಂತೆ ವಿವಿಧ ಕಡೆ ಮಳೆಯು ಆರ್ಭಟಿಸಿದೆ.
ಸಂಜೆ ವೇಳೆಗೆ ಮಳೆ ಆರಂಭವಾಗಿದ್ದು ಬಳಿಕ ಆರ್ಭಟ ಜೋರಾಯಿತು. ಹಲವು ರಸ್ತೆಗಳು ಜಲಾವೃತಗೊಂಡವು. ಕಚೇರಿಗಳಿಂದ ಮನೆಗೆ ತೆರಳುವ ವಾಹನ ಸವಾರರು ಮಳೆಯಿಂದಾಗಿ ಪರದಾಡಿದರು. ಅಂಗಡಿಗಳ ಕೆಳಗೆ, ಫ್ಲೈ ಓವರ್ ಕೆಳಗೆ ನಿಂತು ಮಳೆಯಿಂದ ಆಶ್ರಯ ಪಡೆದರು.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ನಗರದಲ್ಲಿ ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಕಳೆದ ವಾರ ತಾಪಮಾನ 17 ರಿಂದ 18 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿತ್ತು. ಆಗಾಗ ತುಂತುರು ಮಳೆಯಾಗುತ್ತಿತ್ತು.
ಶನಿವಾರದಿಂದ ಮಳೆ ಕೊಂಚ ಬಿಡುವು ನೀಡಿತ್ತು. ಆದರೆ ಶೀತಗಾಳಿ, ಮೋಡ ಕವಿದ ವಾತಾವರಣ ಮುಂದುವರೆದಿತ್ತು. ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ನವೆಂಬರ್ 17ರ ತನಕ ಮಳೆ ಮುಂದುವರೆಯಲಿದೆ ಎಂದು ಹೇಳಿದೆ.
ಬೆಂಗಳೂರು ನಗರದಲ್ಲಿ ಇನ್ನೂ 48 ಗಂಟೆಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಜೊತೆಗೆ ಮೋಡ ಕವಿದ, ಶೀತಗಾಳಿಯ ವಾತಾವರಣವೂ ಮುಂದುವರೆಯಲಿದೆ. ಇದರಿಂದಾಗಿ ಬೆಂಗಳೂರಿನ ಜನರು ಎರಡು ದಿನ ಮಳೆಯನ್ನು ಸಹಿಸಿಕೊಳ್ಳಬೇಕಿದೆ.
ನವೆಂಬರ್ 15 ರಿಂದ 17ರ ತನಕ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಂಡಮಾನ್ ಭಾಗದಲ್ಲಿ ಉಂಟಾಗಿದ್ದ ವಾಯಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ. ಬಳಿಕ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಮಳೆಯಿಂದ ಹಾನಿ ಉಂಟಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಿದ್ದರು.
ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳಲ್ಲಿ ಮತ್ತೆ ಗುಂಡಿಗಳು ಬಾಯಿ ತೆರೆದಿವೆ. ಕೆಲವು ದಿನಗಳ ಹಿಂದೆ ಬಿಬಿಎಂಪಿಯಿಂದ ಗುಂಡಿಗಳನ್ನು ಮುಚ್ಚಲಾಗಿತ್ತು. ಈಗ ಪುನಃ ಗುಂಡಿಗಳು ಕಾಣಿಸಿಕೊಳ್ಳುತ್ತಿವೆ.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Bengaluru Rain: ಸುಡುವ ಬಿಸಿಲಿನಿಂದ ಕಂಗೆಟ್ಟಿದ್ದ ಬೆಂಗಳೂರಿನ ಹಲವೆಡೆ ತುಂತುರು ಮಳೆ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
IPL 2026: ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಕ್ಕೆ ಮಳೆ ಭೀತಿ ಇದ್ಯಾ? ಹವಾಮಾನ ಇಲಾಖೆ ಹೇಳೋದೇನು -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications