ಬೆಂಗಳೂರು: ಧಾರಾಕಾರ ಮಳೆಗೆ 4 ಬಲಿ; ಶಾಲಾ ಕಟ್ಟಡ ಕುಸಿತ
ಸೆಪ್ಟೆಂಬರ್ 8ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ನಾಲ್ವರು ಬಲಿ. ಮಿನರ್ವ ಸರ್ಕಲ್ ಬಳಿ ಮರ ಬಿದ್ದು ಮೂವರು ಹಾಗೂ ಶಿವಾನಂದ ಸರ್ಕಲ್ ಬಳಿ ಒಬ್ಬ ಕೊಚ್ಚಿ ಹೋಗಿ ಮೃತ.
Recommended Video

ಬೆಂಗಳೂರು, ಸೆಪ್ಟೆಂಬರ್ 8: ನಗರದಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆಯು ನಾಲ್ವರನ್ನು ಬಲಿಪಡೆದುಕೊಂಡಿದೆ.
ಶಿವಾನಂದ ಸರ್ಕಲ್ ಬಳಿ ಯುವಕನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರೆ, ಮಿನರ್ವ ಸರ್ಕಲ್ ಬಳಿ ಮರವೊಂದು ಕಾರೊಂದರ ಮೇಲೆ ಉರುಳಿಬಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು, ಟೌನ್ ಹಾಲಿನ ಬಳಿಯಿರುವ ಸರ್ಕಾರಿ ಶಾಲೆಯ ಕಟ್ಟಡವೊಂದು ಕುಸಿದುಬಿದ್ದಿದ್ದು, ಅದರ ಸುತ್ತಲೂ ನಿಲ್ಲಿಸಿದ್ದ ಅನೇಕ ಕಾರುಗಳು ಜಖಂ ಆಗಿವೆ ಎಂದು ವರದಿಯಾಗಿದೆ.

ಶುಕ್ರವಾರ ಸಂಜೆ ವೇಳೆ ಸುರಿದ ಧಾರಾಕಾರ ಮಳೆಯು ಸಂಜೆ ಸುಮಾರಿಗೆ 5 ಗಂಟೆ ಸುಮಾರಿಗೆ ಒಂದು ಬ್ರೇಕ್ ತೆಗೆದುಕೊಂಡು ಆನಂತರ ಭರ್ಜರಿಯಾಗಿ ಸುರಿಯಿತು. ಜಯನಗರ, ಮೆಜೆಸ್ಟಿಕ್, ಶಿವಾಜಿ ನಗರ, ಮೈಸೂರು ರಸ್ತೆ ಹೀಗೆ ಎಲ್ಲಾ ದಿಕ್ಕುಗಳ ಪ್ರದೇಶಗಳಲ್ಲೂ ಭಾರೀ ಮಳೆ ಆಗಿದ್ದರಿಂದ ಹಲವಾರು ಕಡೆ ಮರಗಳು, ವಿದ್ಯುತ್ ಕಂಬಗಳು ಉರುಳಿ ಜನರಿಗೆ ಭಾರೀ ತೊಂದರೆಯಾಯಿತು.
ನಗರದ ರೇಸ್ ಕೋರ್ಸ್ ಹತ್ತಿರವಿರುವ ಶಿವಾನಂದ ಸರ್ಕಲ್ ಬಳಿಯಿರುವ ರೈಲ್ವೇ ಅಂಡರ್ ಪಾಸ್ ಬಳಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದ್ದರಿಂದಾಗಿ ಫುಟ್ ಪಾತ್ ಮೇಲೆ ಸಾಗುತ್ತಿದ್ದ 18 ವರ್ಷದ ವರುಣ್ ಎಂಬ ಯುವಕ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಆತ ಕಾಲಿಟ್ಟು ಸಾಗುತ್ತಿದ್ದ ಫುಟ್ ಪಾತ್ ದೊಡ್ಡ ಚರಂಡಿಯ ಮೇಲೆ ಹಾಕಿದ್ದ ಸ್ಲಾಬ್ ಗಳಾಗಿದ್ದವು. ಈ ಸ್ಲಾಬ್ ಗಳಲ್ಲಿನ ಒಂದು ಸ್ಲಾಬ್ ಮೇಲೆ ಕಾಲಿಟ್ಟಾಗ ಆ ಸ್ಲಾಬ್ ಕುಸಿದು ಆತ ಡ್ರೈನೇಜ್ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆಂದು ಹೇಳಲಾಗಿದೆ.
ಮಿನರ್ವ ಸರ್ಕಲ್ ನಲ್ಲಿ ಕೆಎ 02, ಎನ್ 0771 ಸಂಖ್ಯೆ ಮಾರುತಿ ಎಸ್ಟೀಮ್ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದಿದ್ದರಿಂದ ದಂಪತಿ ಸೇರಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಭಾರತಿ, ಜಗದೀಶ್ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಮರ ಬಿದ್ದ ಮೇಲೆ ಹಿಂಬದಿ ಸೀಟ್ ನಲ್ಲಿದ್ದ ಇಬ್ಬರನ್ನು ಸ್ಥಳೀಯರು ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ. ಆದರೆ, ಮರದ ಬಿದ್ದ ರಭಸಕ್ಕೆ ಮುಂದಿನ ಸೀಟ್ ಗಳಲ್ಲಿ ಕುಳಿತಿದ್ದ ದಂಪತಿ ಹಾಗೂ ಹಿಂಬದಿ ಸೀಟ್ ನಲ್ಲಿದ್ದ ಅವರ ಸಂಬಂಧಿಯೊಬ್ಬ ಸಾವನ್ನಪ್ಪಿದ್ದಾರೆ. ಈ ಶವಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಸುದ್ದಿ ತಿಳಿದ ನಂತರ, ಮಿನರ್ವ ಸರ್ಕಲ್ ಗೆ ಬಂದಿದ್ದ ಮೇಯರ್ ಪದ್ಮಾವತಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
Bengaluru: Three people died after a tree fell on a car on Dispensary Road following heavy rains in the city pic.twitter.com/mbA5B7vW2K
— ANI (@ANI) September 8, 2017
ಇತ್ತ, ಟೌನ್ ಹಾಲ್ ಬಳಿಯಿರುವ ಎಸ್.ಪಿ. ರೋಡ್ ಹತ್ತಿರದ ಸರ್ಕಾರಿ ಶಾಲೆಯೊಂದರ ಕಟ್ಟಡ ರಾತ್ರಿ 11:40ರ ಸುಮಾರಿಗೆ ಕುಸಿದುಬಿದ್ದಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲವಾದರೂ, ಆ ಕಟ್ಟಡದ ಸುತ್ತ ನಿಲ್ಲಿಸಲಾಗಿದ್ದ ಕಾರುಗಳು ಜಖಂಗೊಂಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ











Click it and Unblock the Notifications