ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರೀ ಮಳೆ-ಬಿರುಗಾಳಿ, ವಿದ್ಯುತ್ ಕಡಿತ
ಬೆಂಗಳೂರಿನ ವಿವಿಧೆಡೆ ಬುಧವಾರ ರಾತ್ರಿ ಭಾರೀ ಮಳೆಯಾಗಿ ಬಿರುಗಾಳಿ ಬೀಸಿದೆ. ಈ ಕಾರಣಕ್ಕೆ ಹಲವೆಡೆ ವಿದ್ಯುತ್ ಕಡಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯಕ್ಕೆ ಕೂಡ ಮಳೆ ಅಡ್ಡಿಯಾಯಿತು
ಬೆಂಗಳೂರು, ಮೇ 17: ಬೆಂಗಳೂರಿನ ವಿವಿಧೆಡೆ ಬುಧವಾರ ರಾತ್ರಿ ಭಾರೀ ಮಳೆಯಾಗಿದೆ. ಮಳೆಗೆ ಮರಗಳು ನೆಲಕ್ಕೆ ಉರುಳಿವೆ. ಹೆಬ್ಬಾಳ, ಕೆ. ಆರ್.ಪುರಂ, ಏರ್ ಪೋರ್ಟ್ ರಸ್ತೆ ಸೇರಿದ ಹಾಗೆ ಹಲವೆಡೆ ಸಕತ್ ಮಳೆಯಾಗಿದೆ. ಹೂಡೀಯಲ್ಲಿ ಹೈ ವೊಲ್ಟೇಜ್ ಟ್ರಾನ್ಸ್ ಫಾರ್ಮರ್ ಸಿಡಿದಿದೆ. ಇನ್ನು ಏರ್ ಪೋರ್ಟ್ ರಸ್ತೆಯಲ್ಲಿ ಮರ ಉರುಳಿ ಸಂಚಾರ ಅಸ್ತವ್ಯಸ್ತವಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲೇ ವಿದ್ಯುತ್ ಸಂಪರ್ಕ ಇಲ್ಲದಂತಾಗಿದೆ. ಬೆಂಗಳೂರಿನ ಬಹುತೇಕ ಬಡಾವಣೆಗಳಲ್ಲಿ ವಿದ್ಯುತ್ ಕಡಿತವಾಗಿದೆ. ನಾಗವಾರ, ಸದಾಶಿವನಗರ, ಹೆಬ್ಬಾಳ ಸೇರಿದಂತೆ ವಿವಿಧೆಡೆ ಬಿರುಗಾಳಿ ಭಾರೀ ಪ್ರಮಾಣದಲ್ಲಿ ಬೀಸಿದೆ. ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬರುವಂಥವರ ಪಾಡು ಹೇಳತೀರದಾಗಿದೆ.[ಮೇ 29ರಂದು ಕರ್ನಾಟಕಕ್ಕೆ ಮುಂಗಾರಿನ ಆಗಮನ]

ಮೈಸೂರು ರಸ್ತೆ, ವಿಮಾನ ನಿಲ್ದಾಣ ರಸ್ತೆ, ಬಾಣಸವಾಡಿ, ಸದಾಶಿವ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಕಡೆ ವಾಹನ ಸಂಚಾರ ಸಮಸ್ಯೆಯಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಲ್ಲಲು ಹೆದರುವಂಥ ಸ್ಠಿತಿ ಏರ್ಪಟ್ಟಿದೆ. ಅದರಲ್ಲೂ ನಾಗವಾರ, ಹೆಬ್ಬಾಳ ಹಾಗೂ ಕೆಆರ್ ಪುರಂ ಕಡೆ ಗಾಳಿ-ಮಳೆ ಮತ್ತೂ ಹೆಚ್ಚಾಗಿದೆ. ವಾಹನ ಸವಾರರೇ ಎಚ್ಚರ, ವಿದ್ಯುತ್ ಸಂಪರ್ಕ ಕಡೀತವಾಗಿದೆ, ಭಾರೀ ಬಿರುಗಾಳಿ ಬೀಸುತ್ತಿದೆ.
-
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications