ಬೆಂಗಳೂರಲ್ಲಿ ಭರ್ಜರಿ ಮಳೆ, ಇನ್ನೂ ಮೂರು ದಿನ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 15: ಬೆಳಗಿನಿಂದ ಮೋಡದ ವಾತಾವರಣವಿದ್ದ ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮಳೆ ಪ್ರಾರಂಭವಾಗಿದ್ದು ನಗರದ ಬಹುತೇಕ ಕಡೆ ಮಳೆ ಸುರಿಯುತ್ತಿದೆ.
ಜಯನಗರ, ಕೆಂಗೇರಿ, ಮಲ್ಲೇಶ್ವರ, ರಾಜಾಜಿನಗರಗಳಲ್ಲಿ ಜೋರು ಮಳೆ ಸುರಿಯುತ್ತಿದ್ದು, ರಸ್ತೆಗಳಲ್ಲಿ ನೀರು ತುಂಬಿದೆ. ಮಳೆಯಿಂದಾಗಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಜೋರು ಗಾಳಿ ಸಹಿತ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿವೆ.

ಹವಾಮಾನ ಇಲಾಖೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡ ಕವದ ವಾತಾರವಣ ಇರಲಿದ್ದು, ಲಘುವಾಗಿ ಮಳೆ ಆಗಲಿದೆ. ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಮಂಗೂರು, ಉಡುಪಿ, ಕಾರವಾರಗಳು ಪ್ರವಾಹ ಪರಿಸ್ಥಿತಿ ಎದುರಿಸುತ್ತಿವೆ.












Click it and Unblock the Notifications