ಹವಾಮಾನ ತಜ್ಞರ ಮಾನ ಉಳಿಸಿದ ಮಳೆರಾಯ!
ಬೆಂಗಳೂರು, ಸೆಪ್ಟೆಂಬರ್ 08 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರೀ ಮಳೆ ಆರಂಭವಾಗಿದೆ. ಜಯನಗರ, ಬಸವನಗುಡಿ, ಶಿವಾಜಿನಗರ, ಮಲ್ಲೇಶ್ವರಂ, ಜೆ.ಪಿ.ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯ ಕಾರಣ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.
'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ' ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದರು.
ಕೆರೆಯ ಹಾವನು ಕೆರೆಗೆ ಚೆಲ್ಲಿದ ಲಾಲ್ ಬಾಗ್
@AddlCPTraffic @DCPTrWestBCP heavy Rain in and Arround Mejastic # waterlogging @khode underbridge binnymill bridge traffic moving very slow
— ACP Traffic West (@ACPTrWest) September 8, 2017
* ಶಿವಾನಂದ ಸರ್ಕಲ್ ಬಳಿ ಒಂದು ಭಾಗದ ರಸ್ತೆ ಜಲಾವೃತವಾಗಿದೆ. ರಿಚ್ಮಂಡ್ ಸರ್ಕಲ್ ಕಾಫಿ ಡೇ ಬಳಿ ರಸ್ತೆಯಲ್ಲಿ ನೀರು ತುಂಬಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿದೆ.
* ಮೆಜೆಸ್ಟಿಕ್ ಸುತ್ತ-ಮುತ್ತ ಭಾರೀ ಮಳೆಯಾಗುತ್ತಿದ್ದು, ಶೇಷಾದ್ರಿಪುರಂ ಅಂಡರ್ಪಾಸ್ ಬಳಿ ರಸ್ತೆಗಳು ಜಲಾವೃತವಾಗಿದೆ.