ಕರ್ನಾಟಕದಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು, ಸೆ.20 : ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯಕ್ಕೆ ಕಾಲಿಟ್ಟಿದ್ದಾನೆ. ಬುಧವಾರ ರಾತ್ರಿಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದೆ. ಆದ್ದರಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಮುಂಗಾರಿನ ಪ್ರಭಾವ ಮೂರುದಿನಗಳ ವರೆಗೆ ಮುಂದುವರೆಯಲಿದ್ದು, ಹೆಚ್ಚಿನ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

ಇಲಾಖೆಯ ಮುನ್ಸೂಚನೆಯಂತೆ ನೈಋತ್ಯ ಮುಂಗಾರಿನ ಪ್ರಭಾವದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸುರಿಯದಿದ್ದರೂ, ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಉತ್ತರ ಕರ್ನಾಟಕ ಮತ್ತು ಕರಾವಳಿ ತೀರ ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ. ಕರಾವಳಿ ತೀರದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಪ್ರಮಾಣದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗಿದೆ. ಭಾಗಮಂಡಲ, ಆಗುಂಬೆಯಲ್ಲಿ 11 ಸೆಂ.ಮೀ., ಹಾಸನ, ಕೊಟ್ಟಿಗೆಹಾರ ಮತ್ತು ಸಕಲೇಶಪುರದಲ್ಲಿ 9 ಸೆಂ.ಮೀ., ಗುಲ್ಬರ್ಗಾ ಮತ್ತು ಮಧುಗಿರಿಯಲ್ಲಿ 7 ಸೆಂ.ಮೀ.ನಷ್ಟು ಮಳೆ ಸುರಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಶುಕ್ರವಾರ ಬೆಳಗ್ಗೆ ಮತ್ತೆ ಆಗಮಿಸಿದ್ದಾನೆ. ಶುಕ್ರವಾರ ಬೆಳಗ್ಗೆ ನಗರದಲ್ಲಿ ತುಂತುರು ಮಳೆಯಾಗಿದೆ. ನಗರದ ತುಂಬಾ ಮೋಡ ಕವಿದ ವಾತಾವರಣ ವಿದ್ದು, ಯಾವುದೇ ಕ್ಷಣದಲ್ಲಿ ಮಳೆ ಯಾಗುವ ಸಾಧ್ಯತೆ ಇದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ












Click it and Unblock the Notifications