ಕರ್ನಾಟಕದಲ್ಲಿ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು, ಸೆ.20 : ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ರಾಜ್ಯಕ್ಕೆ ಕಾಲಿಟ್ಟಿದ್ದಾನೆ. ಬುಧವಾರ ರಾತ್ರಿಯಿಂದಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ರಾಜ್ಯದಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದೆ. ಆದ್ದರಿಂದ ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಮುಂಗಾರಿನ ಪ್ರಭಾವ ಮೂರುದಿನಗಳ ವರೆಗೆ ಮುಂದುವರೆಯಲಿದ್ದು, ಹೆಚ್ಚಿನ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.

ಇಲಾಖೆಯ ಮುನ್ಸೂಚನೆಯಂತೆ ನೈಋತ್ಯ ಮುಂಗಾರಿನ ಪ್ರಭಾವದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಸುರಿಯದಿದ್ದರೂ, ಮುಂದಿನ ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.
ಉತ್ತರ ಕರ್ನಾಟಕ ಮತ್ತು ಕರಾವಳಿ ತೀರ ಪ್ರದೇಶಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ. ಕರಾವಳಿ ತೀರದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಪ್ರಮಾಣದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಇಲಾಖೆ ಮುನ್ಸೂಚನೆ ನೀಡಿದೆ.
ಗುರುವಾರವೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆಯಾಗಿದೆ. ಭಾಗಮಂಡಲ, ಆಗುಂಬೆಯಲ್ಲಿ 11 ಸೆಂ.ಮೀ., ಹಾಸನ, ಕೊಟ್ಟಿಗೆಹಾರ ಮತ್ತು ಸಕಲೇಶಪುರದಲ್ಲಿ 9 ಸೆಂ.ಮೀ., ಗುಲ್ಬರ್ಗಾ ಮತ್ತು ಮಧುಗಿರಿಯಲ್ಲಿ 7 ಸೆಂ.ಮೀ.ನಷ್ಟು ಮಳೆ ಸುರಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಶುಕ್ರವಾರ ಬೆಳಗ್ಗೆ ಮತ್ತೆ ಆಗಮಿಸಿದ್ದಾನೆ. ಶುಕ್ರವಾರ ಬೆಳಗ್ಗೆ ನಗರದಲ್ಲಿ ತುಂತುರು ಮಳೆಯಾಗಿದೆ. ನಗರದ ತುಂಬಾ ಮೋಡ ಕವಿದ ವಾತಾವರಣ ವಿದ್ದು, ಯಾವುದೇ ಕ್ಷಣದಲ್ಲಿ ಮಳೆ ಯಾಗುವ ಸಾಧ್ಯತೆ ಇದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications