ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ, ವಾಹನ ಸವಾರರು ಹೈರಾಣ

|
Google Oneindia Kannada News

ಬೆಂಗಳೂರು, ಮೇ 17: ಉದ್ಯಾನ ನಗರಿ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಿಸುತ್ತಿದೆ. ಗುಡುಗು, ಸಿಡಿಲಿನಿಂದ ಕೂಡಿದ ಮಳೆ ಸುಮಾರು ಒಂದು ಗಂಟೆಯಿಂದ ಸುರಿಯುತ್ತಿದೆ. ಇನ್ನೂ ಮೂರು ದಿನಗಳ ಕಾಲ ನಗರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಗರದಲ್ಲಿ ಮಳೆಯಾಗಿತ್ತು. ಬಳಿಕ ಮಳೆ ಕೊಂಚ ಬಿಡುವು ನೀಡಿತ್ತು. 8 ಗಂಟೆ ಬಳಿಕ ಮತ್ತೆ ನಗರದಲ್ಲಿ ಮಳೆ ಆರಂಭವಾಗಿದೆ. ಇದರ ಜೊತೆಗೆ ಗುಡುಗು, ಸಿಡಿಲಿನ ಅಬ್ಬರವೂ ಜೋರಾಗಿದೆ.

ಕೇರಳದಲ್ಲಿ ಭಾರೀ ಮಳೆ: 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ಕೇರಳದಲ್ಲಿ ಭಾರೀ ಮಳೆ: 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಭಾರೀ ಮಳೆಯ ಹೊಡೆತಕ್ಕೆ ರಾಜಧಾನಿಯ ಜನರು ಹೈರಾಣಾದರು. ರಸ್ತೆಗಳು ಜಲಾವೃತಗೊಂಡಿತು. ಸಿಡಿಲಿನ ಅಬ್ಬರಕ್ಕೆ ಬೆಚ್ಚಿಬಿದ್ದ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕಿದರು.

ಅವಧಿಗೂ ಮುನ್ನವೇ ಮುಂಗಾರು ಮಳೆ ಆಗಮನ,ಈ ರಾಜ್ಯಗಳಿಗೆ ಎಚ್ಚರಿಕೆಅವಧಿಗೂ ಮುನ್ನವೇ ಮುಂಗಾರು ಮಳೆ ಆಗಮನ,ಈ ರಾಜ್ಯಗಳಿಗೆ ಎಚ್ಚರಿಕೆ

ಮೆಜೆಸ್ಟಿಕ್, ಕೋರಮಂಗಲ, ಜಯನಗರ, ಹನುಮಂತನಗರ, ಜೆಪಿ ನಗರ, ರಾಜಾಜಿನಗರ, ಮಲ್ಲೇಶ್ವರಂ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ; ಭಾರೀ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆದಕ್ಷಿಣ ಕನ್ನಡ; ಭಾರೀ ಮಳೆ ಎಚ್ಚರಿಕೆ, ರೆಡ್ ಅಲರ್ಟ್ ಘೋಷಣೆ

Heavy Rain with Thunder showers in Bengaluru City

Recommended Video

ಪ್ರವಾಹದಿಂದ ತತ್ತರಿಸಿದ ಅಸ್ಸಾಂ:ಸಂಕಷ್ಟದಲ್ಲಿ ಸಿಲುಕಿದ 4 ಲಕ್ಷಕ್ಕೂ ಹೆಚ್ಚು ಜನ | Oneindia Kannada

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರದಿಂದ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲಿ ಮೂರು ದಿನ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

English summary
Heavy Rain with Thunder showers in Bengaluru City, Meteorological Department Alert another four days rain fall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X