ಪೀಣ್ಯ ಫ್ಲೈ ಓವರ್ ಬಂದ್; ವಾಹನ ಸವಾರರಿಗೆ ಸಂಚಾರ ದಟ್ಟಣೆ ಬಿಸಿ
ಬೆಂಗಳೂರು, ಡಿಸೆಂಬರ್ 26; ಬೆಂಗಳೂರು ನಗರದ ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಎಲಿವೇಟೆಡ್ ಹೈವೇಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಇದರಿಂದಾಗಿ ವಾಹನ ಸವಾರರಿಗೆ ಸಂಚಾರ ದಟ್ಟಣೆ ಬಿಸಿ ತಟ್ಟಿದೆ.
ಬೆಂಗಳೂರು ನಗರ ಸಂಚಾರಿ ಪೊಲೀಸರು ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆಯನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು-ತುಮಕೂರು ರಸ್ತೆ ಹೆಚ್ಚು ವಾಹನ ಸಂಚಾರ ದಟ್ಟಣೆಯಿಂದ ಕೂಡಿದ್ದು, ಫ್ಲೈ ಓವರ್ ಬಂದ್ ಆಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ.
ಪೀಣ್ಯ ಎಲಿವೇಟೆಡ್ ಹೈವೇ (ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ)ಯ ಪಿಲ್ಲರ್ ನಂ 102 ಮತ್ತು 103ರ ಮಧ್ಯೆ 8ನೇ ಮೈಲಿಯ ಸ್ವಾತಿ ಪೆಟ್ರೋಲ್ ಬಂಕ್ ಬಳಿ ಫ್ಲೈ ಓವರ್ಗೆ ಅಳವಡಿಸಿರುವ ಕೇಬಲ್ ತುರ್ತಾಗಿ ದುರಸ್ಥಿ ಮಾಡಬೇಕಿದೆ.

ಭಾನುವಾರದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಧಿಕಾರಿಗಳು ದುರಸ್ಥಿ ಕಾರ್ಯ ಕೈಗೊಂಡಿದ್ದಾರೆ. ಆದ್ದರಿಂದ ಒಂದು ವಾರದ ಮಟ್ಟಿಗೆ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧಿಸಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
ಒಂದು ವಾರದ ಮಟ್ಟಿಗೆ ಪೀಣ್ಯ ಫ್ಲೈ ಓವರ್ ಮೇಲೆ ವಾಹನಗಳ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಇದರಿಂದಾಗಿ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಸಂಚಾರ ಪೊಲೀಸರು ಬದಲಿ ಮಾರ್ಗವನ್ನು ಬಳಕೆ ಮಾಡುವಂತೆ ಈಗಾಗಲೇ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
* ತುಮಕೂರು ಕಡೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶಿಸುವ ವಾಹನಗಳು ಮಾದಾವರದ ಬಳಿ ಬಲತಿರುವು ಪಡೆದು ನೈಸ್ ರಸ್ತೆಯ ಮೂಲಕ ಬೆಂಗಳೂರು ನಗರಕ್ಕೆ ಪ್ರವೇಶಿಸಬಹುದಾಗಿದೆ.
* ಬೆಂಗಳೂರು ನಗರದ ಕಡೆಯಿಂದ ತುಮಕೂರು ರಸ್ತೆಯ ಮುಖಾಂತರ ಹೊರ ಹೋಗುವ ವಾಹನಗಳು ಗೊರಗುಂಟೆಪಾಳ್ಯದ ಸಿ.ಎಂ.ಟಿ.ಐ ಜಂಕ್ಷನ್ನಲ್ಲಿ ಎಡತಿರುವು ಪಡೆದು ರಿಂಗ್ ರಸ್ತೆ ಮೂಲಕ ಸುಮನಹಳ್ಳಿ, ಮಾಗಡಿ ರಸ್ತೆ ಕಡೆ ಸಂಚರಿಸಿ ನೈಸ್ ರಸ್ತೆ ಪ್ರವೇಶಿಸಿ ಬೆಂಗಳೂರಿನಿಂದ ಹೊರ ಹೋಗಬಹುದಾಗಿದೆ.
ಶನಿವಾರ ಸಂಜೆ ರಸ್ತೆ ನಿರ್ವಹಣೆ ಮಾಡುತ್ತಿದ್ದಾಗ ಸ್ಪ್ಯಾಬ್ ಬಿಗಿಗೊಳಿಸುವ ಕೇಬಲ್ ಸಡಿಲವಾಗಿರುವುದು ಪತ್ತೆಯಾಗಿತ್ತು. ತಕ್ಷಣವೇ ಫ್ಲೈ ಓವರ್ ಮೇಲೆ ಎರಡೂ ಕಡೆಯ ಸಂಚಾರ ಸ್ಥಗಿತಗೊಳಿಸಲಾಯಿತು ಮತ್ತು ಬೆಂಗಳೂರು ನಗರ ಸಂಚಾರಿ ಪೊಲೀಸರು ಒಂದು ವಾರಗಳ ಕಾಲ ವಾಹನ ಸಂಚಾರ ನಿಷೇಧಿಸಿದರು.
10 ವರ್ಷದ ಹಿಂದೆ ನಿರ್ಮಾಣ ಮಾಡಲಾದ ಈ ಫ್ಲೈ ಓವರ್ಗೆ ಡಾ. ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ ಎಂದು ಹೆಸರಿಡಲಾಗಿದೆ. ಈ ಫ್ಲೈ ಓವರ್ನಲ್ಲಿ ಒಟ್ಟು 116 ಪಿಲ್ಲರ್ಗಳಿವೆ. 102 ಮತ್ತು 103ನೇ ಪಿಲ್ಲರ್ ನಡುವೆ ಕೇಬಲ್ ಸಡಿಲಗೊಂಡಿದೆ.
ಫ್ಲೆ ಓವರ್ ಒಂದು ವಾರದ ಮಟ್ಟಿಗೆ ಬಂದ್ ಆಗಿರುವುದರಿಂದ ವಾಹನ ಸವಾರರು ಕೆಳ ರಸ್ತೆಯಲ್ಲಿ ಸಂಚಾರ ನಡೆಸುವುದು ಅನಿವಾರ್ಯವಾಗಿದೆ. ಇದರಿಂದಾಗಿ ಬೆಂಗಳೂರು-ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications