ಹೆಬ್ಬಗೋಡಿ ಪೊಲೀಸರ ದೌರ್ಜನ್ಯ ವೈರಲ್ ವಿಡಿಯೋ: ಸುಮೊಟೋ ಕೇಸು ದಾಖಲು
ಬೆಂಗಳೂರು, ಸೆ. 29: ಅಪರಾಧ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದ ಯುವಕನನ್ನು ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಪೇದೆಯೊಬ್ಬ ದೊಣ್ಣೆಯಿಂದ ಹಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಮಾತ್ರವಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸರ ಮಾನ ಬೀದಿಯಲ್ಲಿ ಹರಾಜು ಹಾಕಿದೆ. ಪೊಲೀಸರ ದೌರ್ಜನ್ಯ ಸಂಬಂಧ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದೆ.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಅಪ್ರಾಪ್ತನಂತೆ ಕಾಣುವ ಯುವಕನ ಬಟ್ಟೆ ಬಿಚ್ಚಿಸಿ ಕಿಟಕಿ ಮುಂದೆ ನಿಲ್ಲಿಸಲಾಗಿದೆ. ಆ ಬಳಿಕ ದೊಣ್ಣೆಯಿಂದ ಕುಂಡಿ ಮೇಲೆ ವಿಕೃತವಾಗಿ ಹಲ್ಲೆ ಮಾಡುವ ಪೊಲೀಸ್ ಸಿಬ್ಬಂದಿ, ಆ ಬಳಿಕ ಕೂರಿಸಿ ಕಾಲಿನ ಪಾದಕ್ಕೆ ವಿಕೃತವಾಗಿ ಬಾರಿಸಿದ್ದಾರೆ. ಆತ ಪೊಲೀಸರ ಕಾಲಿಗೆ ಬಿದ್ದು ಬೇಡಿಕೊಂಡರೂ ಪೊಲೀಸ್ ಪೇದೆ ತನ್ನ ದರ್ಪ ಮುಂದುವರೆಸಿದ್ದಾನೆ.
ಯಾವುದೇ ಆರೋಪಿಯನ್ನು ವಶಕ್ಕೆ ಪಡೆದರೆ ವಿಚಾರಣೆಗೆ ಅದರದ್ದೇ ಆದ ನೀತಿ ನಿಯಮಗಳಿವೆ. ಪೊಲೀಸರು ಹಲ್ಲೆ ಮಾಡುವ ವಿಡಿಯೋ ನೋಡಿದರೆ ಎಂಥವರಿಗೂ ಪೊಲೀಸರ ಮೇಲೆ ಸಿಟ್ಟು ಮೂಡುತ್ತದೆ. ಪರಿ ಪರಿ ಬೇಡಿಕೊಂಡರೂ ದೊಣ್ಣೆಯಿಂದ ಹಲ್ಲೆ ಮಾಡಿ ವಿಕೃತಿ ಮೆರೆದಿರುವ ವಿಡಿಯೋ ನೋಡುಗರನ್ನೇ ಬೆಚ್ಚಿ ಬೀಳಿಸುತ್ತದೆ. ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದೇವಾ ಎಂಬ ಪ್ರಶ್ನೆ ಕಾಡುತ್ತದೆ. ಇನ್ನು ಈ ದೃಶ್ಯವನ್ನು ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿದು ಬಿಟ್ಟಿದ್ದಾರೆ. ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣರೆಡ್ಡಿ ಪಕ್ಷದ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪೊಲೀಸರ ಕೃತ್ಯವನ್ನು ಖಂಡಿಸಿದ್ದಾರೆ.

ಸ್ವಯಂ ಪ್ರೇರಿತ ದೂರು:
ವಿಚಾರಣೆ ನೆಪದಲ್ಲಿ ಯುವಕನನ್ನು ಕರೆತಂದು ವಿಕೃತವಾಗಿ ಹಲ್ಲೆ ಮಾಡುವ ವಿಡಿಯೋ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಮಾನವ ಹಕ್ಕು ಅಯೋಗದ ಸದಸ್ಯ ಆರ್.ಕೆ. ದತ್ತಾ ಅವರು, ''ಹೆಬ್ಬಗೋಡಿ ಪೊಲೀಸರು ಹಲ್ಲೆ ಮಾಡುವ ಈ ಕೃತ್ಯದ ಬಗ್ಗೆ ರಾಜ್ಯ ಮಾನವ ಹಕ್ಕು ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು'' ಎಂದು 'ಒನ್ ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಡಾ. ಕೋನಾ ವಂಶಿ ಕೃಷ್ಣ, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ಮಾಡಿರುವ ವಿಡಿಯೋ ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಪ್ರಾಥಮಿಕ ವಿಚಾರಣೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Recommended Video
ರವಿಕೃಷ್ಣಾರೆಡ್ಡಿ ಕಿಡಿ:
"ನಾವು ತಾಲಿಬಾನ್ ಆಡಳಿತದಲ್ಲಿದ್ದೇವಾ ? ಪ್ರಜಾಪ್ರಭುತ್ವ ರಾಜ್ಯದಲ್ಲಿ ಇದ್ದೇವಾ ಎಂಬುದೇ ನನಗೆ ಅನುಮಾನ ಕಾಡುತ್ತಿದೆ. ಯಾವುದೋ ಅಪರಾಧ ಪ್ರಕರಣದಲ್ಲಿ ವಿಚಾರಣೆಗೆ ಕರೆತಂದಿರುವ, ಅಪ್ರಾಪ್ತನಂತೆ ಕಾಣುವ ಬಾಲಕನಿಗೆ ಹಿಂದೆ ಮುಂದೆ ನೋಡದೇ ದೊಣ್ಣೆಯಲ್ಲಿ ಹಲ್ಲೆ ಮಾಡಿದ್ದಾರೆ. ಪೊಲೀಸ್ ಇಲಾಖೆ ತಲೆ ತಗ್ಗಿಸುವ ಘಟನೆಯಿದು. ವಿಚಾರಣೆ ನೆಪದಲ್ಲಿ ಸಾರ್ವಜನಿಕವಾಗಿ ಹಲ್ಲೆ ಮಾಡುವುದು ಮಾನವ ಹಕ್ಕುಗಳ ಉಲ್ಲಂಘನೆ. ರಾಜ್ಯದಲ್ಲಿ ಮಾನವ ಹಕ್ಕು ಆಯೋಗ ಸತ್ತು ಹೋಗಿದೆ. ಈ ಘಟನೆ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ದೂರು ನೀಡಲಿದೆ. ರಾಜ್ಯ ಮಾನವ ಹಕ್ಕು ಆಯೋಗ ಮತ್ತು ಬೆಂಗಳೂರು ಗ್ರಾಮಾಂತರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮ ಜರುಗಿಸಬೇಕು" ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications