Namma Metro: ಹೆಬ್ಬಾಳ ಭೂಮಿ ವಿವಾದ: ಈ ಭಾಗದ ಮೆಟ್ರೋ- ಮಲ್ಟಿ ಸಾರಿಗೆ ಯೋಜನೆಗಳಿಗೆ ತೊಡಕು
ಬೆಂಗಳೂರು, ಮಾರ್ಚ್ 03: ಬೆಂಗಳೂರಿನ ಪ್ರಮುಖ ಜಂಕ್ಷನ್ ಆಗಿರುವ ಹೆಬ್ಬಾಳದಲ್ಲಿ 'ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ'ಗೆ (KIADB) ಸೇರಿದ ಭೂಮಿ ನೀಡುವಲ್ಲಿ ಯಾವುದೇ ಅಂತಿಮ ನಿರ್ಧಾರಗಳು ಪ್ರಕಟವಾಗಿಲ್ಲ. ಈ ಕಾರಣದಿಂದ ಹೆಬ್ಬಾಳದಲ್ಲಿ ಮೆಟ್ರೋ ಯೋಜನೆ ಸೇರಿ ಬಹುಮಾದರಿ ಸಾರಿಗೆ ಯೋಜನೆಗಳು ಜಾರಿಯಾಗುವುದು ಮತ್ತಷ್ಟು ವಿಳಂಭವಾಗುವ ಸಾಧ್ಯತೆ ಇದೆ ಎಂದು BMRCL ಅಧಿಕಾರಿಗಳು ಹೇಳಿದ್ದಾರೆ.
ಹೆಬ್ಬಾಳದಿಂದ ಸರ್ಜಾರಪುರ ವರೆಗೆ ನಮ್ಮ ಮೆಟ್ರೋ ಕೆಂಪು ಮಾರ್ಗ ಯೋಜನೆಯೊಂದೆ ಇಲ್ಲ. ಹೆಬ್ಬಾಳದಲ್ಲಿ ಬಹುಮಾದರಿ ಸಾರಿಗೆ ಕೇಂದ್ರ ನಿರ್ಮಿಸಲು ಪ್ಲಾನ್ ನಡೆಯುತ್ತಿದೆ. ಇಂಟರ್ಚೇಂಜ್ ನಿಲ್ದಾಣಗಳು, ಬಸ್ ನಿಲ್ದಾಣ, ರೈಲ್ವೆ ಉಪನಗರ ಸಾರಿಗೆಯು ಇದೇ ಮಾರ್ಗದಲ್ಲಿ ಹಾದು ಹೋಗಲಿದೆ ಎಂಬುದು ಸದ್ಯದ ಪ್ಲಾನ್.

ಬೆಂಗಳೂರಿನ ಮೆಟ್ರೋ ಯೋಜನೆಗೆ ಮೇಲಿಂದ ಮೇಲೆ ತೊಡಕುಗಳು ಬರುತ್ತಿವೆ. ಅದರಲ್ಲೂ ವರ್ಷಗಳಿಂದಲೂ ಮೆಟ್ರೋ ಅಧಿಕಾರಿಗಳು ಹೆಬ್ಬಾಳದಲ್ಲಿ ವಿವಾದಾತ್ಮಕ 45 ಎಕರೆ ಭೂಮಿ ಪಡೆಯಲು ಪಯತ್ನ ನಡೆಸಿದ್ದಾರೆ. ಈ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಪ್ರಮುಖ ಸಭೆ ನಡೆಸಿದ್ದಾರೆ. ಆದರೆ ಸಭೆ ಬಳಿಕ ಯಾವುದೇ ನೀರ್ಣಾಯಕ ನಿರ್ಧಾರಗಳು, ಜಾಗ ಹಸ್ತಾಂತರ ಕುರಿತು ಬಂದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು 'ಇಂಗ್ಲಿಷ್ ಜಾಗರಣ' ವರದಿ ಮಾಡಿದೆ.
ಹೆಬ್ಬಾಳದ 45 ಎಕರೆ ಭೂಮಿ ಹಿನ್ನೆಲೆ
ಹೆಬ್ಬಾಳದಲ್ಲಿನ ಉದ್ದೇಶಿತ ಜಾಗ ಸಿಗದ ಕಾರಣ ಮೆಟ್ರೋ ಸಂಬಂಧಿ ಯೋಜನೆಗಳು ವಿಳಂಬವಾಗುವ ಸಾಧ್ಯತೆ ಇದೆ. ವರ್ಷಗಳ ಹಿಂದೆ ಇಲ್ಲಿನ 45 ಎಕರೆ ಭೂಮಿಯನ್ನು ಪ್ರವಾಸೋದ್ಯಮ ಉದ್ದೇಶದಿಂದಾಗಿ ಲೇಕ್ವ್ಯೂ ಪ್ರವಾಸೋದ್ಯಮ ನಿಗಮಕ್ಕೆ ನೀಡಲಾಗಿತ್ತು. ಆದರೆ ಭೂಮಿ ನೀಡಿ 20 ವರ್ಷ ಕಳೆದರೂ ಆಸ್ತಿ ಮಾಲೀಕರಿಗೆ ಪರಿಹಾರ ನೀಡದ ಕಾರಣ ಈ ಭೂಮಿಯನ್ನು ಸರ್ಕಾರ ತನ್ನ ವಶಕ್ಕೆ ಪಡೆಯಿತು. ಅದೀಗ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ವಶದಲ್ಲಿದೆ.
ಸರ್ಕಾರದಿಂದ ಸಕಾರಾತ್ಮಕ ನಿರ್ಧಾರ ಕೈಗೊಂಡಿಲ್ಲ!
ಈ ಭೂಮಿಯನ್ನು ಸರ್ಕಾರ BMRCL ಯೋಜನೆಗೆ ನೀಡುವುದಾಗಿ ಹೇಳುತ್ತಲೇ ಇದೆ ಆದರೆ ಇದೂವರೆಗೂ ಸಕಾರಾತ್ಮಕ ಒಂದೂ ನಿರ್ಧಾರವು ಪ್ರಟಕವಾಗಿಲ್ಲ. ಈ ಹಿಂದೆ ಪರಿಹಾರ ನೀಡುವಂತೆ ಬಿಎಂಆರ್ಸಿಎಲ್ಗೆ ಎಂಬಿ ಪಾಟೀಲರು ಮಾಖಿಕವಾಗಿ ತಿಳಿಸಿದ್ದರು. ಯಾವುದೇ ದಾಖಲೆ ಪತ್ರಗಳ ವ್ಯವಹಾರ ನಡೆಯದ ಕಾರಣ ನಮ್ಮ ಮೆಟ್ರೋ ಅಧಿಕಾರಿಗಳು ಮಧ್ಯ ಪ್ರವೇಶಿಸಿಲ್ಲ. ಸರ್ಕಾರ ಭೂಮಿ ನೀಡಿದರೆ, ನಾವು ಪರಿಹಾರ ನೀಡಲು ಸಿದ್ಧ ಎಂದು ತಿಳಿಸಿದೆ. ಕೆಐಎಡಿಬಿ ಜಾಗವನ್ನು ನಮ್ಮ ಮೆಟ್ರೋಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಪಿಸಿ ಮೋಹನ್ ಸೇರಿದಂತೆ ಅನೇಕ ಮಂದಿ ಸಿಎಂಗೆ ಪತ್ರ ಬರೆದಿದ್ದಾರೆ. BMRCL ಸಹ ಅನೇಕ ಭಾರಿ ಮನವಿ ಮಾಡಿದೆ.

ಭೂಮಿ ಹಸ್ತಾಂತರಕ್ಕೆ ಏನು ಸಮಸ್ಯೆ?
ನಮ್ಮ ಮೆಟ್ರೋ ಹೆಬ್ಬಾಳದಲ್ಲಿ ಬೃಹತ್ ಡಿಪೋ ನಿರ್ಮಿಸಲು ಪ್ಲಾನ್ ಮಾಡಿಕೊಂಡಿದೆ. ಈಗಾಗಲೇ ಈ ಕೆಂಪು ಮೆಟ್ರೋ ಮಾರ್ಗಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಡಿಪಿಆರ್ ರೆಡಿಯಾಗುತ್ತಿದೆ. ಮಲ್ಟಿ-ಮೋಡಲ್ ಹಬ್, ಸಾರಿಗೆ ಮೂಲ ಸೌಕರ್ಯ ಇಲ್ಲಿ ತಲೆ ಎತ್ತಲಿವೆ. ಆದರೆ ಭೂಮಿ ಸಿಗದಿರುವುದು ಯೋಜನೆಗಳಿಗೆ ಹಿನ್ನಡೆ ಅಥವಾ ಮತ್ತಷ್ಟು ವಿಳಂಬಕ್ಕೆ ಕಾರಣವಾಗಬಹದು ಎಂದು ಕಳೆದ ಶನಿವಾರ (ಫೆ.01) ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳು ಹಾಗೂ ಡಿಸಿಎಂ ಜೊತೆಗಿನ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಈ ಜಾಗ ಹಸ್ತಾಂತರಕ್ಕೆ ಇರುವ ಒಂದಷ್ಟು ಕಾನೂನು ಸವಾಲುಗಳನ್ನು ಅವರು ವಿವರಿಸಿದರು. ಜೊತೆಗೆ ಮುಂದಿನ ದಿನಗಳಲ್ಲಿ ಸರ್ಕಾರ ಭೂಮಿ ನೀಡಲು ಬದ್ಧ ಎಂದಷ್ಟೇ ಹೇಳಿದರು. ಇದೆಲ್ಲ ನೋಡಿದ ಮೇಲೆ ಬಿಎಂಆರ್ಸಿಎಲ್ಗೆ ಈ ಜಾಗ ಸಿಗುವುದು ಮತ್ತಷ್ಟು ವಿಳಂಬವಾಗಬಹುದು ಎಂದು ಅಭಿಪ್ರಾಯ ಹೊರ ಹಾಕಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications