ಹೆಬ್ಬಾಳ ಫ್ಲೈಓವರ್ ಮೇಲೆ ವಾಹನ ಸಂಚಾರ ಬಂದ್: ಎಷ್ಟು ದಿನ, ಯಾಕೆ?
ಬೆಂಗಳೂರಿನ ಪ್ರವೇಶದ್ವಾರ ಎಂದೇ ಕರೆಸಿಕೊಂಡಿರುವ ಹೆಬ್ಬಾಳ ಫ್ಲೈಓವರ್ ಮೂಲಕ ಸಂಚರಿಸುವವರಿಗೆ ಕಹಿಸುದ್ದಿಯೊಂದು ಹೊರಬಿದ್ದಿದೆ. ಈಗಾಗಲೇ ಟ್ರಾಫಿಕ್ ಜಾಮ್ಗೆ ಹೆಸರುವಾಸಿಯಾಗಿರುವ ಈ ಫ್ಲೈಓವರ್ ಬಂದ್ ಆಗಲಿದೆ. ಈ ಭಾಗದಲ್ಲಿ ಟ್ರಾಫಿಕ್ ತಗ್ಗಿಸಲು ಈ ಫ್ಲೈಓವರ್ ಬಳಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರ ನಡುವೆ ಫ್ಲೈಓವರ್ ಬಂದ್ ಮಾಡಲು ಮುಂದಾಗಿದ್ದಾರೆ. ಯಾವ ಕಾರಣಕ್ಕೆ ಹೆಬ್ಬಾಳ ಮೇಲ್ಸೇತುವೆ ಬಂದ್ ಮಾಡಲಾಗುತ್ತಿದೆ ಎಂಬ ಮಾಹಿತಿ ಇಲ್ಲಿದೆ.
ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ. ಏರ್ಪೋರ್ಟ್ ರಸ್ತೆಯ ಎಸ್ಟೀಮ್ ಮಾಲ್ನಿಂದ ಶುರುವಾಗಿ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗವು ಬಂದ್ ಆಗಲಿದೆ. ಈ ಅವಧಿಯಲ್ಲಿ ವಾಹನಗಳು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ. ಹೆಬ್ಬಾಳ ಫ್ಲೈಓವರ್ ಮೇ 17ರಿಂದ ಮೇ 21ರವರೆಗೆ ಬಂದ್ ಆಗಲಿದೆ. ಆದರೆ ದಿನವಿಡೀ ಫ್ಲೈಓವರ್ ಬಂದ್ ಮಾಡುವುದಿಲ್ಲ. ಬದಲಾಗಿ ಪ್ರತಿದಿನ ಕೇವಲ ಮೂರು ಗಂಟೆ ಮಾತ್ರವೇ ಬಂದ್ ಮಾಡುವುದಾಗಿ ತಿಳಿಸಿದ್ದಾರೆ. ಈ ಐದೂ ದಿನ ರಾತ್ರಿ 12 ಗಂಟೆಯಿಂದ 3 ಗಂಟೆಯವರೆಗೆ ಫ್ಲೈಓವರ್ ಬಂದ್ ಆಗಲಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವತಿಯಿಂದ ಕೆ.ಆರ್.ಪುರ ಕಡೆಯಿಂದ ಮೇಖ್ರಿ ಸರ್ಕಲ್ವರೆಗಿನ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ಕ್ಯಾಂಪ್ಗಳನ್ನು ನಿರ್ಮಿಸುವ ಕಾಮಗಾರಿ ಶುರುವಾಗಿದ್ದು, ಈ ಕಾಮಗಾರಿಯ ಭಾಗವಾಗಿ ರೈಲ್ವೆ ಹಳಿಗಳ ಮೇಲೆ 33.5 ಮೀಟರ್ ಉದ್ದದ 7 ಉಕ್ಕಿನ ಗರ್ಡರ್ಗಳನ್ನು ಅಳವಡಿಸುವ ಕಾಮಗಾರಿ ಶನಿವಾರದಿಂದಲೇ ಶುರುವಾಗಿ ಮೇ 21ರವರೆಗೆ ನಡೆಯಲಿದೆ. ಈ ಕಾರಣಕ್ಕೆ ರಾತ್ರಿ ವೇಳೆ ಮೂರು ಗಂಟೆಗಳ ಕಾಲ ಫ್ಲೈಓವರ್ ಬಂದ್ ಮಾಡಲಿದ್ದಾರೆ.
ಕಾಮಗಾರಿ ನಡೆಯುವ ಕಾರಣಕ್ಕೆ ಪ್ರತಿದಿನ ಮೂರು ಗಂಟೆಗಳ ಕಾಲ, ಮಧ್ಯರಾತ್ರಿ 12ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ಈ ಫ್ಲೈಓವರ್ ಮೇಲೆ ವಾಹನಗಳ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ವಾಹನ ಸವಾರರು ಈ ಸಮಯದಲ್ಲಿ ಪರ್ಯಾಯ ಮಾರ್ಗಗಳನ್ನು ಅನುಸರಿಸುವಂತೆ ಸೂಚಿಸಿದ್ದಾರೆ. ಹೆಬ್ಬಾಳ ಮೇಲ್ಸೇತುವೆಯ ಎಸ್ಟೀಮ್ ಮಾಲ್ನಿಂದ ಮೇಖ್ರಿ ಸರ್ಕಲ್ ಕಡೆಗೆ ಹೋಗುವವರು ರಾತ್ರಿ 12ರಿಂದ ಬೆಳಿಗ್ಗೆ 3 ಗಂಟೆವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಬಾಕಿ ಸಮಯದಲ್ಲಿ ಎಂದಿನಂತೆ ವಾಹನಗಳ ಸಂಚಾರಕ್ಕೆ ಅವಕಾಶ ಇರುತ್ತದೆ.
ಪರ್ಯಾಯ ಮಾರ್ಗಗಳು
ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್ ಮಾಲ್ನಲ್ಲಿರುವ ಸರ್ವಿಸ್ ರಸ್ತೆ ಮೂಲಕ ಹೆಬ್ಬಾಳ ಸರ್ಕಲ್ ಮೂಲಕ ತುಮಕೂರು ಮಾರ್ಗವಾಗಿ ಚಲಿಸಿ ಮುಂದೆ ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು, ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ಸರ್ಕಲ್ ಅನ್ನು ತಲುಪಬಹುದು ಎಂದು ಸೂಚನೆ ನೀಡಿದೆ. ರಾತ್ರಿ ವೇಳೆ ವಾಹನ ಸಂಚಾರ ಕಡಿಮೆ ಇರುವುದರಿಂದ ಈ ಅವಧಿಯಲ್ಲೇ ಕಾಮಗಾರಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಹಾಗಾಗಿ ವಾಹನ ಸವಾರರು ಸಹಕರಿಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications