Bengaluru: ಹೆಬ್ಬಾಳ ಜಂಕ್ಷನ್ ಕಡೆ 4 ತಿಂಗಳು ಟ್ರಾಫಿಕ್ ಸಮಸ್ಯೆ
ಬೆಂಗಳೂರು, ಮಾರ್ಚ್ 26: ಬೆಂಗಳೂರು ನಗರದ ವಾಹನ ಸವಾರರು, ಏರ್ಪೋರ್ಟ್ ಕಡೆ ಸಾಗುವ ವಾಹನ ಸವಾರರಿಗೆ ಮಾಹಿತಿ. ಇನ್ನು ಸುಮಾರು 4 ತಿಂಗಳ ಕಾಲ ಹೆಬ್ಬಾಳ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸವಾರರು ಮಾಹಿತಿ ತಿಳಿದು ಸಂಚಾರ ನಡೆಸುವುದು ಸೂಕ್ತ.
ಈ ಕುರಿತು ಮಂಗಳವಾರ ಹೆಬ್ಬಾಳ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಹೆಬ್ಬಾಳ ಫ್ಲೈ ಓವರ್ಗೆ ಎರಡು ಹೊಸ ಟ್ರ್ಯಾಕ್ಗಳನ್ನು ಸೇರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಉದ್ದೇಶಿಸಿದೆ.

ಕೆ. ಆರ್. ಪುರ ಲೂಪ್ ಮುಖ್ಯ ಟ್ರ್ಯಾಕ್ ಬಳಿ ಸೇರುವ ಎರಡು ಸ್ಕ್ಯಾನ್ಗಳನ್ನು ಕಿತ್ತು ಹಾಕಲಾಗುತ್ತದೆ. ಇದರಿಂದ ಕೆ. ಆರ್. ಪುರ ಲೂಪ್ನಲ್ಲಿ ಮುಂದಿನ 4 ತಿಂಗಳವರೆಗೆ ನಗರದ ಕಡೆಗೆ ಸಂಚಾರ ನಿಧಾನವಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಆದ್ದರಿಂದ ಕೆ. ಆರ್. ಪುರ ಕಡೆಯಿಂದ ನಗರದ ಕಡೆಗೆ ಬರುವ ವಾಹನ ಸವಾರರು ಪರ್ಯಾಯ ಮಾರ್ಗಗಳಾದ ಐಒಸಿ-ಮುಕುಂದ ಥಿಯೇಟರ್ ರಸ್ತೆ, ಲಿಂಗರಾಜಪುರಂ ಮೇಲ್ಸೇತುವೆ ಮಾರ್ಗ, ನಾಗವಾರ-ಟ್ಯಾನರಿ ರಸ್ತೆ ಮಾರ್ಗವಾಗಿ ನಗರ ಪ್ರವೇಶಿಸಲು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.
Advisory for commuters coming from KRpuram to hebbal flyover pic.twitter.com/lOzi9r3nKk
— ACP Traffic Northeast Bangalore (@acpnortheasttr) March 26, 2024
ಅದೇ ರೀತಿ ಹೆಗಡೆ ನಗರ-ಥಣಿಸಂದ್ರ ಕಡೆಯಿಂದ ಬರುವ ಜನರು ಜಿ.ಕೆ.ವಿ.ಕೆ-ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸುತ್ತಾರೆ. ವಾಹನ ಸವಾರರು ಸಂಚಾರಿ ಪೊಲೀಸರ ಜೊತೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಏನಿದು ಯೋಜನೆ?; ಹೆಬ್ಬಾಳ ಮೇಲ್ಸೇತುವೆ ಮೇಲೆ ವಾಹನ ಸಂಚಾರ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು, ಬಿಡಿಎ ಅಧಿಕಾರಿಗಳು ಹ ತಜ್ಞರ ಜೊತೆ ಹಲವು ಬಾರಿ ಚರ್ಚೆ ನಡೆಸಿದ್ದರು. ಆಗ ಫ್ಲೈ ಓವರ್ ವಿಸ್ತರಣೆಯ ಯೋಜನೆ ರೂಪಿಸಲಾಗಿತ್ತು.
ಮೇಲ್ಸೇತುವೆ ಮೇಲೆ ವಾಹನ ಸಂಚಾರ ನಿರ್ವಹಣೆ ಬಗ್ಗೆ ಅಧ್ಯಯನ ನಡೆಸಿದಾಗ ಕೆ. ಆರ್. ಪುರ ಲೂಪ್ ಮತ್ತು ಕ್ಯಾರೇಜ್ ಮಾರ್ಗದ ವಿಭಜಕದಲ್ಲಿ ಸಮಸ್ಯೆ ಇದೆ ಎಂದು ತಿಳಿದುಬಂದಿತ್ತು. ಮೇಲ್ಸೇತುವೆ ರಸ್ತೆಯನ್ನು ಮತ್ತೆ ತೆರೆಯಲು ಸಾಧ್ಯವಾದರೆ ಕೆ. ಆರ್. ಪುರ ಮಾರ್ಗದ (ಬೆಂಗಳೂರು ನಗರದ ಕಡೆ) ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು ಅಂದಾಜಿಸಲಾಗಿತ್ತು.
ಆಗ ತಜ್ಞರು ಸಹ ಇದರಿಂದಾಗಿ ಫ್ಲೈ ಓವರ್ ಮೇಲೆ ವಾಹನ ದಟ್ಟಣೆಯ ಒತ್ತಡ ಕಡಿಮೆಯಾಗಲಿದೆ ಎಂದು ಪೊಲೀಸರು ತಿಳಿಸಿದ್ದರು. ಈ ಪ್ರಸ್ತಾವನೆಗೆ ಬಿಡಿಎ ಅಧಿಕಾರಿಗಳು ಸಹ ಒಪ್ಪಿಗೆ ನೀಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications