ಬಿಬಿಎಂಪಿ ಮೇಯರ್ ಸ್ಥಾನಕ್ಕೆ ತೀವ್ರ ಲಾಬಿ
ಬೆಂಗಳೂರು, ಸೆ.2 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಪಟ್ಟಕ್ಕಾಗಿ ತೀವ್ರ ಲಾಬಿ ಆರಂಭವಾಗಿದೆ. ಸೆ.5ರಂದು ನೂತನ ಮೇಯರ್ ಆಯ್ಕೆಯಾಗಿ ಚುನಾವಣೆ ನಡೆಯಲಿದೆ.
ಸೋಮವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿಯೂ ಮೇಯರ್ ಆಯ್ಕೆ ಬಗ್ಗೆ ಚರ್ಚೆ ನಡೆಯಿತು. ಆದರೆ, ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಬಿಜೆಪಿ ಈ ಬಾರಿ ಯುವಕರಿಗೆ ಆದ್ಯತೆ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಜೆ.ಪಿ.ಪಾರ್ಕ್ ಬಿಬಿಎಂಪಿ ಸದಸ್ಯರಾದ ನಂಜುಡಪ್ಪ ಅವರ ಹೆಸರು ಮೇಯರ್ ಹುದ್ದೆಗೆ ಪ್ರಬಲವಾಗಿ ಕೇಳಿಬರುತ್ತಿದೆ. ಇವರು ಒಕ್ಕಲಿಗ ಜನಾಂಗಕ್ಕೆ ಸೇರಿದವರು ಎಂದು ಕೆಲವು ಬಿಬಿಎಂಪಿ ಸದಸ್ಯರು ಮತ್ತು ಶಾಸಕರು ಲಾಬಿ ಆರಂಭಿಸಿದ್ದಾರೆ. ಮೂಡಲಪಾಳ್ಯ ವಾರ್ಡ್ನ ಶಾಂತ ಕುಮಾರಿ ಅವರ ಹೆಸರು ಮೇಯರ್ ಪಟ್ಟಕ್ಕೆ ಕೇಳಿಬರುತ್ತಿದೆ. [ಸೆ.5ರಂದು ಬಿಬಿಎಂಪಿಗೆ ಹೊಸ ಮೇಯರ್]
ಬಿಬಿಎಂಪಿಯ ಮೇಯರ್ ಮತ್ತು ಉಪ ಮೇಯರ್ ಪಟ್ಟವನ್ನು ಈ ಬಾರಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿಡಲಾಗಿದ್ದು, ಎರಡು ಹುದ್ದೆಗಳಿಗೆ ಭಾರೀ ಲಾಬಿ ಆರಂಭವಾಗಿದೆ. ಹಾಲಿ ಮೇಯರ್ ಆಗಿರುವ ಕಟ್ಟೆ ಸತ್ಯನಾರಾಯಣ ಮತ್ತು ಉಪ ಮೇಯರ್ ಇಂದಿರಾ ಅವರ ಅವಧಿ ಸೆ.3ರಂದು ಕೊನೆಗೊಳ್ಳಲಿದೆ.
ಮಹಾನಗರ ಪಾಲಿಕೆಯ ಕೌನ್ಸಿಲ್ನ ಕೊನೆಯ ಅವಧಿ ಇದಾಗಿದ್ದು, 2015ರ ಏಪ್ರಿಲ್ನಲ್ಲಿ ಮತ್ತೆ ಪಾಲಿಕೆಗೆ ಚುನಾವಣೆ ನಡೆಯಲಿದೆ. ಆದ್ದರಿಂದ ಆಯ್ಕೆಯಾಗುವ ಮೇಯರ್ ಮತ್ತು ಉಪ ಮೇಯರ್ ಅಧಿಕಾರಾವಧಿ ಆರು ತಿಂಗಳಾಗಿರುತ್ತದೆ. [ಮೇಯರ್, ಉಪ ಮೇಯರ್ ಪಟ್ಟಕ್ಕೆ ಪೈಪೋಟಿ]
ಉಪ ಮೇಯರ್ ಹುದ್ದೆಯು ಸಹ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಮೇಯರ್ ಪಟ್ಟ ಕೈ ತಪ್ಪಿದರೂ ಉಪ ಮೇಯರ್ ಹುದ್ದೆ ಸಿಗಬಹುದು ಎಂದು ಸದಸ್ಯರು ಲಾಬಿ ಆರಂಭಿಸಿದ್ದಾರೆ. ಡಾ.ರಾಜ್ಕುಮಾರ್ ವಾರ್ಡ್ನ ಗಂಗಭೈರಯ್ಯ, ಬನಶಂಕರಿ ದೇವಸ್ಥಾನದ ಎ.ಎಚ್. ಬಸವರಾಜು, ವಿಜಯನಗರದ ಎಚ್.ರವೀಂದ್ರ ಮತ್ತು ಪಟ್ಟಾಭಿರಾಮನಗರದ ಸಿ.ಕೆ. ರಾಮಮೂರ್ತಿ ಅವರ ಹೆಸರುಗಳು ಮೇಯರ್ ರೇಸ್ನಲ್ಲಿ ಕೇಳಿಬರುತ್ತಿವೆ.
ಮೇಯರ್ ಪಟ್ಟಕ್ಕೆ ಪ್ರತಿ ಬಾರಿಯು ದಕ್ಷಿಣ ವಲಯದ ಸದಸ್ಯರನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ ಈ ಬಾರಿ ಬೇರೆ ವಲಯಗಳಿಗೆ ಆದ್ಯತೆ ನೀಡಬೇಕು ಎಂಬ ಮಾತು ಕೇಳಿಬರುತ್ತಿದೆ. ಮಂಗಳವಾರ ಅಥವ ಬುಧವಾರ ಮೇಯರ್ ಗೌನ್ ಧರಿಸುವವರು ಯಾರು? ಎಂಬ ಪ್ರಶ್ನೆಗೆ ಉತ್ತರ ದೊರೆಯಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications