ಕೆಐಎನಿಂದ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೆ ಸಂಚಾರ ಸುಲಭ!
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೆ ಸಂಚಾರ ನಡೆಸುವುದು ಈಗ ಮತ್ತಷ್ಟು ಸುಲಭವಾಗಿದೆ.
ಬೆಂಗಳೂರು, ಫೆಬ್ರವರಿ 05; ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೆ ಸಂಚಾರ ನಡೆಸುವುದು ಈಗ ಮತ್ತಷ್ಟು ಸರಳವಾಗಿದೆ. ಕೆಲವೇ ನಿಮಿಷಗಳಲ್ಲಿ ನೀವು ಐಟಿ ಹಬ್ ತಲುಪಬಹುದಾಗಿದೆ.
ವಿವಿಧ ಪ್ರದೇಶಗಳಿಗೆ ಹೆಲಿಕಾಪ್ಟರ್ ಸೇವೆ ನೀಡುವ ಬ್ಲೇಡ್ ಕರ್ನಾಟಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದದಿಂದ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೆ ಶೀಘ್ರದಲ್ಲೇ ಹೆಲಿಪಾಕ್ಟರ್ ಸೇವೆ ನೀಡಲಿದೆ.
ಬೆಂಗಳೂರು ನಗರದ ಐಟಿ ಹಬ್ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್. ವಿಮಾನ ನಿಲ್ದಾಣಕ್ಕೆ ಆಗಮಿಸುವ ಜನರು ಈ ಪ್ರದೇಶಕ್ಕೆ ಹೋಗಲು ತಾಸುಗಟ್ಟಲೇ ಸಂಚಾರ ನಡೆಸಬೇಕಾಗಿಲ್ಲ. ಹೆಲಿಕಾಪ್ಟರ್ ಮೂಲಕ ಸುಲಭವಾಗಿ ಸಂಚಾರ ನಡೆಸಬಹುದಾಗಿದೆ.

2023ರ ಜನವರಿಯಲ್ಲಿ ಕೆಐಎನಿಂದ 2 ಮಾರ್ಗದಲ್ಲಿ ಬ್ಲೇಡ್ ಸಂಸ್ಥೆ ಈಗಾಗಲೇ ಹೆಲಿಕಾಪ್ಟರ್ ಸೇವೆ ಆರಂಭಿಸಿದೆ. ವಿಮಾನ ನಿಲ್ದಾಣದಿಂದ ಹೊಸೂರು ಏರ್ಡ್ರೋಮ್ಗೆ ಈಗಾಗಲೇ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿದೆ.
ಬೆಂಗಳೂರು ವಿಮಾನ ನಿಲ್ದಾಣದ ತಮಿಳುನಾಡಿನ ಕೈಗಾರಿಕಾ ಹಬ್ ಹೊಸೂರು ತಲುಪಲು ರಸ್ತೆ ಮೂಲಕ ಸಾಗಿದರೆ 3 ಗಂಟೆಗಳು ಬೇಕು. ಪ್ರತಿ ಸೀಟಿಗೆ 6 ಸಾವಿರ ರೂ ನೀಡಿದರೆ 20 ನಿಮಿಷದಲ್ಲಿ ಹೆಲಿಕಾಪ್ಟರ್ ಮೂಲಕ ಸಾಗಬಹುದಾಗಿದೆ.
ಬ್ಲೇಡ್ ಕರ್ನಾಟಕ ಈಗಾಗಲೇ ಬೆಂಗಳೂರು-ಮೈಸೂರು, ಬೆಂಗಳೂರು-ಹಂಪಿಗೆ ಹೆಲಿಕಾಪ್ಟರ್ ಸೇವೆ ನೀಡುತ್ತಿದೆ. ಈಗ ವಿಮಾನ ನಿಲ್ದಾಣದಿಂದ ನಗರದ ಐಟಿ ಕಂಪನಿಗಳು ಹೆಚ್ಚಿರುವ ಎಲೆಕ್ಟ್ರಾನಿಕ್ ಸಿಟಿ, ವೈಟ್ಫೀಲ್ಡ್ಗೆ ಸಂಪರ್ಕ ನೀಡಲಿದೆ.

ಕಳೆದ ವರ್ಷ ಬ್ಲೇಡ್ ಕರ್ನಾಟಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು ನಗರದ ಹೃದಯ ಭಾಗದ ಹೆಚ್ಎಎಲ್ಗೆ ಹೆಲಿಕಾಪ್ಟರ್ ಸೇವೆ ಆರಂಭಿಸಿತ್ತು. ವಾರದಲ್ಲಿ 5 ದಿನ ಈ ಸೇವೆ ಲಭ್ಯವಿದೆ. ವಿಮಾನ ನಿಲ್ದಾಣದಿಂದ 15 ನಿಮಿಷದಲ್ಲಿ ಹೆಚ್ಎಎಲ್ ತಲುಪಬಹುದಾಗಿದೆ. ರಸ್ತೆ ಮಾರ್ಗದಲ್ಲಿ ಸಂಚಾರ ನಡೆಸಿದರೆ ಸುಮಾರು 2 ಗಂಟೆಗಳು ಬೇಕು.
ಈ ಮಾರ್ಗದಲ್ಲಿ ಬ್ಲೇಡ್ 5 ಸೀಟಿನ ಎರಡು ಹೆಲಿಕಾಪ್ಟರ್ ಓಡಿಸುತ್ತಿದೆ. 3250 ರೂ. ದರವಿದೆ. ಬೆಳಗ್ಗೆ 9 ಗಂಟೆಗೆ ಮೊದಲ ಹೆಲಿಕಾಪ್ಟರ್ ವಿಮಾನ ನಿಲ್ದಾಣದಿಂದ ಹೊರಡಲಿದೆ. ಹೆಚ್ಎಎಲ್ನಿಂದ 4.15ಕ್ಕೆ ಹೊರಡಲಿದೆ. ಈ ಹೆಲಿಕಾಪ್ಟರ್ನಲ್ಲಿ ಸಂಚಾರ ನಡೆಸುವ ಜನರು ಮಾನ್ಯತೆ ಪಡೆದ ಸರ್ಕಾರಿ ದಾಖಲೆ ತೋರಿಸಬೇಕು. 2 ವರ್ಷ ಒಳಗಿನ ಮಕ್ಕಳಿಗೆ ಟಿಕೆಟ್ ಅಗತ್ಯವಿಲ್ಲ.
ಹೆಲಿಕಾಪ್ಟರ್ನಲ್ಲಿ ಸಂಚಾರ ನಡೆಸುವವರು 10 ಕೆಜಿ ಲಗೇಜ್ ತೆಗೆದುಕೊಂಡು ಹೋಗಬಹುದು. ಒಂದು ಲ್ಯಾಪ್ಟಾಪ್ ತೆಗೆದುಕೊಂಡು ಹೋಗಬಹುದು. ಆದರೆ ಸಾಕು ಪ್ರಾಣಿಗಳನ್ನು ಕರೆತರುವಂತಿಲ್ಲ.
ಡಿಜಿಸಿಎ ಅನುಮತಿ ಪಡೆದುಕೊಂಡು ಬ್ಲೇಡ್ ದೇಶದ ವಿವಿಧ ನಗರದಲ್ಲಿ ಇಂತಹ ಸೇವೆ ನೀಡುತ್ತಿದೆ. ಕರ್ನಾಟಕದಲ್ಲಿಯೂ ಬ್ಲೇಡ್ ಕರ್ನಾಟಕ ಎಂಬ ಹೆಸರಿನಲ್ಲಿ ಹೆಲಿಕಾಪ್ಟರ್, ಖಾಸಗಿ ವಿಮಾನ ಸೇವೆಯನ್ನು ನೀಡುತ್ತಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications