Namma Metro Phase 3rd: ಪ್ರಧಾನಿ ಅಡಿಗಲ್ಲು ಹಾಕಿದ 44 ಕಿಮೀ. ಮೆಟ್ರೋ ಯೋಜನೆ ಮಾರ್ಗಗಳು, ಕಾಮಗಾರಿ...
ಬೆಂಗಳೂರು, ಆಗಸ್ಟ್ 11: ಬೆಂಗಳೂರಿನಲ್ಲಿ ಮೆಟ್ರೋ ಜಾಲ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಬಹು ವರ್ಷಗಳಿಂದ ಪ್ಲಾನ್ ಮಾಡಿಕೊಂಡು ಇತ್ತೀಚೆಗೆ ಅನುಮೋದನೆ ಪಡೆದಿದ್ದ ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆ ಕಾಮಗಾರಿ ಪ್ರಧಾನಿ ಮೋದಿ ಶಂಕುಸ್ಥಾಪನೆಯಿಂದ ಶುರುವಾಗಲಿದೆ. ಈ ಯೋಜನೆಗೆ ಸಿಕ್ಕ ಅನುದಾನ, ಒಟ್ಟು ಉದ್ದ, ಎರಡು ಮಾರ್ಗಗಳು, ಎಷ್ಟು ನಿಲ್ದಾಣಗಳು ಸೇರಿದಂತೆ ಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 15,610 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮೆಟ್ರೋ ರೈಲು ಯೋಜನೆಯ ಹಂತ-3ದ ಕಾಮಗಾರಿ ಆರಂಭಕ್ಕೆ ಕ್ಷಣಗಣನೆ ಆರಂಭವಾಗಲಿದೆ. ಮೆಟ್ರೋ ಹಂತ-3 ಯೋಜನೆಯಡಿ ಒಟ್ಟು 44 ಕಿಲೋ ಮೀಟರ್ಗಿಂತಲೂ ಅಧಿಕ ಉದ್ದದ ಎರಡು ಕಾರಿಡಾರ್ ನಿರ್ಮಾಣವಾಗಲಿವೆ. ಇದರಲ್ಲಿ ಒಂದು 'ಆರೆಂಜ್ ಲೈನ್' ಎಂದು ಘೋಷಿಸಲಾಗಿದೆ. ಈ ಮೂಲಸೌಕರ್ಯ ಯೋಜನೆಯು ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಸತಿ, ಕೈಗಾರಿಕಾ, ವಾಣಿಜ್ಯ ಮತ್ತು ಶೈಕ್ಷಣಿಕ ಪ್ರದೇಶಗಳಲ್ಲಿನ ಸಾರಿಗೆ ಅಗತ್ಯವನ್ನು ಪೂರೈಸುತ್ತದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮೆಟ್ರೋ ಮೂರನೇ ಹಂತದ ಯೋಜನೆಯಡಲ್ಲಿ ಎರಡು ಕಾರಿಡಾರ್ಗಳು ನಿರ್ಮಾಣಗೊಳ್ಳಲಿವೆ. ಅದರಲ್ಲಿ ಒಂದು ಜೆಪಿ ನಗರ 4 ನೇ ಹಂತದಿಂದ ಕೆಂಪಾಪುರವರೆಗೆ ಹೊಸ ಮಾರ್ಗವು 32.15 ಕಿಲೋ ಮೀಟರ್ ಇರಲಿದೆ. ಮತ್ತೊಂದು ಹೊಸಹಳ್ಳಿಯಿಂದ ಕಡಬಗೆರೆವರೆಗೆ 12.5 ಕಿಲೋ ಮೀಟರ್ ಉದ್ದದ ಮಾರ್ಗ ತಲೆ ಎತ್ತಲಿದೆ. ಈ ಮಾರ್ಗಗಳಲ್ಲಿ ಒಟ್ಟು 31 ಎತ್ತರದ ನಿಲ್ದಾಣಗಳು ಸ್ಥಾಪನೆಯಾಗಲಿವೆ ಎಂದು BMRCL ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಮಾರ್ಗವು ಮಾಗಡಿ ರಸ್ತೆ, ಕೆಂಪಾಪುರ, ಜೆಪಿನಗರ, ಹೊರ ವರ್ತುಲ ರಸ್ತೆಯ ಲಕ್ಷಾಂತರ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಒದಗಿಸಲಿದೆ. ಅಲ್ಲದೇ 44 ಕಿಲೋ ಮೀಟರ್ ಮಾರ್ಗದಲ್ಲಿ ಟ್ರಾಪಿಕ್ ಕಡಿಮೆ ಮಾಡುವಲ್ಲಿ ಕೊಡುಗೆ ನೀಡಲಿದೆ. ಇಂತಹ ಪ್ರಮುಖ ಯೋಜನೆ ಆರಂಭಕ್ಕೆ ನೆನ್ನೆ ಪ್ರಧಾನಿಯವರು ಶಂಕುಸ್ಥಾಪನೆ ನೇರವೇರಿಸಿದ್ದಾರೆ. ಶೀಘ್ರವೇ ಕಾಮಗಾರಿ ಆರಂಭಗೊಳ್ಳಲಿದೆ.
ನಿರ್ಮಾಣವಾಗುವ ಒಟ್ಟು ನಿಲ್ದಾಣಗಳು ಯಾವುವು?
ಈ ಮೆಟ್ರೋ ಮಾರ್ಗವು ಕಡುಬಗೆರೆ, ಹೊಸಹಳ್ಳಿ ಸೇರಿದಂತೆ ಮಾಗಡಿ ರಸ್ತೆ, ಜೆಪಿನಗರದಿಂದ ಕೆಂಪಾಪುರ, ಹೊರ ವರ್ತುಲ ರಸ್ತೆಯ ಪ್ರಯಾಣಿಕರಿಗೆ ಅನುಕೂಲ ಒದಗಿಸಲಿದೆ. ಈ ಆರೆಂಜ್ ಮಾರ್ಗದಲ್ಲಿ 'ಕೆಂಪಾಪುರ, ಹೆಬ್ಬಾಳ ರೈಲು ನಿಲ್ದಾಣ, ನಾಗಶೆಟ್ಟಿಹಳ್ಳಿ, ಬಿಇಎಲ್ ವೃತ್ತ, ಮುತ್ಯಾಲನಗರ, ಪೀಣ್ಯ, ಕಂಠೀರವನಗರ, ಸ್ವಾತಂತ್ರ್ಯ ಯೋಧರ ಕಾಲೋನಿ, ಚಾಮುಂಡೇಶ್ವರಿ, ನಾಗರಭಾವಿ ವೃತ್ತ, ಮೈಸೂರು ರಸ್ತೆ, ದ್ವಾರಕನಗರ' ನಿಲ್ದಾಣಗಳು ಬರುತ್ತವೆ.
ಅದೇ ರೀತಿ ಕಡುಬಗೆರೆ-ಹೊಸಹಳ್ಳಿ ಮಾರ್ಗದಲ್ಲಿ 'ಹೊಸಹಳ್ಳಿ, ಕಾಮಾಕ್ಷಿಪಾಳ್ಯ, ಕೆಎಚ್ಬಿ ಕಾಲೋನಿ, ಸುಮನಹಳ್ಳಿ ಕ್ರಾಸ್, ಸುಂಕದಕಟ್ಟಿ, ಹೇರೋಹಳ್ಳಿ, ಬ್ಯಾಡರಹಳ್ಳಿ, ಕಾಮತ್ ಲೇಔಟ್ ಮತ್ತು ಕಡುಬಗೆರೆ ನಿಲ್ದಾಣಗಳು ಬರುತ್ತವೆ' ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ತಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications