ಶಶಿಕಲಾ ನಟರಾಜನ್ ಗೆ ಜೈಲಿನಲ್ಲಿ ಏನೇನು ಸಿಗುತ್ತಿದೆ?
ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿಕೊಂಡು ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಶಶಿಕಲಾ ನಟರಾಜನ್ ಅವರಿಗೆ ಸಿಗುತ್ತಿರುವ ಸೌಲಭ್ಯಗಳ ವಿವರ ಇಲ್ಲಿದೆ...
ಬೆಂಗಳೂರು, ಮಾರ್ಚ್ 02: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಅಪರಾಧಿ ಎನಿಸಿಕೊಂಡು ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಶಶಿಕಲಾ ನಟರಾಜನ್ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಒದಗಿಸಿಲ್ಲ ಎಂದು ಅಧಿಕಾರಿಗಳು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಶಶಿಕಲಾ ಅವರಿಗೆ ಸಿಗುತ್ತಿರುವ ಸೌಲಭ್ಯಗಳ ವಿವರ ಇಲ್ಲಿದೆ...
ಶಶಿಕಲಾ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬರುವುದಕ್ಕೂ ಮುಂಚಿತವಾಗಿಯೇ ಅನೇಕ ಬೇಡಿಕೆಗಳಿರುವ ಪಟ್ಟಿಯನ್ನು ಕೋರ್ಟಿಗೆ ಸಲ್ಲಿಸಿದ್ದರು. ವೆಸ್ಟರ್ನ್ ಕಮೋಡ್, ನಡೆದಾಡಲು ಸ್ಥಳಾವಕಾಶ, 24 ಗಂಟೆ ನೀರಿನ ಸೌಲಭ್ಯ ಹೀಗೆ ಪಟ್ಟಿ ಬೆಳೆದಿತ್ತು.[ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ಗಳಿಸಲಿರುವ ಹಣವೆಷ್ಟು?]

ಆದರೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಜೆ ಜಯಲಲಿತಾ ಅವರಿದ್ದ ಬರಾಕ್ ನಲ್ಲೇ ಕೊಠಡಿ ಪಡೆದ ಶಶಿಕಲಾ ಅವರಿಗೆ ಕೇವಲ ಟಿವಿ ಸೆಟ್ ಮಾತ್ರ ನೀಡಲಾಗಿದೆ ಎಂದು ಜೈಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. [10 ಕೋಟಿ ರು ದಂಡ ಕಟ್ಟದಿದ್ದರೆ ಶಶಿಕಲಾಗೆ ಶಿಕ್ಷೆ ಹೆಚ್ಚಳ]
ಚೆನ್ನೈ ಮೂಲದ ವಕೀಲ ಎಂ.ಪಿ ರಾಜವೇಲಾಯುಥ ಅವರು ಆರ್ ಟಿ ಐ ಅರ್ಜಿ ಸಲ್ಲಿಸಿ, ಶಶಿಕಲಾ ಅವರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಕೋರಿದ್ದರು. ಇದಕ್ಕೆ ಉತ್ತರಿಸಿರುವ ಕಾರಾಗೃಹ ಇಲಾಖೆ ನಿರ್ದೇಶಕರು, ಯಾವುದೇ ವಿಶೇಷ ಸೌಲಭ್ಯ ನೀಡಿಲ್ಲ ಎಂದಿದ್ದಾರೆ.[ಶಶಿಕಲಾ ಹಾಗೂ ಕುಟುಂಬದ ಮೇಲಿರುವ ಹಗರಣಗಳು]
ಶಶಿಕಲಾಗೆ ನೀಡಿರುವ ಸೌಲಭ್ಯಗಳು
* ಒಂದು ಟೆಲಿವಿಷನ್ ಸೆಟ್
* ಪ್ರತ್ಯೇಕ ಬಾತ್ ರೂಮ್ ಇಲ್ಲ
* ಬಿಸಿ ನೀರು ಕಾಯಿಸಲು ಹೀಟರ್ ಇಲ್ಲ
* ಏರ್ ಕಂಡೀಷನರ್ ಇಲ್ಲ
* ಮಲಗಲು ಮಂಚ, ಹಾಸಿಗೆ, ದಿಂಬು ನೀಡಿಲ್ಲ
ಟಿವಿ ಸೆಟ್ ನೀಡಿದ್ದು ಏಕೆ?: ಎಐಎಡಿಎಂಕೆ ಮುಖ್ಯಸ್ಥೆಯಾಗಿರುವ ಕಾರಣ ತಮಿಳು ಸುದ್ದಿವಾಹಿನಿ ಪ್ರಸಾರ ವೀಕ್ಷಿಸಲು ಅನುಮತಿ ನೀಡಲಾಗಿದೆ. ಫೆಬ್ರವರಿ 20ರಂದು ಸಂಬಂಧಿ ದಿನಕರನ್ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿತ್ತು. 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಅಧಿಕಾರಿಗಳು ವಿವರಿಸಿದರು. (ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications