ವಿದ್ಯಾರ್ಥಿಗಳೇ ಮರೆಯದೇ ಗಮನಿಸಿ, ಹಾಗೇ ಈ ಸುದ್ದಿ ಓದಿ!
ಬೆಂಗಳೂರಿನ ಬಾಪೂಜಿನಗರದ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ -1 ರಲ್ಲಿ 2023 & 24ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾದ್ರೆ ಯಾವ ಯಾವ ಕೋರ್ಸ್ಗೆ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು? ಅರ್ಜಿ ಹಾಕಲು ಇರುವ ಕೊನೆಯ ದಿನಾಂಕ ಯಾವುದು? ಮುಂದೆ ಓದಿ.
ಅಷ್ಟಕ್ಕೂ ಇದೀಗ ವಿದ್ಯಾರ್ಥಿಗಳು B.A./ B.Com/ B.Sc/ B.B.A/ B.C.A/ B.S.W. ಸೇರಿ BLib.I.Sc/ M.A/ M.Sc/ M.B.A/ M.Lib.I.Sc/ M.C.A/ M.S.W./ PG/ ಸೇರಿದಂತೆ, Certificate / Diploma/ UG Certificate ಶಿಕ್ಷಣ ಕ್ರಮಗಳಿಗೆ ದಿನಾಂಕ 09.01.2024 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ -01 ಬಾಪೂಜಿ ನಗರ ಇಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಕಬಹುದು. ಪ್ರಾವೇಶಾತಿಯನ್ನ ಪ್ರಾರಂಭಿಸಿದ್ದು, ದಿನಾಂಕ 31.03.2024 ಪ್ರವೇಶಾತಿಯ ಕೊನೆಯ ದಿನ ಆಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಇನ್ನ ಈ ಕೋರ್ಸ್ಗಳಿಗೆ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು, www.ksoumysuru.ac.in ವೆಬ್ಸೈಟ್ಗೆ ಭೇಟಿ ನೀಡಬಹುದು. ಈ ವೆಬ್ಸೈಟ್ ಮೂಲಕ ಅರ್ಜಿಗಳನ್ನ ಸಲ್ಲಿಸಿ ಅಥವಾ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳ ಜೊತೆ ಭೇಟಿ ನೀಡಿಬಹುದು. ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು ಎಂದು ತಿಳಿಸಲಾಗಿದೆ.
ಕಚೇರಿಯ ವಿಳಾಸ ಇಲ್ಲಿದೆ ನೋಡಿ
ಆಸಕ್ತ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ಅಥವಾ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-1, ಮೊದಲನೆ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು ಅಥವಾ ಈ ಬಗ್ಗೆ ಸಂಪರ್ಕಕ್ಕೆ ದೂರವಾಣಿ ಸಂಖ್ಯೆ: 080-2600 3664 ಹಾಗೂ 9844965515 ಮೂಲಕ ಸಂಪರ್ಕಿ ಮಾಡಬಹುದು ಎಂದು ಕರಾಮುವಿ ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ, ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಹಾಗೇ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ, ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿಗಳ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
https://ssp.postmatric.karnataka.gov.in ಮೂಲಕ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಹಾಗೇ ಇದರ ಜೊತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್ ಕರಿಯಪ್ಪ ಮುಖ್ಯ ರಸ್ತೆ , ಬನಶಂಕರಿ, ಬೆಂಗಳೂರು - 560070 ಇಲ್ಲಿಗೆ ಸಂಪರ್ಕ ಮಾಡಿ ಅಥವಾ ದೂರವಾಣಿ ಸಂಖ್ಯೆ ಆದ 080-26711096 ಮೂಲಕ ಸಂಪರ್ಕ ಮಾಡಬಹುದು ಅಂತಾ ಮಾಹಿತಿ ನೀಡಲಾಗಿದೆ.
-
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications