ಬೆಂಗಳೂರು: ರಿಚರ್ಡ್ ಸ್ಯಾಂಕಿ ಜನ್ಮದಿನ, ವಿಶ್ವ ಜಲ ದಿನದ ಅಂಗವಾಗಿ ಪಾರಂಪರಿಕ ಸೈಕಲ್ ಸವಾರಿ
ಬೆಂಗಳೂರು, ಮಾರ್ಚ್ 22: ಬೆಂಗಳೂರು ಮೂಲದ ಎನ್.ಜಿ.ಒ "ನಮ್ಮ ನಿಮ್ಮ ಸೈಕಲ್ ಫೌಂಡೇಶನ್' (ಎನ್ಎನ್ಸಿಎಫ್) ಸಮುದಾಯವನ್ನು ಒಳಗೊಂಡ ಸಂಚಾರಿ ವ್ಯವಸ್ಥೆಯನ್ನು ಸೃಷ್ಠಿ ಮಾಡುವ ಯತ್ನ ಮಾಡುತ್ತಿದೆ.
ರಿಚರ್ಡ್ ಸ್ಯಾಂಕಿಯವರ ಜನ್ಮದಿನ ಮತ್ತು ವಿಶ್ವ ಜಲ ದಿನದ ಅಂಗವಾಗಿ ಬೆಂಗಳೂರಿಗೆ ರಿಚರ್ಡ್ ಸ್ಯಾಂಕಿಯವರ ಕೊಡುಗೆಯ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ನಿಮ್ಮ ಸೈಕಲ್ ಫೌಂಡೇಶನ್ ತೋಟಗಾರಿಕೆ ಇಲಾಖೆ ಸಹಭಾಗಿತ್ವದೊಂದಿಗೆ ಪಾರಂಪರಿಕ ಸವಾರಿಯನ್ನು ಆಯೋಜಿಸಿತ್ತು.
ಹೈಕೋರ್ಟ್, ಮೇಯೋ ಹಾಲ್, ಆಂಡ್ರ್ಯೂ ಚರ್ಚ್ ಮತ್ತು ಸರ್ಕಾರಿ ಆರ್ಟ್ ಮ್ಯೂಸಿಯಂ ಸೇರಿದಂತೆ ನಿರ್ಮಿಸಲಾದ ರಿಚರ್ಡ್ ಸ್ಯಾಂಕಿ ಸ್ಮಾರಕಗಳಿಗೆ ಭೇಟಿ ನೀಡಲು ಸೈಕ್ಲಿಸ್ಟ್ ಗಳು ಕಬ್ಬನ್ ಪಾರ್ಕ್ ಸುತ್ತಲೂ ಸವಾರಿ ಮಾಡಿದರು. ರಿಚರ್ಡ್ ಸ್ಯಾಂಕಿ 1861ರಿಂದ ಮೈಸೂರಿನ ಮುಖ್ಯ ಎಂಜಿನಿಯರ್ ಆಗಿ 13 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದರು. ಈ ಕಾರ್ಯಕ್ರಮಕ್ಕೆ ಸಚಿವ ಆರ್.ಶಂಕರ್, ಐಎಎಸ್ ಅಧಿಕಾರಿ ಫೌಜಿಯಾ ತರಣುಮ್, ಡಿಸ್ಕವರಿ ವಿಲೇಜ್ನ ರಾಮಕೃಷ್ಣ ಗಣೇಶ್ ಭಾಗವಹಿಸಿದ್ದರು.

ತೋಟಗಾರಿಕೆ ಸಚಿವ ಆರ್.ಶಂಕರ್ ಅವರು ಮಾತನಾಡಿ, "ಕಬ್ಬನ್ ಹೆರಿಟೇಜ್ ಸವಾರಿಯ ಭಾಗವಾಗಿ, ಭಾರತೀಯ ಮತ್ತು ಬ್ರಿಟಿಷ್ ಇತಿಹಾಸವನ್ನು ಅನ್ವೇಷಿಸಲಾಗುವುದು. ಪಾರಂಪರಿಕ ಸವಾರಿಯ ಮೂಲಕ ಕಳೆದ 150 ವರ್ಷಗಳಲ್ಲಿ ಬೆಂಗಳೂರು ಯಾವ ರೀತಿ ಪರಿವರ್ತನೆ ಮತ್ತು ರೂಪಾಂತರವನ್ನು ನಾವು ಅರ್ಥಮಾಡಿಕೊಂಡಿದ್ದೇವೆ " ಎಂದರು.
"ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾವು ಸಂತೋಷಪಡುತ್ತೇವೆ, ಏಕೆಂದರೆ ಇದು ನಮ್ಮ ಸ್ಮಾರಕಗಳನ್ನು ರಕ್ಷಿಸಲು ಮತ್ತು ಕಬ್ಬನ್ ಪಾರ್ಕ್ ಒಳಗಿನ ಐತಿಹಾಸಿಕ ಕ್ಷಣಗಳ ಬಗ್ಗೆ ಅರಿವು ಮೂಡಿಸುವ ಸಂಚಲನವಾಗಿ, ಪಾರಂಪರಿಕ ಪ್ರವಾಸೋದ್ಯಮದಲ್ಲಿ ಹೆಜ್ಜೆ ಹಾಕುವ ಅವಕಾಶವಾಗಿದೆ' ಎಂದು ತೋಟಗಾರಿಕೆ ನಿರ್ದೇಶಕ ಫೌಜಿಯಾ ಹೇಳಿದರು.

ಪ್ಲಾಗ್ ರನ್ ಮತ್ತು ಸಲಹೆಗಾರ ಡಿಸ್ಕವರಿ ವಿಲೇಜ್ ರಾಮಕೃಷ್ಣ ಗಣೇಶ್, "ನಮ್ಮ ಸಂರಕ್ಷಣಾ ಪ್ರಯತ್ನಗಳಲ್ಲಿ ಇಂತಹ ಯತ್ನಗಳು ಇತಿಹಾಸವನ್ನು ಜನಪ್ರಿಯಗೊಳಿಸುವುದೆಂದು ನಾವು ಧೃಡವಾಗಿ ನಂಬಿದ್ದೇವೆ. ಈ ಕಾರ್ಯಕ್ರಮವು ಯುವ ಪೀಳಿಗೆಗೆ ಬೆಂಗಳೂರಿನ ಅದ್ಭುತ ಪರಂಪರೆ ಮತ್ತು ಸಂಸ್ಕೃತಿಯನ್ನು ಕಂಡುಕೊಳ್ಳಲು ಸಹಾಯ ಮಾಡುವ ಎಲ್ಲಾ ಅಂಶಗಳನ್ನು ಹೊಂದಿದೆ, ಕಸ ಮುಕ್ತ ಮತ್ತು ಪ್ಲಾಸ್ಟಿಕ್ ಮುಕ್ತ ಕಬ್ಬನ್ ಪಾರ್ಕ್ ಬಗ್ಗೆ ಅರಿವು ಕೂಡ ಮಾಡುತ್ತಿದ್ದೇವೆ" ಎಂದು ತಿಳಿಸಿದರು.
ಎನ್.ಎನ್.ಸಿ.ಎಫ್ ನಿರ್ದೇಶಕ ಮುರಳಿ ಎಚ್.ಆರ್ ಮಾತನಾಡಿ, "ಸ್ಯಾಂಕಿಯವರ ಕೆಲಸ ಬೆಂಗಳೂರು ನಗರವನ್ನು ಕಟ್ಟುವಲ್ಲಿ ಒಂದು ವಿಶಿಷ್ಟ ಗುರಿ ಮತ್ತು ಸ್ಫೂರ್ತಿಯನ್ನು ಹೊಂದಿದೆ. ನಗರದ ಮೇಯೊ ಹಾಲ್, ಆಂಡ್ರ್ಯೂ ಚರ್ಚ್, ಹೈಕೋರ್ಟ್ ನಂಥ ಮಹಾನ್ ಸ್ಮಾರಕಗಳನ್ನು ನಿರ್ಮಿಸುವಲ್ಲಿ ಸ್ಯಾಂಕಿಯ ಕೊಡುಗೆ ಅಪಾರ. ಅವರು ಸ್ಥಾಪಿಸಿದ ಕಬ್ಬನ್ ಪಾರ್ಕ್ ನಲ್ಲಿ ಸವಾರಿಯನ್ನು ಆಯೋಜಿಸುವುದೆ ಒಂದು ಭಾಗ್ಯ" ಎಂದು ಹೇಳಿದರು.
Recommended Video
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications