ಕಡಲೆಕಾಯಿ ಪರಿಷೆ! ಶ್ರದ್ಧೆ ಸಂಭ್ರಮದ ಜಾತ್ರೆ
ಬೆಂಗಳೂರು, ನವೆಂಬರ್ 13 : ಐತಿಹಾಸಿಕ ಹಬ್ಬವೆಂದು ಪ್ರಸಿದ್ಧಿ ಪಡೆದಿರುವ ಬೆಂಗಳೂರು ಬಸವನಗುಡಿಯ ಕಡಲೆಕಾಯಿ ಪರಿಷೆಗೆ ಇಂದು (ನ.13)ರಂದು ಅಧಿಕೃತ ಚಾಲನೆ ದೊರೆಯಿತು.
ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ಅನಂತಕುಮಾರ್, ಬೆಂಗಳೂರಿನಲ್ಲಿ ಏಳು ನದಿಗಳಿದ್ದವು ಅದರಲ್ಲಿ ಪ್ರಮುಖವಾದ ನದಿ ವೃಷಭಾವತಿ ಆದರೆ ಇಂದು ವೃಷಭಾವತಿ ನದಿಯಾಗಿರದೆ ಚರಂಡಿಯಾಗಿ ಮಾರ್ಪಟ್ಟಿದೆ ಹಾಗಾಗಿ ನದಿಯ ಪುನರುತ್ಥಾನದ ಅಗತ್ಯವಿದೆ ಎಂದರು.
In Pics : ತಾಜಾತಾಜಾ ಕಳ್ಳೆಕಾಯ್, ಗರಮಾಗರಂ ಕಳ್ಳೆಕಾಯ್
ವೃಷಭಾವತಿ ನದಿ ಉಗಮ ಸ್ಥಾನ ದೊಡ್ಡ ಬಸವಣ್ಣನ ಅಡಿದಾವರಿಗಳಲ್ಲಿ ಎಂಬ ಪ್ರತೀತಿ ಇದೆ. ವೃಷಭಾವತಿಯ ಪುನರುತ್ಥಾನಕ್ಕೆ ಅವಶ್ಯವಾಗಿರುವ ಹಣವನ್ನು ಕೇಂದ್ರ ಸರ್ಕಾರದಿಂದ ಅನುದಾನವಾಗಿ ನೀಡಲು ಮನವಿ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರ ಜತೆಗೂ ಕೂಡ ಅನುದಾನದ ಕುರಿತು ಮಾತನಾಡುತ್ತೇವೆ ಎಂದು ಹೇಳಿದರು.

ಮೇಯರ್ ಸಂಪತ್ ರಾಜ್ ಮಾತನಾಡಿ, ದೇವಾಲಯದಲ್ಲಿ ಕಡಲೆಕಾಯಿ ಅಭಿಷೇಕ ಮಾಡಲಾಗಿದೆ. ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದೇ ಕರೆಯಲಾಗುತ್ತದೆ. ಕಡಲೆಕಾಯಿ ಮಿಠಾಯಿಯಿಂದ ಅಪೌಷ್ಠಿಕತೆಯನ್ನು ಹೋಗಲಾಡಸಬಹುದಾಗಿದೆ. ಬೆಂಗಳೂರು ಐಟಿ ಸಿಟಿಯಾದರೂ ಸಂಸ್ಕೃತಿ ಮರೆಯಾಗಿಲ್ಲ. ಮುಂಬರುವ ಪರಿಷೆಗೆ 198 ವಾರ್ಡ್ ಕಾರ್ಪೊರೇಟರ್ಗಳನ್ನು ಕರೆಸುವ ಆಲೋಚನೆ ಇದೆ ಎಂದು ನುಡಿದರು.
ಶಾಸಕ ರವಿಸುಬ್ರಹ್ಮಣ್ಯ, ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ, ಪದ್ಮಾವತಿ ನರಸಿಂಹ ಉಪಸ್ಥಿತರಿದ್ದರು.

ಪರಿಷೆ ಮೊದಲ ದಿನ : ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಬಸವಣ್ಣನಿಗೆ ಹಾಲು, ಮೊಸರು ಅಭಿಷೇಕ ಮಾಡುವ ಮೂಲಕ ವಿಧ್ಯುಕ್ತ ಚಾಲನೆ ದೊರೆತಿದೆ. ಮುಂಜಾನೆ 6 ಗಂಟೆಯಿಂದಲೇ ಪೂಜೆಗಳು ನಡೆಯುತ್ತಿದೆ. 200 ಲೀಟರ್ ಹಾಲು ಹಾಗೂ 100 ಲೀಟರ್ ಮೊಸರು, 70ಕೆಜಿ ಕಡಲೆಕಾಯಿಯ ಅಭಿಷೇಕ ಮಾಡಲಾಯಿತು.
ಕಡಲೆಗೆ ಹೆಚ್ಚಿದ ಬೇಡಿಕೆ: ಬಡವರ ಬಾದಾಮಿ ಎಂದೇ ಕರೆಸಿಕೊಳ್ಳುವ ಕಡಲೆಕಾಯಿಗೆ ಬೇಡಿಕೆ ಹೆಚ್ಚಾಗಿದೆ. ಹಸಿ, ಹುರಿದ, ಬೇಯಿಸಿದ ತರಹೇವಾರಿ ತಳಿಯ ಕಡಲೆಕಾಯಿಗಳು ಸೇರಿ 30 ರೂನಿಂದ 40 ರೂವರೆಗೆ ಮಾರಾಟಗೊಳ್ಳುತ್ತಿದೆ.
ಕಳೆದ ವರ್ಷ ನೆಲಕಚ್ಚಿದ್ದ ನೆಲಗಡಲೆ ಈ ವರ್ಷ ಮಳೆಯಿಂದಾಗಿ ಚೇತರಿಕೆ ಕಂಡಿದ್ದು ಉತ್ತಮ ಇಳುವರಿ ಬಂದಿದೆ. ಕಳೆದ ವರ್ಷ ಒಂದು ಚೀಲಕ್ಕೆ(40 ಕೆ.ಜಿ) ೫ಸಾವಿರದಿಂದ 6 ಸಾವಿರ ಇದ್ದ ಕಡಲೆಕಾಯಿ ಈ ವರ್ಷ ೩ಸಾವಿರದಿಂದ ನಾಲ್ಕೂವರೆ ಸಾವಿರಕ್ಕೆ ಇಳಿಕೆಯಾಗಿದೆ.

ಕಡಲೆಕಾಯಿ ಪರಿಷೆಗೆ ನಗರದ ರಾಮಕೃಷ್ಣ ಆಶ್ರಮದಿಂದ ಎಪಿಎಸ್ ಕಾಲೇಜು ರಸ್ತೆ, ಬ್ಯೂಗಲ್ ರಾಕ್ ರಸ್ತೆಯಿಂದ ಡಿವಿಜಿ ರಸ್ತೆ, ಗೋಕುಲ ಇನ್ಸ್ಸ್ಟಿಟ್ಯೂಟ್ ಸಮೀಪವಿರುವ ಮಲ್ಲಿಕಾರ್ಜುನ ದೇವಸ್ಥಾನದ ರಸ್ತೆ, ಹನುಮಂತನಗರ 50 ಅಡಿ ರಸ್ತೆಗೆ ಸಂಪರ್ಕ ಕಲ್ಪಿಸುವ ಜಾಯ್ ರಸ್ತೆಯ ಇಕ್ಕೆಲಗಳಲ್ಲಿ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಇಟ್ಟಿದ್ದಾರೆ.
ಕಡಲೆಕಾಯಿ ಮಾತ್ರವಲ್ಲದೇ ಗೃಹೋಪಯೋಗಿವಸ್ತುಗಳೂ ಇದ್ದವು: ರಸ್ತೆಯ ಇಕ್ಕೆಲಗಳಲ್ಲಿ ನಾನಾ ತಳಿಯ ಕಡಲೆಕಾಯಿಗಳು, ಹಣ್ಣಿನ ವ್ಯಾಪಾರ, ಮಹಿಳೆಯರ ಅಲಂಕಾರಿಕ ವಸ್ತುಗಳು,ಗೃಹೋಪಯೋಗಿ ವಸ್ತುಗಳು, ಮಕ್ಕಳ ಆಟಿಕೆಗಳು, ಬಟ್ಟೆ ಮಳಿಗೆ, ಕಡಲೆಪುರಿ ಸೇರಿದಂತೆ ವಿವಿಧ ಸಣ್ಣಪುಟ್ಟ ಮಾರಾಟಗಾರರು ವ್ಯಾಪಾರದಲ್ಲಿ ನಿರತರಾಗಿದ್ದರು.
ಶಾಲೆ, ಕಾಲೇಜುಗಳಿಗೆ ಚಕ್ಕರ್ ಹೊಡೆದು ಪರಿಷೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳು: ಬೆಳಗ್ಗೆ ಕಡಲೆಕಾಯಿ ಪರಿಷೆ ಉದ್ಘಾಟನೆಗೂ ಮುನ್ನವೇ ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಪರಿಷೆಯಲ್ಲಿ ಪಾಲ್ಗೊಂಡಿದ್ದರು. ಕಡಲೆಕಾಯಿಗಳನ್ನು ಖರೀದಿ ಮಾಡುತ್ತಾ, ಸ್ನೇಹಿತರೊಂದಿಗೆ ಸಂತಸದಿಂದ ಕಳೆದ ದೃಶ್ಯಗಳು ವಿಶೇಷವಾಗಿತ್ತು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications