ನಿತ್ಯಾನಂದ ಸ್ವಾಮಿಗೆ ಸಂಕಷ್ಟ: 10 ವರ್ಷದ ಹಿಂದೆ ನೀಡಿದ್ದ ಜಾಮೀನು ರದ್ದು
ಬೆಂಗಳೂರು, ಫೆಬ್ರವರಿ 5: ಅತ್ಯಾಚಾರ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿಗೆ ನೀಡಲಾಗಿದ್ದ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
2010ರ ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಜಾಮೀನು ದೊರಕಿತ್ತು. ಇದನ್ನು ರದ್ದುಗೊಳಿಸುವಂತೆ ಆತನ ಮಾಜಿ ಕಾರುಚಾಲಕ, ಪ್ರಕರಣ ಮೂಲ ಅರ್ಜಿದಾರ ಲೆನಿನ್ ಕರುಪ್ಪನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನಿತ್ಯಾನಂದನಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿ ಬುಧವಾರ ತೀರ್ಪು ನೀಡಿದರು.
ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ನಲ್ಲಿ ನಿತ್ಯಾನಂದ ವಿರುದ್ಧ ಕ್ರಿಮಿನಲ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸತತ 40ಕ್ಕೂ ಹೆಚ್ಚು ಬಾರಿ ವಿಚಾರಣೆಗೆ ಗೈರಾಗಿದ್ದಾರೆ. ಹೀಗಾಗಿ ಅವರ ಜಾಮೀನನ್ನು ತಿರಸ್ಕರಿಸಬೇಕು ಎಂದು ಲೆನಿನ್ ಮನವಿ ಮಾಡಿದ್ದರು.
ನಿತ್ಯಾನಂದನ ಜಾಮೀನು ರದ್ದುಗೊಳಿಸಿರುವುದರ ಜತೆಗೆ ಆತನನ್ನು ಕೂಡಲೇ ವಶಕ್ಕೆ ಪಡೆದುಕೊಳ್ಳುವಂತೆ ನ್ಯಾ. ಜಾನ್ ಮೈಕಲ್ ಕುನ್ಹಾ ವಿಚಾರಣಾ ನ್ಯಾಯಾಲಯಕ್ಕೆ ಸೂಚನೆ ನೀಡಿತು. ಇದರಿಂದ ನಿತ್ಯಾನಂದನ ಜಾಮೀನು ಬಾಂಡ್ಅನ್ನು ಸ್ವಾಧೀನಪಡಿಸಿಕೊಳ್ಳಲಾಗುತ್ತದೆ. ಇದರಿಂದ ನಿತ್ಯಾನಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರು ಹಾಗೂ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ನಿತ್ಯಾನಂದ ದೇಶದಿಂದ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದ್ದು, ಅದು ನಿಜವಾದರೆ ಆತನನ್ನು ಅಲ್ಲಿಂದ ಬಂಧಿಸಿ ಕರೆತರಬೇಕಾಗುತ್ತದೆ.

ಒಂದೂವರೆ ವರ್ಷದಿಂದ ಗೈರು
ನಿತ್ಯಾನಂದ ಸ್ವಾಮಿಗೆ 2010ರಲ್ಲಿ ನೀಡಿರುವ ಜಾಮೀನು ರದ್ದುಗೊಳಿಸಲು ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ. ನಿತ್ಯಾನಂದ ಸುಮಾರು ಒಂದೂವರೆ ವರ್ಷದಿಂದ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗದ ಬಗ್ಗೆ ವಿವರಣೆ ನೀಡುವಂತೆ ಹೈಕೋರ್ಟ್, ರಾಮನಗರದ ಮೂರನೇ ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರಿಗೆ ಶುಕ್ರವಾರ ಸೂಚನೆ ನೀಡಿತ್ತು.

ಜಾಮೀನು ರದ್ದುಗೊಳಿಸಿ
ವಿಚಾರಣೆಗೆ ಹಾಜರಾಗುವುದರಿಂದ ತಪ್ಪಿಸಿಕೊಳ್ಳುತ್ತಿರುವ ನಿತ್ಯಾನಂದ, ಅವಧಿ ಮುಗಿದ ಪಾಸ್ಪೋರ್ಟ್ನೊಂದಿಗೆ ದೇಶದಿಂದ ಪರಾರಿಯಾಗಿದ್ದಾನೆ. ಹಾಗೆಯೇ ವಿಚಾರಣಾ ನ್ಯಾಯಾಲಯದಲ್ಲಿ ತನ್ನ ನಕಲಿ ಪ್ರತಿನಿಧಿಗಳನ್ನು ಬಳಸಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಿದ್ದ ಲೆನಿನ್, ನಿತ್ಯಾನಂದನ ಜಾಮೀನನ್ನು ರದ್ದುಗೊಳಿಸುವಂತೆ ಕೋರಿದ್ದರು.

ಆಧ್ಯಾತ್ಮಿಕ ಪ್ರವಾಸದಲ್ಲಿ ನಿತ್ಯಾನಂದ
ಸಿಐಡಿ ತನಿಖಾಧಿಕಾರಿ ಫೆ. 3ರ ಒಳಗೆ ಖುದ್ದಾಗಿ ನಿತ್ಯಾನಂದಗೆ ನೋಟಿಸ್ ಜಾರಿ ಮಾಡಬೇಕು. ಅದರ ಕುರಿತು ಫೆ. 3ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಕಳೆದ ಶುಕ್ರವಾರ ಎಸ್ಐಟಿಗೆ ಸೂಚನೆ ನೀಡಿತ್ತು. ಅದರಂತೆ ಬಿಡದಿ ಆಶ್ರಮಕ್ಕೆ ತೆರಳಿದ್ದ ಪೊಲೀಸರು, ನಿತ್ಯಾನಂದನ ಸಹವರ್ತಿ ಕುಮಾರಿ ಅರ್ಚನಾನಂದಗೆ ನೋಟಿಸ್ ನೀಡಿ ವಾಪಸ್ ಆಗಿತ್ತು. ನಿತ್ಯಾನಂದ ಪ್ರಸ್ತುತ ಆಧ್ಯಾತ್ಮಿಕ ಪ್ರವಾಸದಲ್ಲಿದ್ದು, ಈ ಕಾರಣದಿಂದ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸಿರುವ ಎಸ್ಐಟಿ ಹೈಕೋರ್ಟ್ಗೆ ತಿಳಿಸಿತ್ತು.

ನಿತ್ಯಾನಂದ ಈಕ್ವೆಡಾರ್ನಲ್ಲಿದ್ದಾನೆ
ಅರ್ಜಿದಾರರ ಪರ ವಕೀಲ ಅಶ್ವಿನ್ ವೈಶ್, ವಿಚಾರಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ನಿತ್ಯಾನಂದ ದೇಶದಿಂದಲೇ ಪರಾರಿಯಾಗಿದ್ದಾನೆ ಎಂದು ಆರೋಪಿಸಿದ್ದರು. ವಿಚಾರಣಾ ನ್ಯಾಯಾಲಯದಲ್ಲಿ ಖುದ್ದು ಹಾಜರಾತಿಗೆ ಮನವಿ ಮಾಡಿರುವ ನಿತ್ಯಾನಂದ ಭಾರತದಲ್ಲಿಯೇ ಇದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ ಆತ ಈಕ್ವೆಡಾರ್ನಲ್ಲಿ ಆಶ್ರಯ ಪಡೆದುಕೊಂಡಿದ್ದಾನೆ. ನಿತ್ಯಾನಂದ ಮತ್ತೊಂದು ಪಾಸ್ಪೋರ್ಟ್ ಪಡೆದು ಪರಾರಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ.

ನಿತ್ಯಾನಂದ ಹಾಜರಾಗಬೇಕಿಲ್ಲ
ನಿತ್ಯಾನಂದ ಜಾಮೀನಿನ ಯಾವುದೇ ಷರತ್ತುಗಳನ್ನು ಉಲ್ಲಂಘನೆ ಮಾಡಿಲ್ಲ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಮುಂದೆ ಅವರು ತಕ್ಷಣವೇ ಹಾಜರಾಗುವ ಅವಶ್ಯಕತೆಯೂ ಇಲ್ಲ ಎಂದು ರಾಜ್ಯ ಸರ್ಕಾರದ ಪರ ಪಬ್ಲಿಕ್ ಪ್ರಾಸಿಕ್ಯೂಟರ್ ಹೇಳಿದ್ದರು.

ನಿತ್ಯಾನಂದ ವಿರುದ್ಧದ ಆರೋಪಗಳೇನು?
ನಿತ್ಯಾನಂದನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 377 (ಅಸಹಜ ಲೈಂಗಿಕತೆ), 420 (ವಂಚನೆ), 114 (ಅಪರಾಧ ಪ್ರಚೋದನೆ), 201 (ಪುರಾವೆಗಳ ನಾಪತ್ತೆ ಮತ್ತು ಸುಳ್ಳು ಮಾಹಿತಿ ನೀಡುವಿಕೆ), 120ಬಿ (ಅಪರಾಧ ಸಂಚು) ಮತ್ತು ಇತರ ಪ್ರಕರಣಗಳನ್ನು ದಾಖಲಿಸಲಾಗಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್











Click it and Unblock the Notifications