ಶಂಕಿತ ಉಗ್ರ ಸಲೀಂ ಖಾನ್ಗೆ ಜಾಮೀನು ನೀಡಿದ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 28: ಭಯೋತ್ಪಾದನೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದ ಅಲ್-ಹಿಂದ್ ಸಂಘಟನೆಯ ಸದಸ್ಯ ಎನ್ನಲಾದ ಸಲೀಂ ಖಾನ್ಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಸಲೀಂ ಖಾನ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠ ಜಾಮೀನು ಆದೇಶ ನೀಡಿದೆ.
ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ (ಯುಎಪಿಎ) ಅಲ್-ಹಿಂದ್ ಸಂಘಟನೆಯನ್ನು ನಿಷೇಧ ಮಾಡಿಲ್ಲ. ಅರ್ಜಿದಾರ ಸಲೀಂ ಖಾನ್ ಆ ಸಂಘಟನೆ ಸದಸ್ಯ ಎನ್ನಲಾಗಿದ್ದು, ಜಿಹಾದಿ ಸಭೆಯಲ್ಲಿ ಭಾಗವಹಿಸಿದ್ದಾನೆ. ತರಬೇತಿ ಉಪಕರಣಗಳನ್ನು ಖರೀದಿಸಿದ್ದಾನೆ ಮತ್ತು ಸಹ ಸದಸ್ಯರಿಗೆ ಆಶ್ರಯ ಕಲ್ಪಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇವು ಯುಎಪಿಎ ಕಾಯ್ದೆಯ ಸೆಕ್ಷನ್ 2(ಕೆ) ಅಥವಾ 2(ಎಂ) ಅಡಿಯಲ್ಲಿ ಅಪರಾಧ ಕೃತ್ಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್ ವಿಭಾಗೀಯ ಪೀಠ, ಆರೋಪಿಗೆ ಜಾಮೀನು ನೀಡಿದೆ.

ಮತ್ತೊಬ್ಬ ಆರೋಪಿಗೆ ಜಾಮೀನು ನಿರಾಕರಣೆ
ಇದೇ ವೇಳೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮತ್ತೊಬ್ಬ ಆರೋಪಿ ಮೊಹಮ್ಮದ್ ಜೈದ್ಗೆ ಜಾಮೀನು ನಿರಾಕರಿಸಿರುವ ಹೈಕೋರ್ಟ್, ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆತ ಉಗ್ರಗಾಮಿ ಸಂಘಟನೆಯಲ್ಲಿ ಸಕ್ರಿಯ ಸದಸ್ಯನಾಗಿದ್ದಾನೆ ಎಂದು ಎನ್ಐಎ ದೋಷಾರೋಪಣೆ ಪಟ್ಟಿ ಮಾಡಿತ್ತು.
ಇತರೆ ಆರೋಪಿಗಳ ಜೊತೆಗೂಡಿ ಅಪರಾಧ ಮತ್ತು ಹಿಂತಾಸತ್ಮಕ ಚುಟುವಟಿಕೆಗಳಿಗೆ ಒಳಸಂಚು ನಡೆಸಿದ್ದಾನೆ. ಪ್ರಕರಣದ ಮೊದಲನೇ ಆರೋಪಿ ಮೆಹಬೂಬ್ ಪಾಷಾಯೊಂದಿಗೆ ಡಾರ್ಕ್ ವೆಬ್ಸೈಟ್ ಮೂಲಕ ಅಪರಿಚಿತ ಐಸಿಸ್ ಸಂಘಟನೆಯ ನಿರ್ವಾಹಕನ ಸಂಪರ್ಕ ಸಾಧಿಸಲು ಪ್ರಯತ್ನಿದ್ದಾನೆ ಎಂಬುದು ದೋಷಾರೋಪ ಪಟ್ಟಿಯಿಂದ ಸ್ಪಷ್ಟವಾಗಿದೆ. ಆದ್ದರಿಂದ ಜೈದ್ ಜಾಮೀನು ಪಡೆಯಲು ಅರ್ಹನಾಗಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.
ಪ್ರಕರಣವೇನು?
ಸಿಸಿಬಿ ಪೊಲೀಸರು 2020ರ ಜ.10ರಂದು ನೀಡಿದ ಮಾಹಿತಿ ಮೇರೆಗೆ ಸಲೀಂ ಖಾನ್ ಮತ್ತು ಮೊಹಮ್ಮದ್ ಜೈದ್ ಸೇರಿದಂತೆ 17 ಆರೋಪಿಗಳ ಮೇಲೆ ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಠಾಣಾ ಪೊಲೀಸರು ಯುಎಪಿಎ ಮತ್ತು ಐಪಿಸಿಯ ವಿವಿಧ ಸೆಕ್ಷನ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಜ.೨೦ರಂದು ಸಲೀಂ ಖಾನ್ ಅನ್ನು ಬಂಧಿಸಲಾಗಿತ್ತು. ಮಾ.9ರಂದು ಬಾಡಿ ವಾರೆಂಟ್ ಮೂಲಕ ಜೈದ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಜ.23ರಂದು ತನಿಖೆಯನ್ನು ಎನ್ಐಎಗೆ ವಹಿಸಲಾಗಿತ್ತು. ಎನ್ಐಎ ಪೊಲೀಸರು ಸಲೀಂ ಖಾನ್ ಮತ್ತು ಜೈದ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿಗಳಿಗೆ ಜಾಮೀನು ನಿರಾಕರಿಸಿ 2020ರ ಡಿ.29ರಂದು ಎನ್ಐಎ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಇದರಿಂದ ಜಾಮೀನು ಕೋರಿ ಈ ಇಬ್ಬರು ಆರೋಪಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
-
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications