ಏಳು ದಿನಗಳ ಪುಸ್ತಕ ಮೇಳಕ್ಕೆ ಹಸಿರು ನಿಶಾನೆ
ಬೆಂಗಳೂರು, ಫೆ.11: ನಗರದ ಅರಮನೆ ಮೈದಾನದಲ್ಲಿ ನಡೆಯುವ ಬೆಂಗಳೂರು ಪುಸ್ತಕೋತ್ಸವಕ್ಕೆ ಹಿಡಿದಿದ್ದ ಗ್ರಹಣ ಕಳೆದಿದೆ. ಪುಸ್ತಕ ಪ್ರೇಮಿಗಳಿಗೆ ಹೈಕೋರ್ಟಿನಿಂದ ಶುಭ ಸಂದೇಶ ಸಿಕ್ಕಿದೆ. ಪುಸ್ತಕ ಮೇಳಕ್ಕೆ ಅಡ್ಡವಾಗಿ ನಿಂತಿದ್ದ ಕರ್ನಾಟಕ ಸರ್ಕಾರಕ್ಕೆ ಇದರಿಂದ ತೀವ್ರ ಮುಖಭಂಗವಾಗಿದೆ.
ನಗರದ ಅರಮನೆ ಮೈದಾನದಲ್ಲಿ ಮಾ. 4ರಿಂದ 11ನೇ ಬೆಂಗಳೂರು ಪುಸ್ತಕೋತ್ಸವ ನಡೆಸಲು ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ಬೆಂಗಳೂರು ಪುಸ್ತಕ ಮಾರಾಟಗಾರರು ಹಾಗೂ ಮುದ್ರಣ ಮಾಲಿಕರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ 7 ದಿನಗಳ ಪುಸ್ತಕೋತ್ಸವಕ್ಕೆ ಅನುಮತಿ ನೀಡುವಂತೆ ಕರ್ನಾಟಕಕ್ಕೆ ಸರ್ಕಾರಕ್ಕೆ ಸೂಚಿಸಿದೆ. ಹೀಗಾಗಿ ಪುಸ್ತಕೋತ್ಸವ ಅವಧಿಯನ್ನು ಮೊಟಕುಗೊಳಿಸುವ ಸರ್ಕಾರದ ಪ್ರಯತ್ನವೂ ವಿಫಲವಾಗಿದೆ.
ಪುಸ್ತಕೋತ್ಸವದಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರೊಫೆಸರ್ ಹಾಗೂ ಲೇಖಕರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸರ್ಕಾರ ಇಂಥ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟಿರುವ ಪೀಠ, ಈ ಕಾರ್ಯಕ್ರಮದಿಂದ ಇತರ ಸಮಾರಂಭಗಳಿಗೆ ತೊಂದರೆಯಾಗದಂತೆ ಗಮನ ಹರಿಸಲು ಸೂಚನೆ ನೀಡಿದೆ.

2013ರ ನವೆಂಬರ್ ನಲ್ಲಿ 7ದಿನಗಳ ಕಾಲ ನಡೆಯಬೇಕಿದ್ದ ಪುಸ್ತಕೋತ್ಸವಕ್ಕೆ ಸರ್ಕಾರ ಏಳು ದಿನಗಳ ಕಾಲ ಅನುಮತಿ ನೀಡಲು ನಿರಾಕರಿಸಿತ್ತು. ಕೇವಲ ಮೂರು ದಿನಗಳಿಗೆ ಮಾತ್ರ ಅನುಮತಿ ನೀಡಲು ಮುಂದಾಗಿದ್ದು, ಸರ್ಕಾರದ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪುಸ್ತಕ ಪ್ರಕಾಶಕರ ಮತ್ತು ಮಾರಾಟಗಾರರ ಸಂಘ ಹಾಗೂ ಕ್ಲಬ್ ಕ್ಲಾಸ್ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ಹೈಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಬೆಂಗಳೂರು ಪುಸ್ತಕ ಪ್ರಕಾಶಕರ ಮತ್ತು ಮಾರಾಟಗಾರರ ಸಂಘ ಹಾಗೂ ಕ್ಲಬ್ ಕ್ಲಾಸ್ ಸದಸ್ಯರು ಹರ್ಷವ್ಯಕ್ತಪಡಿಸಿದ್ದಾರೆ. ಪುಸ್ತಕೋತ್ಸವ ಕಾರ್ಯಕ್ರಮದ ನಿರ್ದೇಶಕ ಬಿ.ಎಸ್. ರಘುರಾಮ್, ಬೆಂಗಳೂರು ಪುಸ್ತಕ ಪ್ರಕಾಶಕರ ಮತ್ತು ಮಾರಾಟಗಾರರ ಸಂಘದ ಅಧ್ಯಕ್ಷ ಬಲರಾಮ್ ಸಾದ್ವಾನಿ, ಉಪಾಧ್ಯಕ್ಷ ನಿತೀನ್ ಷಾ, ಕಾರ್ಯದರ್ಶಿ ದೇವರು ಭಟ್, ಖಜಾಂಚಿ ಜೆ. ಉಲ್ಲಾಸ ಕುಮಾರ್ ಹಾಗೂ ಇನ್ನಿತರರು 11ನೇ ಪುಸ್ತಕ ಮೇಳಕ್ಕೆ ಸಜ್ಜಾಗುತ್ತಿದ್ದಾರೆ.
ಹೈಕೋರ್ಟ್ ನಿರ್ದೇಶನದಂತೆ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಡಿಸೆಂಬರ್ 21, 2012ರಂದು ಅಂದಿನ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿತ್ತು. ಹೀಗಾಗಿ ಪುಸ್ತಕೋತ್ಸವವನ್ನು 10 ದಿನಗಳ ಬದಲಿಗೆ 3 ದಿನಕ್ಕೆ ಸೀಮಿತ ಗೊಳಿಸುವಂತೆ ಆಯೋಜಕರಿಗೆ ಸರ್ಕಾರ ಸೂಚಿಸಿತ್ತು. ಆದರೆ, ಈಗ ಪ್ರಕರಣ ಕೋರ್ಟ್ ಮೆಟ್ಟಿಲೇರಿ ಪುಸ್ತಕ ಪ್ರೇಮಿಗಳ ಪರವಾಗಿ ಆದೇಶ ಹೊರಬಿದ್ದಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications