ಬಂದ್ ಮಾಡುವುದು ಸಂವಿಧಾನದ ಉಲ್ಲಂಘನೆ: ಹೈಕೋರ್ಟ್
ಬೆಂಗಳೂರು, ಫೆಬ್ರವರಿ 02: ಬಂದ್ ಮಾಡುವುದು ಕಾನೂನು ಹಾಗೂ ಸಂವಿಧಾನದ ಉಲ್ಲಂಘನೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಬಂದ್ ವಿರುದ್ಧ ನಗರದ ಶ್ರದ್ಧಾ ಪೋಷಕರ ಸಭೆ ಸಂಘಟನೆ ಸಲ್ಲಿಸಿದ್ದ ಪಿಎಲ್ಐ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಎಚ್.ಜಿ.ರಮೇಶ್ ಮತ್ತು ಪಿ.ಎಸ್.ದಿನೇಶ್ಕುಮಾರ್ ಅವರ ಜಂಟಿ ವಿಭಾಗೀಯ ಪೀಠ ಬೇರೆಯರ ಜೀವನಕ್ಕೆ ತೊಂದರೆ ಕೊಡುವುದು ಮೂಲಭೂತ ಹಕ್ಕು ಹೇಗೆ ಆಗುತ್ತದೆ ಎಂದು ಖಾರವಾಗಿ ಪ್ರಶ್ನಿಸಿದೆ.
ಸುಪ್ರಿಂ ಕೋರ್ಟ್ ತೀರ್ಪಿನನ್ವಯ ಬಂದ್ ಮಾಡುವಂತಿಲ್ಲ ಹಾಗಾಗಿ ಬಂದ್ ಮಾಡಲು ಯಾವುದೇ ಸಂಘಟನೆಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದ್ದು, ಜನರ ಜೀವನಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಕರ್ತವ್ಯ ಆ ಕರ್ತವ್ಯವನ್ನು ಅದು ನಿರ್ವಹಿಸಲಿ ಎಂದಿದೆ.

ಜನವರಿ 26ರಂದು ನಡೆದ ರಾಜ್ಯ ಬಂದ್ನಿಂದ ಜನರಿಗೆ ಹಾಗೂ ಸರ್ಕಾರಕ್ಕೆ ಉಂಟಾಗಿರುವ ನಷ್ಟವನ್ನು ತುಂಬಿಕೊಡುವಂತೆ ಹಾಗೂ ಫೆಬ್ರವರಿ 4ರ ಬಂದ್ಗೆ ತಡೆ ನೀಡುವಂತೆ ಶ್ರದ್ಧಾ ಪೋಷಕರ ಸಭೆಯು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ವಾಟಾಳ್ ನಾಗರಾಜ್ ಹಾಗೂ ಕೆಲವು ಸಂಘಟನೆಗಳು ಬಂದ್ ಮಾಡಿಯೇ ತೀರುವುದಾಗಿ ಹೇಳಿದ್ದು, ಬಂದ್ ಆಚರಣೆ ಮಾಡಿದರೆ ಅದು ನ್ಯಾಯಾಲಯದ ಆದೇಶದ ಉಲ್ಲಂಘನೆ ಆಗಲಿದೆ. ಬಂದ್ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಲಿದೆ. ಅಷ್ಟೆ ಅಲ್ಲದೆ ಬಂದ್ ನಿಂದಾದ ನಷ್ಟ ಪರಿಹಾರಕ್ಕೂ ಹೈಕೋರ್ಟ್ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 4ರಂದು ಬೆಂಗಳೂರಿಗೆ ಬರಲಿದ್ದು, ಮಹದಾಯಿ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಬೇಕೆಂದು ಒತ್ತಾಯಿಸಿ ಬಂದ್ ಆಚರಣೆ ಮಾಡಲಾಗುತ್ತಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications