ವಿವಾದಾತ್ಮಕ ಕಪಾಲಬೆಟ್ಟದಲ್ಲಿ ಕಾಮಗಾರಿ ನಡೆಸದಂತೆ ಹೈಕೋರ್ಟ್ ಸೂಚನೆ
ಬೆಂಗಳೂರು, ಅಕ್ಟೋಬರ್ 20: ತೀವ್ರ ವಿವಾದ ಸೃಷ್ಟಿಸಿರುವ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಕಪಾಲಬೆಟ್ಟದಲ್ಲಿನ ನಿರ್ಮಾಣ ಕಾರ್ಯಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕಪಾಲ ಬೆಟ್ಟದಲ್ಲಿ ಚರ್ಚ್ ನಿರ್ಮಿಸಲು ಸರ್ಕಾರ ಹತ್ತು ಎಕರೆ ಭೂಮಿಯನ್ನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಹಾರೋಬೆಲೆ ಗ್ರಾಮದ ನಿವಾಸಿಗಳಾದ ಆಂಥೋಣಿ ಸ್ವಾಮಿ ಹಾಗೂ ಇತರೆ ಏಳು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ನ್ಯಾಯಾಲಯದ ಅನುಮತಿ ಇಲ್ಲದೆ ಈ ಜಾಗದಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು ಎಂದು ಹಾರೋಬೆಲೆ ಕಪಾಲಬೆಟ್ಟ ಅಭಿವೃದ್ಧಿ ಟ್ರಸ್ಟ್ಗೆ ಸೂಚನೆ ನೀಡಿದೆ.
'ಭೂ ಮಂಜೂರಾತಿ ನಿಯಮಗಳನ್ನು ಉಲ್ಲಂಘಿಸಿ 10 ಎಕರೆ ಗೋಮಾಳವನ್ನು ಮಂಜೂರು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವದ ಸಹೋದರ, ಸಂಸದ ಡಿಕೆ ಸುರೇಶ್ ಮುಂದಾಳತ್ವ ವಹಿಸಿ ಜಮೀನು ಮಂಜೂರು ಮಾಡಿಸಿದ್ದಾರೆ. ಟ್ರಸ್ಟ್ನಿಂದ ಮನವಿ ಸಲ್ಲಿಕೆಯಾಗುವ ಮೊದಲೇ ಭೂಮಂಜೂರಾತಿ ಪ್ರಕ್ರಿಯೆ ಆರಂಭಿಸಲಾಗಿತ್ತು' ಎಂದು ಆರೋಪಿಸಲಾಗಿದೆ.

'ಭೂ ಮಂಜೂರಾತಿ ಸಂಬಂಧ 2017ರ ಫೆಬ್ರವರಿ 15ರಂದು ಡಿಕೆ ಶಿವಕುಮಾರ್ ಮತ್ತು ಅದೇ ತಿಂಗಳ 20ರಂದು ಡಿಕೆ ಸುರೇಶ್ ಅವರು ರಾಮನಗರ ಜಿಲ್ಲಾಧಿಕಾರಿಗೆ ಅಧಿಕೃತ ಟಿಪ್ಪಣಿ ಕಳುಹಿಸಿದ್ದರು. ಇದೆಲ್ಲ ಆದ ನಂತರ ಮಾರ್ಚ್ 18ರಂದು ಟ್ರಸ್ಟ್ನಿಂದ ಔಪಚಾರಿಕವಾಗಿ ಮನವಿ ಪತ್ರ ಪಡೆದಿದ್ದಾರೆ. 2018ರ ಫೆಬ್ರವರಿ 26ರಂದು ಭೂಮಿ ಮಂಜೂರು ಮಾಡಲಾಗಿದೆ' ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಯಾವುದೇ ಕ್ರೈಸ್ತ ಧರ್ಮೀಯರು ಜಾಗ ಮಂಜೂರಿಗಾಗಿ ಮನವಿ ಮಾಡಿಲ್ಲ. ಡಿಕೆ ಸಹೋದರರು ತಮ್ಮ ಸ್ವಹಿತಾಸಕ್ತಿ, ರಾಜಕೀಯ ಸ್ವಾರ್ಥಕ್ಕಾಗಿ ಜಮೀನು ಮಂಜೂರು ಮಾಡಿಸಿದ್ದಾರೆ. ಜಾತಿ, ಮತ ಮತ್ತು ಧರ್ಮದ ಆಧಾರದಲ್ಲಿ ಭೂಮಿ ಮಂಜೂರು ಮಾಡುವುದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ ಎಂದಿರುವ ಅರ್ಜಿದಾರರು, ಭೂ ಮಂಜೂರಾತಿ ಮತ್ತು ಭೂಪರಿವರ್ತನೆಯ ಶುಲ್ಕ ಮನ್ನಾ ಮಾಡಿರುವುದನ್ನು ಸಹ ಪ್ರಶ್ನಿಸಿದ್ದಾರೆ.
ಅರ್ಜಿಯನ್ನು ಪರಿಗಣಿಸಿದ ನ್ಯಾಯಪೀಠ, ನ್ಯಾಯಾಲಯದ ಅನುಮತಿ ಪಡೆಯದೆ ಯಾವುದೇ ನಿರ್ಮಾಣ ಕಾರ್ಯ ನಡೆಸದಂತೆ ಟ್ರಸ್ಟ್ಗೆ ಸೂಚನೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಮನಗರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications