ರೂಫ್ ಟಾಪ್ ಬಾರ್ ಗಳಿಗೆ ನೋಟಿಸ್: ತಡೆಯಾಜ್ಞೆಗೆ ಹೈಕೋರ್ಟ್ ನಕಾರ
ಬೆಂಗಳೂರು, ಜನವರಿ 10 : ಬೆಂಗಳೂರಿನ ಅಸುರಕ್ಷಿತ 57 ರೂಫ್ ಟಾಪ್ ಬಾರ್ ಹಾಗೂ ರೆಸ್ಟೋರೆಂಟ್ ಗೆ ಬಿಬಿಎಂಪಿ ನೀಡಿದ್ದ ಶೋಕಾಸ್ ನೋಟಿಸ್ ಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಇಂದಿರಾನಗರದ ಕ್ಯಾಮರಿನ್ ಫುಡ್ ರೆಸ್ಟೋರೆಂಟ್ ಸಲ್ಲಿಸಿದ್ದ ತಡೆಯಾಜ್ಞೆ ಕೋರಿದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಹೈಕೋರ್ಟ್ ರೂಫ್ ಟಾಪ್ ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಬಿಬಿಎಂಪಿ ಜಾರಿ ಮಾಡಿರುವ ನೋಟಿಸ್ ಗೆ ತಡೆಯಾಜ್ಞೆ ನೀಡುವುದಿಲ್ಲ ಎಂದು ಅರ್ಜಿ ಇತ್ಯರ್ಥಗೊಳಿಸಿತು.
ಬಿಬಿಎಂಪಿ ನೀಡಿರುವ ನೋಟಿಸ್ ಗೆ ತಕರಾರುಗಳಿದ್ದರೆ ನೇರವಾಗಿ ಬಿಬಿಎಂಪಿಗೆ ಆಕ್ಷೇಪಣೆಗಳನ್ನು ಸಲ್ಲಿಸಿ ಈ ಬಗ್ಗೆ ಸ್ಪಷ್ಟನೆ ಪಡೆದುಕೊಳ್ಳಿ ಎಂದು ಕ್ಯಾಮರಿನ್ ಫುಡ್ಸ್ ಪರ ವಕೀಲರಿಗೆ ಕೋರ್ಟ್ ಸೂಚನೆ ನೀಡಿತು. ಸುರಕ್ಷತೆ ದೃಷ್ಟಿಯಿಂದ ಬಿಬಿಎಂಪಿ ತೆಗೆದುಕೊಳ್ಳುವ ಕ್ರಮಗಳಿಗೆ ಅನುಸಾರ ರೂಫ್ ಟಾಪ್ ರೆಸ್ಟೋರೆಂಟ್ ಗಳು ನಡೆದುಕೊಳ್ಳಬೇಕಾಗುತ್ತದೆ ಎಂದು ಮೌಖಿಕವಾಗಿ ಅಭಿಪ್ರಾಯ ಪಟ್ಟಿತು.

ಮುಂಬೈನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಕಮಲಾ ಪಬ್ ದುರಂತದ ನಂತರ ಬೆಂಗಳೂರಿನಲ್ಲಿ ಅಗ್ನಿ ಸುರಕ್ಷತಾ ಇಲಾಖೆ ಹಾಗೂ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ನಗರಾದ್ಯಂತ ರೂಫ್ ಟಾಪ್ ಬಾರ್ ಮತ್ತು ರೆಸ್ಓರೆಂಟ್ ಗಳ ಮೇಲೆ ಧಾಳಿ ನಡೆಸಿ ಸುರಕ್ಷತಾ ಕ್ರಮ ಕೈಗೊಳ್ಳದಿರುವ ರೆಸ್ಟೋರೆಂಟ್ ಗಳ ಮೇಲೆ ನೋಟಿಸ್ ಜಾರಿ ಮಾಡಿದ್ದರು. ಈ ವೇಳೆ 70 ರೂಫ್ ಟಾಪ್ ಬಾರ್ ಗಳಿಗೆ ಬೀಗ ಹಾಕಿದ್ದಲ್ಲದೆ 57 ಕ್ಕೂ ಹೆಚ್ಚು ಬಾರ್ ಗಳಿಗೆ ನೋಟಿಸ್ ಜಾರಿ ಮಾಡಿದ್ದರು, ಇದನ್ನು ಪ್ರಶ್ನಿಸಿ ಇಂದಿರಾನಗರದ ಕ್ಯಾಮರಿನ್ ಫುಡ್ ಬಾರ್ ಅಂಡ್ ರೆಸ್ಟೋರೆಂಟ್ ತಡೆಯಾಜ್ಞ ಕೋರಿಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications