ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸಂವಿಧಾನ ಬದ್ಧವಾಗಿದೆ:ಹೈಕೋರ್ಟ್
ಬೆಂಗಳೂರು,ಜನವರಿ 20: ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ 2011 ಸಂವಿಧಾನ ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
'ಬೆಂಗಳೂರು ನಗರದಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಈ ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ರೈತರು ರಾಜಧಾನಿಗೇ ಬರಬೇಕಾದ ಸ್ಥಿತಿ ಇದೆ. ಇದು ಬಡ ರೈತರಿಗೆ ಕಷ್ಟವಾಗಿದೆ.
ಪರಿಸರ ಸಂರಕ್ಷಣೆಯಲ್ಲಿ ವಿದೇಶಿ ಹಸ್ತಕ್ಷೇಪ: ಹೈಕೋರ್ಟ್ ಗರಂ
ಅಲ್ಲದೇ ಈ ಕಾಯ್ದೆಯಡಿ 7,800 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 4,400 ಪ್ರಕರಣಗಳು ವಿಚಾರಣೆ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತ' ಎಂದು ಪೀಠ ಅಭಿಪ್ರಾಯಪಟ್ಟಿತು.
ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸುಮಾರು 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಅವರಿಂದ್ ಕುಮಾರ್ ಮತ್ತು ನ್ಯಾ.ಬಿ.ಎ.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
ಕರ್ನಾಟಕ ಭೂ ಕಬಳಿಕೆ ಕಾಯ್ದೆ-2011ರ ಅಡಿ ವಿಶೇಷ ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ಅಧಿಕಾರ ನೀಡುವುದನ್ನು ಕಾನೂನುಬಾಹಿರ ಎಂಬುದಾಗಿ ಘೋಷಿಸಬೇಕೆಂದು ಅರ್ಜಿದಾರರು ಮಾಡಿದ್ದ ಮನವಿಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದೆ.
Recommended Video
ಸರಿಯಾದ ಕಾರಣವಿಲ್ಲದೆ ಭೂ ಕಬಳಿಕೆ ವಿಶೇಷ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾಯಿಸಬಾರದು. ಈ ಆದೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ಪ್ರತ್ಯೇಕವಾಗಿ ನಿಭಾಯಿಸುವಂತೆ ವಿಶೇಷ ನ್ಯಾಯಾಲಯಕ್ಕೂ ಪೀಠ ಹೇಳಿದೆ.