ಬೆಂಗಳೂರು ಹೈಸ್ಕೂಲ್ ಉಳಿಸಲು ಹಳೆ ವಿದ್ಯಾರ್ಥಿಗಳ ಮನವಿ
ಬೆಂಗಳೂರು, ಮೇ 27: ವಿದ್ಯಾರ್ಥಿಗಳ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳು ಸೇರಿದಂತೆ ಬೆಂಗಳೂರಿನ ಹಲವು ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿವೆ.
ಒಂದು ಕಾಲದಲ್ಲಿ ಬಡ ಮಕ್ಕಳ ಶಾಲೆ ಎಂದೇ ಹೆಸರು ವಾಸಿಯಾಗಿದ್ದ ಸದ್ಯ ಆರ್. ವಿ ರಸ್ತೆಯಲ್ಲಿರುವ ಬೆಂಗಳೂರು ಹೈಸ್ಕೂಲ್(ಬಿಎಚ್ಎಸ್) ಇದೀಗ ಮುಚ್ಚುವ ಭೀತಿ ಎದುರಿಸುತ್ತಿದೆ. ವಿದ್ಯಾರ್ಥಿಗಳ ದಾಖಲಾತಿ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ.
ಜಯನಗರದಲ್ಲಿರುವ ಈ ಶಾಲೆಯನ್ನು 1942ರಲ್ಲಿ ಪ್ರಾರಂಭಿಸಲಾಗಿತ್ತು, ಬಡ ಮಕ್ಕಳಿಗೆಂದೇ ಶುರು ಮಾಡಿದ್ದ ಶಾಲೆ ಇದಾಗಿತ್ತು. ಆದರೆ ಕೆಲವು ವರ್ಷಗಳಿಂದ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದ್ದು, ಮಕ್ಕಳ ಪೋಷಕರು ಅಂತಾರಾಷ್ಟ್ರೀಯ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಒಲವು ಹೊಂದಿದ್ದಾರೆ.

ಸರ್ಕಾರಿ ಅನುದಾನಿತ ಶಾಲೆಯು ಹಳೆಯ ವಿದ್ಯಾರ್ಥಿಗಳಿಗೆ ದಾಖಲಾತಿಯನ್ನು ಹೆಚ್ಚಿಸುವಂತೆ ಮನವಿ ಮಾಡಿದೆ. ಬಿಎಚ್ಎಸ್ ಮುಖ್ಯೋಪಾಧ್ಯಾಯ ಡಿಎಸ್ ಬಸವಾನಂದ್ ಪ್ರಕಾಶ್ ಅವರು ಐದು ನಿಮಿಷಗಳ ವಿಡಿಯೋ ಮಾಡಿದ್ದು, ಹಳೆಯ ವಿದ್ಯಾರ್ಥಿಗಳಿಗೆ ಶಾಲೆಯನ್ನು ಆಕರ್ಷಿಸುವಂತೆ ಮಾಡಲು ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ನಮಗೆ ಬಿಎಚ್ಎಸ್ನಿಂದ ಎಲ್ಲವೂ ಸಿಕ್ಕಿದೆ, ದಾಖಲಾತಿ ಕಡಿಮೆ ಆಗಲು ಸಾಕಷ್ಟು ಕಾರಣಗಳಿವೆ, 8,9,10ನೇ ತರಗತಿಗೆ ದಾಖಲಾತಿ ಹೆಚ್ಚಳ ಮಾಡಲು ಮುಂದಾಗಬೇಕು ನೀವೆಲ್ಲರೂ ರಾಯಭಾರಿಗಳಾಗಬೇಕು ಎಂದಿದ್ದಾರೆ.

ಪೋಷಕರು ಮಕ್ಕಳನ್ನು ಸ್ಟೇಟ್ ಬೋರ್ಡ್ ಶಾಲೆಗಳಿಗೆ ಕಳುಹಿಸಲು ಇಷ್ಟ ಪಡುತ್ತಿಲ್ಲ ಅಂತಾರಾಷ್ಟ್ರೀಯ ಶಾಲೆಗಳ ಶೇ.5ರಷ್ಟು ಶುಲ್ಕವೂ ನಮ್ಮ ಶಾಲೆಗಳಿಗೆ ಕೊಡಬೇಕಿಲ್ಲ, ಬಿಎಚ್ಎಸ್ ಮಾತ್ರವಲ್ಲ ಸ್ವಾತಂತ್ರ್ಯ ನಂತರ ಶುರು ಮಾಡಿದ್ದ ಸಾಕಷ್ಟು ಶಾಲೆಗಳ ಪರಿಸ್ಥಿತಿ ಹೀಗೆಯೇ ಇದೆ.
ಕಳೆದ ವರ್ಷ 8ನೇ ತರಗತಿಗೆ 14 ಮಂದಿ ಮಕ್ಕಳು ನೋಂದಣಿ ಮಾಡಿಕೊಂಡಿದ್ದರು, 9,10ನೇ ತರಗತಿಯಲ್ಲಿ 70 ಮಕ್ಕಳಿದ್ದಾರೆ. ಮಕ್ಕಳಿಗೆ ಆನ್ಲೈನ್ ಶಿಕ್ಷಣದ ಸೌಲಭ್ಯವನ್ನು ಕೂಡ ಕಲ್ಪಿಸಿದ್ದೇವೆ ಆದರೂ ಪೋಷಕರು ನಮ್ಮ ಶಾಲೆಗಳತ್ತ ಮುಖ ಮಾಡುತ್ತಿಲ್ಲ, ಕೊರೊನಾ ಸೋಂಕಿನಿಂದಾಗಿ ಶೇ.30ರಷ್ಟು ಪೋಷಕರು ಬೆಂಗಳೂರು ಬಿಟ್ಟು ಹೋಗಿದ್ದು, ಈ ಬಾರಿ ವಿದ್ಯಾರ್ಥಿಗಳ ದಾಖಲಾತಿ ಇನ್ನಷ್ಟು ಕಡಿಮೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಉಪೇಂದ್ರ, ಶ್ರೀನಗರ ಕಿಟ್ಟಿ, ಕಿರಣ್ ಶ್ರೀನಿವಾಸ್, ಬ್ರಿಜೇಶ್ ಪಟೇಲ್ ಓದಿರುವ ಶಾಲೆ ಇದಾಗಿದೆ, ಶೇ.50ರಷ್ಟು ಶುಲ್ಕವನ್ನು ಕೂಡ ಇಳಿಕೆ ಮಾಡಲಾಗಿದೆ. ವರ್ಷಕ್ಕೆ 5 ಸಾವಿರ ರೂ ಶುಲ್ಕ ವಿಧಿಸಲಾಗಿದೆ. ಆಡಿಯೋ ವಿಷುವಲ್ ರೂಮ್, ಇಂಡೋರ್ ಆಡಿಟೋರಿಯಂ, ಲ್ಯಾಬೊರೇಟರಿಗಳು, ಉತ್ತಮ ಶಿಕ್ಷಕರ ವರ್ಗ, ತರಗತಿಗಳು ಕೂಡ ಅದ್ಭುತವಾಗಿದೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications