South Western Railway: ₹372.13 ಕೋಟಿ ವೆಚ್ಚದಲ್ಲಿ ಬೆಂಗಳೂರು ವಿಭಾಗದ ಈ 15 ರೈಲು ನಿಲ್ದಾಣಗಳಿಗೆ ಹೈಟೆಕ್ ಸ್ಪರ್ಶ
"ಅಮೃತ್ ಭಾರತ್ ನಿಲ್ದಾಣದ ಯೋಜನೆ" ಅಡಿಯಲ್ಲಿ ನೈಋತ್ಯ ರೈಲ್ವೆ (SWR) ಕರ್ನಾಟಕದಲ್ಲಿ ಬೆಂಗಳೂರು ವಿಭಾಗದ 15 ರೈಲು ನಿಲ್ದಾಣಗಳ ಪುನಾಭಿವೃದ್ಧಿ ಕಾಮಗಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ (ಫೆಬ್ರವರಿ 26) ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಹಾಗಾದರೆ ಎಲ್ಲೆಲ್ಲಿ ಅಭಿವೃದ್ಧಿ ಹಾಗೂ ಇದಕ್ಕೆ ತಗಲುವ ವೆಚ್ಚ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನೈಋತ್ಯ ರೈಲ್ವೆ ಪ್ರಕಾರ, ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೆ.ಆರ್.ಪುರಂ, ಕುಪ್ಪಂ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ತುಮಕೂರು, ರಾಮನಗರ ಮತ್ತು ವೈಟ್ಫೀಲ್ಡ್ ಭಾಗಗಳಲ್ಲಿ ರೈಲು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

ಸುಧಾರಣೆಗಳಲ್ಲಿ ಎಸ್ಕಲೇಟರ್ಗಳ ಸ್ಥಾಪನೆ, ಸ್ಮಾರ್ಟ್ ಪಾರ್ಕಿಂಗ್ ಸೌಲಭ್ಯಗಳು, ಅತ್ಯಾಆಧುನಿಕ ಶೌಚಾಲಯಗಳು ಮತ್ತು ಇತರ ಸೌಕರ್ಯಗಳು ಸೇರಿವೆ. ಅಮೃತ್ ಭಾರತ್ ನಿಲ್ದಾಣದ ಯೋಜನೆ ಭಾಗವಾಗಿ, ಭಾರತದಾದ್ಯಂತ 554 ರೈಲು ನಿಲ್ದಾಣಗಳು ಮತ್ತು 1,585 ರಸ್ತೆ ಮೇಲ್ಸೇತುವೆಗಳು ಮತ್ತು ರಸ್ತೆ ಕೆಳಸೇತುವೆಗಳ ಪುನರಾಭಿವೃದ್ಧಿಯ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಬೆಂಗಳೂರು ವಿಭಾಗದ ವ್ಯಾಪ್ತಿಯ 15 ನಿಲ್ದಾಣಗಳಲ್ಲಿ ಒಟ್ಟು ₹372.13 ಕೋಟಿ ಮೊತ್ತದ ಪುನರಾಭಿವೃದ್ಧಿ ಮತ್ತು ಮೂಲಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾವ್ಯಾವ ನಿಲ್ದಾಣಗಳು ಎಷ್ಟು ಕೋಟಿ ವೆಚ್ಚದಲ್ಲಿ ಅಭಿವೃದ್ಧಿ?
* ಬಂಗಾರಪೇಟೆ ರೈಲು ನಿಲ್ದಾಣ - 21.5 ಕೋಟಿ ರೂಪಾಯಿ
* ಚನ್ನಪಟ್ಟಣ ರೈಲು ನಿಲ್ದಾಣ - 20.9 ಕೋಟಿ ರೂಪಾಯಿ
* ಧರ್ಮಪುರಿ ರೈಲು ನಿಲ್ದಾಣ - 25.4 ಕೋಟಿ ರೂಪಾಯಿ
* ದೊಡ್ಡಬಳ್ಳಾಪುರ ರೈಲು ನಿಲ್ದಾಣ - 21.3 ಕೋಟಿ ರೂಪಾಯಿ
* ಹಿಂದೂಪುರ ರೈಲು ನಿಲ್ದಾಣ - 23.9 ಕೋಟಿ ರೂಪಾಯಿ
* ಹೊಸೂರು ರೈಲು ನಿಲ್ದಾಣ - 22.3 ಕೋಟಿ ರೂಪಾಯಿ
* ಕೆಂಗೇರಿ ರೈಲು ನಿಲ್ದಾಣ - 21 ಕೋಟಿ ರೂಪಾಯಿ
* ಕೆಆರ್ ಪುರಂ ರೈಲು ನಿಲ್ದಾಣ - 21.1 ಕೋಟಿ ರೂ.
* ಕುಪ್ಪಂ ರೈಲು ನಿಲ್ದಾಣ - 17.6 ಕೋಟಿ ರೂಪಾಯಿ
* ಮಲ್ಲೇಶ್ವರ ರೈಲು ನಿಲ್ದಾಣ - 20 ಕೋಟಿ ರೂಪಾಯಿ
* ಮಾಲೂರು ರೈಲು ನಿಲ್ದಾಣ - 20.4 ಕೋಟಿ ರೂಪಾಯಿ
* ಮಂಡ್ಯ ರೈಲು ನಿಲ್ದಾಣ - 20.1 ಕೋಟಿ ರೂಪಾಯಿ
* ರಾಮನಗರ ರೈಲು ನಿಲ್ದಾಣ - 21 ಕೋಟಿ ರೂಪಾಯಿ
* ತುಮಕೂರು ರೈಲು ನಿಲ್ದಾಣ - 24.1 ಕೋಟಿ ರೂಪಾಯಿ
* ವೈಟ್ ಫೀಲ್ಡ್ ರೈಲು ನಿಲ್ದಾಣ - 23.3 ಕೋಟಿ ರೂಪಾಯಿ
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ












Click it and Unblock the Notifications