Get Updates
Get notified of breaking news, exclusive insights, and must-see stories!

ಸುಮಲತಾ-ಯಡಿಯೂರಪ್ಪ ಸಭೆ: ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ

ಬೆಂಗಳೂರು, ಜೂನ್ 29: ದಿವಂಗತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ, ಮಂಡ್ಯ ಸಂಸದೆ ಸುಮಲತಾ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಖ್ಯಾತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರದಿಂದ 1 ಎಕರೆ 35 ಗುಂಟೆ ಜಾಗ ಗುರುತಿಸಿದ್ದು, ಆದಷ್ಟೂ ಬೇಗ ಸ್ಮಾರಕ ನಿರ್ಮಾಣ ಯೋಜನೆ ಆರಂಭಿಸುವಂತೆ ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ.

      ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ನೀಡುವುದಾಗಿ ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಃ ಸುಮಲತಾ ಮತ್ತು ಸಿಎಂ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

      ಇನ್ನು ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಆದೇಶಿಸಿದ್ದಾರೆ.

      Highlights Of High-level Meeting Of The Ambareesh Memorial Foundation Committee Held With Cm

      ಅಂದ್ಹಾಗೆ, ಈ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಮಹೇಶ್ವರರಾವ್, ಆಯುಕ್ತ ಡಾ ಪಿ ಎಸ್ ಹರ್ಷ ಮತ್ತು ಇತರರು ಭಾಗವಹಿಸಿದ್ದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+