ಸುಮಲತಾ-ಯಡಿಯೂರಪ್ಪ ಸಭೆ: ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ
ಬೆಂಗಳೂರು, ಜೂನ್ 29: ದಿವಂಗತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ, ಮಂಡ್ಯ ಸಂಸದೆ ಸುಮಲತಾ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಭೆ ನಡೆಸಿದರು.
Recommended Video
ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ ಖ್ಯಾತ ನಟ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರದಿಂದ 1 ಎಕರೆ 35 ಗುಂಟೆ ಜಾಗ ಗುರುತಿಸಿದ್ದು, ಆದಷ್ಟೂ ಬೇಗ ಸ್ಮಾರಕ ನಿರ್ಮಾಣ ಯೋಜನೆ ಆರಂಭಿಸುವಂತೆ ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ.
ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, ಅಂಬಿ ಸ್ಮಾರಕ ನಿರ್ಮಾಣಕ್ಕೆ 5 ಕೋಟಿ ನೀಡುವುದಾಗಿ ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಃ ಸುಮಲತಾ ಮತ್ತು ಸಿಎಂ ಯಡಿಯೂರಪ್ಪ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮುಖ್ಯಮಂತ್ರಿ ಶ್ರೀ @BSYBJP ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಮುಖ್ಯಾಂಶಗಳು.#AmbareshMemorial pic.twitter.com/IDz3f2vkwM
— CM of Karnataka (@CMofKarnataka) June 29, 2020
ಇನ್ನು ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಆದೇಶಿಸಿದ್ದಾರೆ.

ಅಂದ್ಹಾಗೆ, ಈ ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ವಾರ್ತಾ ಇಲಾಖೆಯ ಕಾರ್ಯದರ್ಶಿ ಮಹೇಶ್ವರರಾವ್, ಆಯುಕ್ತ ಡಾ ಪಿ ಎಸ್ ಹರ್ಷ ಮತ್ತು ಇತರರು ಭಾಗವಹಿಸಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications