ಅನಿವಾಸಿ ಕನ್ನಡಿಗರಿಗಾಗಿ ಕರ್ನಾಟಕದ ಎನ್ಆರ್ಐ ನೀತಿ
ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ, ನಾಡನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಕಟ್ಟುವ ಉದ್ದೇಶದಿಂದ ಕರ್ನಾಟಕ ಸರಕಾರ ಮತ್ತು ಅನಿವಾಸಿ ಭಾರತೀಯರ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಈ ಎನ್ಆರ್ಐ ನೀತಿಗಳ ರೆಡ್ ಕಾರ್ಪೆಟ್ ಅನ್ನು ಹಾಸಲಾಗಿದೆ.
ಬೆಂಗಳೂರು, ಜನವರಿ 06 : ಹದಿನಾಲ್ಕನೇ ಪ್ರವಾಸಿ ಭಾರತೀಯ ದಿವಸದ ಆತಿಥ್ಯ ವಹಿಸುತ್ತಿರುವ ಸಂದರ್ಭದಲ್ಲಿ, ಕರ್ನಾಟಕವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಗಟ್ಟಿಯಾಗಿಸುವ ಉದ್ದೇಶದಿಂದ ಸರಕಾರ ಅನಿವಾಸಿ ಕನ್ನಡಿಗರಿಗಾಗಿ ಎನ್ಆರ್ಐ ನೀತಿಯನ್ನು ಪ್ರಕಟಿಸಿದೆ.
ಕರ್ನಾಟಕದ ಶ್ರೇಯೋಭಿವೃದ್ಧಿಗಾಗಿ, ನಾಡನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಕಟ್ಟುವ ಉದ್ದೇಶದಿಂದ ಕರ್ನಾಟಕ ಸರಕಾರ ಮತ್ತು ಅನಿವಾಸಿ ಭಾರತೀಯರ ನಡುವೆ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಈ ಎನ್ಆರ್ಐ ನೀತಿಗಳ ರೆಡ್ ಕಾರ್ಪೆಟ್ ಅನ್ನು ಹಾಸಲಾಗಿದೆ.
2008ರಲ್ಲಿ ಸ್ಥಾಪಿಸಲಾದ ಅನಿವಾಸಿ ಭಾರತೀಯ ಫೋರಂ, ಕರ್ನಾಟಕ ಮತ್ತು ಜಾಗತಿಕವಾಗಿ ವಿಸ್ತರಿಸಿಕೊಂಡಿರುವ ವಿವಿಧ ಸಾಂಸ್ಕೃತಿಕ ಸಂಘಟನೆಗಳ ನಡುವೆ ಬಂಧನದ ಬೆಸುಗೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ರಾಜ್ಯಕ್ಕೆ ಅನಿವಾಸಿ ಭಾರತೀಯರಿಂದ ಬಂಡವಾಳ ಹರಿದು ಬರುವಂತೆ ಮಾಡುವಲ್ಲಿ ಸಾಕಷ್ಟು ಶ್ರಮಿಸುತ್ತಿದೆ.

ಕರ್ನಾಟಕದ ಎನ್ಆರ್ಐ ನೀತಿಯ ಪ್ರಮುಖ ಅಂಶಗಳು ಕೆಳಗಿನಂತಿವೆ
* ಅನಿವಾಸಿ ಭಾರತೀಯರು ಮತ್ತು ಅನಿವಾಸಿ ಕನ್ನಡಿಗರ ಡೇಟಾಬೇಸ್ - ಇದು ಜಾಗತಿಕವಾಗಿ ಕನ್ನಡಿಗರು ಪರಸ್ಪರ ಸಂಪರ್ಕ ಸಾಧಿಸಲು, ಸಮಸ್ಯೆಗಳು, ಅನಿಸಿಕೆಗಳನ್ನು ಹಂಚಿಕೊಳ್ಳಲು ಇದನ್ನು ಸೃಷ್ಟಿಸಲಾಗುತ್ತಿದೆ.
* ಅನಿವಾಸಿ ಕನ್ನಡಿಗರ ಕಾರ್ಡ್ - ವೇಗವಾದ ಸೇವೆಗಾಗಿ ಅನಿವಾಸಿ ಕನ್ನಡಿಗರಿಗಾಗಿ ಗುರುತಿನ ಚೀಟಿಯನ್ನು ನೀಡಲಾಗುವುದು.
* ನಮ್ಮ ಊರು ನಮ್ಮ ನಾಡು - ಅನಿವಾಸಿ ಕನ್ನಡಿಗರು ಮತ್ತು ಅನಿವಾಸಿ ಭಾರತೀಯರು ದಾನಧರ್ಮದಂಥ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಮತ್ತು ತಮ್ಮ ಮೂಲ ಊರು ಜನರೊಂದಿಗೆ ಬೆರೆಯಲು.
* ಪ್ರವಾಸಿ ಭಾರತೀಯ ದಿವನದಲ್ಲಿ ಭಾಗವಹಿಸುವುದು - ಸಾಧಕರೊಬ್ಬರಿಗೆ 'ವರ್ಷದ ಅನಿವಾಸಿ ಕನ್ನಡಿಗ' ಪ್ರಶಸ್ತಿಯನ್ನು ಕರ್ನಾಟಕ ಸರಕಾರದ ವತಿಯಿಂದ ನೀಡಲಾಗುವುದು.
* ಕರ್ನಾಟಕದ ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕದ ಜನತೆ ಮತ್ತು ಅನಿವಾಸಿ ಕನ್ನಡಿಗರ ನಡುವೆ ಕಲೆ, ಯೋಗ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಿನಿಮಯ.
* ವಿಶ್ವದಾದ್ಯಂತ ಇರುವ ಕನ್ನಡ ಕೂಟಗಳ ಉತ್ತೇಜನ - ಕನ್ನಡ ಭಾಷೆ, ಸಂಸ್ಕೃತಿಗೆ ಇಂಬು ನೀಡಲು ಮತ್ತು ವಿಶ್ವಕನ್ನಡಿಗರೊಂದಿಗೆ ಸಂಪರ್ಕ ಸಾಧಿಸಲು ಎಲ್ಲೇ ಇದ್ದರೂ ಅಲ್ಲೇ ಕನ್ನಡ ಕೂಟಗಳನ್ನು ಸ್ಥಾಪಿಸಲು ಕನ್ನಡಿಗರಿಗೆ ಉತ್ತೇಜನ.
* ಅನಿವಾಸಿ ಕನ್ನಡಿಗರು ಮತ್ತು ಅನಿವಾಸಿ ಭಾರತೀಯರು ಕರ್ನಾಟಕದಲ್ಲಿ ಉದ್ಯಮ ಸ್ಥಾಪಿಸಲು ವರ್ಷದ ಆರಂಭದಲ್ಲಿ ಕೆಲ ತಿಂಗಳುಗಳ ಮಟ್ಟಿಗೆ ತಿಂಗಳ ಬಾಡಿಗೆ ರೂಪದಲ್ಲಿ ಇನ್ಕ್ಯೂಬೇಷನ್ ಕೇಂದ್ರವನ್ನು ರಾಜ್ಯ ಸರಕಾರ ನೀಡಲಿದೆ.
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ












Click it and Unblock the Notifications