ಅಪ್ರಾಪ್ತ ಹುಡುಗಿಯರ ವಿವರ ಹಂಚಿಕೊಂಡ ಬಿಜೆಪಿ: ಕ್ರಮಕ್ಕೆ ಒತ್ತಾಯಿಸುತ್ತಿದ್ದಂತೆ ಟ್ವೀಟ್ ಮಾಯ

ಬೆಂಗಳೂರು ಫೆಬ್ರವರಿ 16: ಪ್ರಸ್ತುತ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಬಳಕೆಯ ಮೇಲಿನ ನಿರ್ಬಂಧಗಳ ವಿರುದ್ಧ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳನ್ನು ಬಿಜೆಪಿಯ ಕರ್ನಾಟಕ ಘಟಕವು ಇಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಆದರೆ ಅರ್ಜಿದಾರರಲ್ಲಿ ಕೆಲವರು ಅಪ್ರಾಪ್ತರಾಗಿರುವುದರಿಂದ ಟ್ವೀಟ್ ಭಾರಿ ಟೀಕೆಗೆ ಗುರಿಯಾಗಿದ್ದು ಕೆಲವೇ ನಿಮಿಷಗಳಲ್ಲಿ ಅದನ್ನು ಅಳಿಸಲಾಗಿದೆ.

ವಿದ್ಯಾರ್ಥಿಗಳ ವೈಯಕ್ತಿಕ ವಿವರಗಳ ಸ್ಕ್ರೀನ್‌ಶಾಟ್‌ನೊಂದಿಗೆ ಹಂಚಿಕೊಳ್ಳಲಾದ ಶೀರ್ಷಿಕೆ ಹೀಗಿದೆ- "ಹಿಜಾಬ್ ವಿವಾದದಲ್ಲಿ ಭಾಗಿಯಾಗಿರುವ ಐವರು ವಿದ್ಯಾರ್ಥಿಗಳು ಅಪ್ರಾಪ್ತ ವಯಸ್ಕರು. ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ ಅವರು ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ರಾಜಕೀಯದಲ್ಲಿ ಪ್ರಸ್ತುತವಾಗಲು ಬಳಸುವುದರಲ್ಲಿ ಯಾವುದೇ ಅಪರಾಧವಿಲ್ಲವೇ? ಚುನಾವಣೆಯಲ್ಲಿ ಗೆಲ್ಲಲು ಅವರು ಎಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ? "ಲಡ್ಕಿ ಹೂ ಲಾಡ್ ಸಕ್ತಿ ಹೂಂ" ಎಂದರೆ ಇದೇನಾ ಪ್ರಿಯಾಂಕಾ ಗಾಂಧಿ?" ಎಂದು ಬರೆಯಲಾಗಿದೆ.

Recommended Video

      ಶಾಂತಿಯುತವಾಗಿದ್ದ ಬಳ್ಳಾರಿಯಲ್ಲಿ ಕಿಡಿ ಹೊತ್ತಿಸಿದ ಬುರ್ಖಾಧಾರಿ ಮಾಡಿದ್ದೇನು? | Oneindia Kannada

      Breaking: ಹಿಜಾಬ್ ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ
      ತಕ್ಷಣ ಪ್ರತಿಕ್ರಿಯಿಸಿದ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ, ಟ್ವೀಟ್ ಅನ್ನು 'ಅಸೂಕ್ಷ್ಮ' ಎಂದು ಕರೆದಿದ್ದಾರೆ. ಪೊಲೀಸರು, ಟ್ವಿಟರ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಟ್ಯಾಗ್ ಮಾಡುವ ಮೂಲಕ ಅವರು ಈ ವಿಷಯದಲ್ಲಿ ಕ್ರಮವನ್ನು ಕೋರಿದರು. ಮಹಿಳಾ ಸಬಲೀಕರಣದ ಸಂಸದೀಯ ಆಯೋಗದ ಭಾಗವಾಗಿರುವ ರಾಜ್ಯಸಭಾ ಸದಸ್ಯೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗವು ತಕ್ಷಣವೇ ಸಮಸ್ಯೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.

      Hijab Row: Karnataka BJP Tweets Details Of Girls, Deletes After Backlash

      "ಅಪ್ರಾಪ್ತ ವಯಸ್ಕರ ಹೆಸರು ಮತ್ತು ವಿಳಾಸಗಳನ್ನು ಹಂಚಿಕೊಳ್ಳಲು ಇದು ಕ್ರಿಮಿನಲ್ ಕೃತ್ಯವಾಗಿದೆ. ಇದು ಸ್ವೀಕಾರಾರ್ಹವಲ್ಲ" ಎಂದು ಅವರ ಎರಡನೇ ಟ್ವೀಟ್ ಅನ್ನು ಅವರು ಮಾಡಿದ್ದಾರೆ.

      ಕಳೆದ ತಿಂಗಳು ಉಡುಪಿಯ ಪಿಯು ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ತಮ್ಮ ಹಿಜಾಬ್‌ಅನ್ನು ತೆಗೆಯುವಂತೆ ಶಿಕ್ಷಕರು ಕೇಳಿಕೊಂಡರೂ ಅದನ್ನು ತೆಗೆದುಹಾಕಲು ನಿರಾಕರಿಸಿದ್ದರಿಂದ ಕರ್ನಾಟಕದಲ್ಲಿ ಹಿಜಾಬ್ ವಿವಾದ ಪ್ರಾರಂಭವಾಯಿತು. ಸೇಡು ತೀರಿಸಿಕೊಳ್ಳಲು ಇತರ ವಿದ್ಯಾರ್ಥಿಗಳು ಕೇಸರಿ ಸ್ಕಾರ್ಫ್ ಧರಿಸಿ ಶಾಲೆಗೆ ಬರಲಾರಂಭಿಸಿದರು ಮತ್ತು ಸಮಸ್ಯೆ ಉಲ್ಬಣಗೊಂಡಿತು. ಇದೀಗ ಕರ್ನಾಟಕ ಹೈಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ.

      ವಿವಾದ ಪ್ರಾರಂಭವಾದಗ ಪದವಿ ಪೂರ್ವ ಕಾಲೇಜುಗಳು ಬಹುತೇಕ ಒಂದು ವಾರದ ಮುಚ್ಚಲ್ಪಟ್ಟವು.

      ನಿನ್ನೆ ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ.ಎಂ. ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹಿಜಾಬ್ ವಿಚಾರಣೆ ಮುಂದೂಡಿದೆ.

      ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ವಿಚಾರವನ್ನು ನಿರ್ಧರಿಸುವವರೆಗೆ ಹಿಜಾಬ್, ಕೇಸರಿ ಶಾಲು ಅಥವಾ ಬೇರಾವುದೇ ಧಾರ್ಮಿಕ ಬಾವುಟಗಳನ್ನು ಇಟ್ಟುಕೊಂಡು ಕಾಲೇಜಿಗೆ ತೆರಳದಂತೆ ವಿದ್ಯಾರ್ಥಿಗಳಿಗೆ ಆದೇಶಿಸಿ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ಆದೇಶ ನೀಡಿತ್ತು. ಬಳಿಕ ಮುಂದಿನ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಿತ್ತು. ನಂತರ ಫೆ.15ಕ್ಕೆ ಮುಂದೂಡಲಾಗಿತ್ತು. ಇದೀಗ ಮೂರನೇ ಬಾರಿಗೆ ಕೋರ್ಟ್ ಮುಂದೂಡಿದೆ. ಹಿಜಾಬ್, ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ ಶಾಲೆ ಸೋಮವಾರದಿಂದ ಮತ್ತೆ ಆರಂಭವಾಗಿದ್ದು, ಬಿಗಿ ಭದ್ರತೆಯಲ್ಲಿ 9 ಮತ್ತು 10ನೇ ತರಗತಿ ಪ್ರಾರಂಭವಾಗಿದೆ. ಆದರೆ ಕೆಲವೆಡೆ ಹಿಜಾಬ್ ವಿವಾದ ನಡೆಯುತ್ತಲೇ ಇದೆ. ಕೋರ್ಟ್ ಅನುಮತಿ ಇಲ್ಲದಿದ್ದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡು ಶಾಲೆಗಳಿಗೆ ಬರುತ್ತಿದ್ದಾರೆ. ಇನ್ನೂ ಕೆಲ ವಿದ್ಯಾರ್ಥಿಗಳು ಹಿಜಾಬ್ ತೆಗೆಯುವುದಿಲ್ಲ ಎಂದು ಶಾಲೆಯಿಂದ ವಾಪಸ್ ಮನೆಗೆ ಹೋಗಿರುವುದು ಇದೆ. ಒಟ್ಟಿನಲ್ಲಿ ಹಿಜಾಬ್ ವಿವಾದ ಸದ್ಯಕ್ಕೆ ಮುಗಿಯುವಂತೆ ಕಾಣಿಸುತ್ತಿಲ್ಲ. ಕೋರ್ಟ್ ತೀರ್ಪಿಗಾಗಿ ಎಲ್ಲರೂ ಎದುರು ನೋಡುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+