Get Updates
Get notified of breaking news, exclusive insights, and must-see stories!

ಪತ್ರಕರ್ತ ಅಗ್ನಿ ಶ್ರೀಧರ್ ವಿರುದ್ಧ ದೇಶದ್ರೋಹದ ದೂರು

Recommended Video

      ಅಗ್ನಿ ಶ್ರೀಧರ್ ಒಬ್ಬ ದೇಶದ್ರೋಹಿ, ಆರೋಪ ಹೊರಿಸಿದ ಬಿಜೆಪಿ | Oneindia Kannada

      ಬೆಂಗಳೂರು, ಡಿಸೆಂಬರ್ 26:ಪತ್ರಕರ್ತ ಅಗ್ನಿಶ್ರೀಧರ್‌ ವಿರುದ್ಧ ಬಿಜೆಪಿ ಮುಖಂಡರೊಬ್ಬರು ದೇಶದ್ರೋಹದ ಆರೋಪ ಹೊರೆಸಿ, ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

      ಸಾಮಾಜಿಕ ಜಾಲತಾಣಗಳಲ್ಲಿ ಭಾರತಮಾತೆಗೆ ಅವಮಾನವಾಗುವಂಥ ಕವನವೊಂದನ್ನು ಪ್ರಕಟಿಸಿದ್ದಾರೆ. ಅಲ್ಲದೆ, ಅಗ್ನಿ ಶ್ರೀಧರ್ ಅವರ ಖಾತೆಯಿಂದ ಪ್ರಸಾರವಾಗಿರುವ ಆಡಿಯೊ, ವೀಡಿಯೊ ತುಣುಕುಗಳಲ್ಲೂ ಈ ಕವನದ ಬಗ್ಗೆ ಉಲ್ಲೇಖವಿದೆ.

      ಅಗ್ನಿ ಅಸ್ತ್ರ ಹೆಸರಿನ ವೆಬ್ ಸೈಟ್ ನಲ್ಲಿ ಕವನ ಪೋಸ್ಟ್‌ ಮಾಡಿರುವ ಪತ್ರಕರ್ತ ಅಗ್ನಿಶ್ರೀಧರ್‌, ಕವನ ಬರೆದಿರುವ ಯತಿರಾಜ್ ಎಂಬುವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರ ಒಡೆತನದ ಜಾಲತಾಣ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ನಗರದ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

      Hindu activist files compliant with Cyber police against Journalist Agni Shridhar

      ಅಗ್ನಿ ಅಸ್ತ್ರ ಎಂಬ ವೆಬ್ ತಾಣದಲ್ಲಿ ಪ್ರಕಟವಾಗಿರುವ ಕವನದಲ್ಲಿ ಭಾರತ ಮಾತೆಯನ್ನು ವ್ಯಭಿಚಾರಿಗೆ ಹೋಲಿಕೆ ಮಾಡಲಾಗಿದೆ. ಅಗ್ನಿ ಶ್ರೀಧರ್‌ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಶಾಂತಿ ಭಂಗ ತರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರಾದ ಸಿ.ಟಿ.ಮಂಜುನಾಥ್‌, ಶಿವಕುಮಾರ್‌ ಆರಾಧ್ಯ, ಎಂ.ಸಿ.ವರದರಾಜು ಎಂಬುವವರು ಆನ್ ಲೈನ್ ನಲ್ಲಿ ದೂರು ನೀಡಿದ್ದಾರೆ ಎಂದು ಸೈಬರ್ ಕ್ರೈಂ ವಿಭಾಗದ ಬೆಂಗಳೂರು ಪೊಲೀಸರು ಹೇಳಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+