ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪತ್ರಕರ್ತ ಅಗ್ನಿ ಶ್ರೀಧರ್ ವಿರುದ್ಧ ದೇಶದ್ರೋಹದ ದೂರು

By Mahesh
|
Google Oneindia Kannada News

Recommended Video

ಅಗ್ನಿ ಶ್ರೀಧರ್ ಒಬ್ಬ ದೇಶದ್ರೋಹಿ, ಆರೋಪ ಹೊರಿಸಿದ ಬಿಜೆಪಿ | Oneindia Kannada

ಬೆಂಗಳೂರು, ಡಿಸೆಂಬರ್ 26:ಪತ್ರಕರ್ತ ಅಗ್ನಿಶ್ರೀಧರ್‌ ವಿರುದ್ಧ ಬಿಜೆಪಿ ಮುಖಂಡರೊಬ್ಬರು ದೇಶದ್ರೋಹದ ಆರೋಪ ಹೊರೆಸಿ, ಸೈಬರ್ ಕ್ರೈಂ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

 ರವಿ ಬೆಳಗೆರೆ ಸಾಂಸ್ಕೃತಿಕ ಜಗತ್ತಿನ ಸನ್ನಿ ಲಿಯೋನ್ ಎಂದ ಅಗ್ನಿ ಶ್ರೀಧರ್ ರವಿ ಬೆಳಗೆರೆ ಸಾಂಸ್ಕೃತಿಕ ಜಗತ್ತಿನ ಸನ್ನಿ ಲಿಯೋನ್ ಎಂದ ಅಗ್ನಿ ಶ್ರೀಧರ್

ಸಾಮಾಜಿಕ ಜಾಲತಾಣಗಳಲ್ಲಿ ಭಾರತಮಾತೆಗೆ ಅವಮಾನವಾಗುವಂಥ ಕವನವೊಂದನ್ನು ಪ್ರಕಟಿಸಿದ್ದಾರೆ. ಅಲ್ಲದೆ, ಅಗ್ನಿ ಶ್ರೀಧರ್ ಅವರ ಖಾತೆಯಿಂದ ಪ್ರಸಾರವಾಗಿರುವ ಆಡಿಯೊ, ವೀಡಿಯೊ ತುಣುಕುಗಳಲ್ಲೂ ಈ ಕವನದ ಬಗ್ಗೆ ಉಲ್ಲೇಖವಿದೆ.

ಅಗ್ನಿ ಅಸ್ತ್ರ ಹೆಸರಿನ ವೆಬ್ ಸೈಟ್ ನಲ್ಲಿ ಕವನ ಪೋಸ್ಟ್‌ ಮಾಡಿರುವ ಪತ್ರಕರ್ತ ಅಗ್ನಿಶ್ರೀಧರ್‌, ಕವನ ಬರೆದಿರುವ ಯತಿರಾಜ್ ಎಂಬುವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರ ಒಡೆತನದ ಜಾಲತಾಣ ಖಾತೆಗಳನ್ನು ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ನಗರದ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

Hindu activist files compliant with Cyber police against Journalist Agni Shridhar

ಅಗ್ನಿ ಅಸ್ತ್ರ ಎಂಬ ವೆಬ್ ತಾಣದಲ್ಲಿ ಪ್ರಕಟವಾಗಿರುವ ಕವನದಲ್ಲಿ ಭಾರತ ಮಾತೆಯನ್ನು ವ್ಯಭಿಚಾರಿಗೆ ಹೋಲಿಕೆ ಮಾಡಲಾಗಿದೆ. ಅಗ್ನಿ ಶ್ರೀಧರ್‌ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ, ಶಾಂತಿ ಭಂಗ ತರುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರಾದ ಸಿ.ಟಿ.ಮಂಜುನಾಥ್‌, ಶಿವಕುಮಾರ್‌ ಆರಾಧ್ಯ, ಎಂ.ಸಿ.ವರದರಾಜು ಎಂಬುವವರು ಆನ್ ಲೈನ್ ನಲ್ಲಿ ದೂರು ನೀಡಿದ್ದಾರೆ ಎಂದು ಸೈಬರ್ ಕ್ರೈಂ ವಿಭಾಗದ ಬೆಂಗಳೂರು ಪೊಲೀಸರು ಹೇಳಿದರು.

English summary
Hindu activist CT Manjuath files compliant witg Cyber police against Journalist Agni Shridhar for publishing a derogatory and defaming poem penned by Yatiraj on Agniastra website against Bharat Mata and MP Ananthkumar Hegde
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X