ಕ್ರೇನ್ ಕುಸಿದು ಸಾವನ್ನಪ್ಪಿದ ಕುಟುಂಬಗಳಿಗೆ 50 ಲಕ್ಷ ಪರಿಹಾರ
ಆಗಸ್ಟ್ 03: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬೃಹತ್ ಗಾತ್ರದ ಕ್ರೇನ್ ಕುಸಿದು ಸುಮಾರು 11 ಜನರು ಮೃತಪಟ್ಟಿದ್ದರು. ಈ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ 50 ಲಕ್ಷ ಪರಿಹಾರ ನೀಡುವುದಾಗಿ ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆ ಘೋಷಿಸಿದೆ.
Recommended Video
ಕುಟುಂಬಗಳಿಗೆ ತಲಾ 50 ಲಕ್ಷ ಹಾಗೂ ಕುಟುಂಬ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ಶರತ್ ಬಾಬು ತಿಳಿಸಿದ್ದಾರೆ.
ಹಿಂದೂಸ್ತಾನ್ ಶಿಪ್ಯಾರ್ಡ್ ಲಿಮಿಟೆಡ್ ವ್ಯಾಪ್ತಿ ಪ್ರದೇಶದಲ್ಲಿ ನಡೆಯುತ್ತಿದ್ದ ಕಾಮಗಾರಿ ವೇಳೆ ನಿಯಂತ್ರಣ ತಪ್ಪಿ ಭಾರಿ ಗಾತ್ರದ ಕ್ರೇನ್ ಕುಸಿದಿ ಬಿದ್ದಿತ್ತು. ಅದರ ಸುತ್ತ ಹಾಗೂ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮೃತಪಟ್ಟಿದ್ದರು. ಕೆಲವರಿಗೆ ಗಾಯಗಳಾಗಿವೆ.
ಹಿಂದೂಸ್ತಾನ್ ಶಿಪ್ಯಾರ್ಡ್ನಲ್ಲಿ ಕ್ರೇನ್ ಬಿದ್ದು 11 ಮಂದಿ ದುರ್ಮರಣ
ಅಪಘಾತದ ಸ್ಥಳಕ್ಕೆ ಜಿಲ್ಲಾಧಿಕಾರಿ ವಿ.ವಿನಯ್ ಚಂದ್ ಭೇಟಿ ನೀಡಿ ಘಟನೆಗೆ ಬಗ್ಗೆ ವಿಚಾರಿಸಿದರು. ಈ ದುರ್ಘಟನೆಗೆ ಸರಿಯಾದ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.