ಬೆಂಗಳೂರಿನಲ್ಲಿ ದೇವಾಲಯದ ಡ್ರೆಸ್ ಕೋಡ್ ಅಭಿಯಾನ: ಈ ರೀತಿ ಡ್ರೆಸ್ ಧರಿಸಿದ್ದರೆ ಮಾತ್ರ ಪ್ರವೇಶ!
ನೀವೇನಾದ್ರು ಬೆಂಗಳೂರಿನ ಈ ದೇವಸ್ಥಾನಗಳಿಗೆ ಭೇಟಿ ನೀಡಬೇಕು ಎಂದು ಯೋಚಿಸಿದ್ದರೆ, ನಿಮ್ಮ ಬಟ್ಟೆಗಳ ಬಗ್ಗೆ ಕೂಡ ಚಿಂತಿಸುವುದು ಒಳಿತು. ಹಿಂದುತ್ವ ಸಂಘಟನೆಗಳು ಜನವರಿ 10, ಬುಧವಾರದಿಂದ ಬೆಂಗಳೂರಿನ ದೇವಾಲಯಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಡ್ರೆಸ್ ಕೋಡ್ಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವಂತೆ ಕೋರಿ ಬೋರ್ಡ್ಗಳನ್ನು ಅಳವಡಿಸಲು ಪ್ರಾರಂಭಿಸಿವೆ.
ಹಿಂದೂ ಸಂಘಟನೆಗಳಾದ, ಕರ್ನಾಟಕ ದೇವಸ್ಥಾನ ಮಹಾಸಂಘ (ಕರ್ನಾಟಕ ದೇವಾಲಯಗಳ ಸಂಘ) ಮತ್ತು ಹಿಂದೂ ಜನಜಾಗೃತ ಸಮಿತಿಯು ಬೆಂಗಳೂರಿನಲ್ಲಿ ದೇವಸ್ಥಾನದ ಆಡಳಿತಕ್ಕೆ ಮನವಿ ಮಾಡಿದೆ. ಬುಧವಾರ, ಜನವರಿ 10 ರಿಂದ ಡ್ರೆಸ್ ಕೋಡ್ ಅನ್ನು ಜಾರಿಗೆ ತರಲು ಮತ್ತು ಭಕ್ತರು ಭಾರತೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಮಾತ್ರ ದೇವಾಲಯಗಳಿಗೆ ಪ್ರವೇಶಿಸಲು ಅವಕಾಶ ನೀಡುತ್ತದೆ.

ಅಭಿಯಾನದ ಭಾಗವಾಗಿ, ಸಂಘಗಳ ಸದಸ್ಯರು ದೇವಾಲಯಗಳ ಮುಂದೆ ಬೋರ್ಡ್ಗಳನ್ನು ಹಾಕುತ್ತಿದ್ದಾರೆ ಮತ್ತು ಬುಧವಾರದಿಂದ ಈ ನಿಟ್ಟಿನಲ್ಲಿ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿ ಮಾಡುವುದಾಗಿ ಹೇಳಿದೆ.
ಹಿಂದುತ್ವ ಸಂಘಟನೆಗಳು ನಿಗದಿ ಮಾಡಿರುವ ಡ್ರೆಸ್ ಕೋಡ್ ಪ್ರಕಾರ, ಪುರುಷರು ಶಾರ್ಟ್ಸ್, ಡಿಸ್ಟ್ರೆಸ್ಡ್ ಜೀನ್ಸ್, ಟಿ-ಶರ್ಟ್ ಅನ್ನು ಧರಿಸಿದರೆ ಪ್ರವೇಶ ಸಿಗುವುದಿಲ್ಲ. ಮಹಿಳೆಯರಿಗೆ ಎದೆಯನ್ನು ತೋರಿಸುವ, ಶಾರ್ಟ್ಸ್, ಮಿಡಿ ಮತ್ತು ಡಿಸ್ಟ್ರೆಸ್ಡ್ ಜೀನ್ಸ್ ಧರಿಸಿ ದೇವಾಲಯದ ಒಳಗೆ ಪ್ರವೇಶಿಸಬಾರದು ಎಂದು ಸೂಚನೆ ನೀಡಲಾಗಿದೆ.
ಸಾತ್ವಿಕ ಉಡುಪು ಧರಿಸಲು ಒತ್ತಾಯ
ಬೆಂಗಳೂರಿನಲ್ಲಿರುವ ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಅವರು ಮಾತನಾಡಿ "ಇಂದಿನಿಂದ ಅಭಿಯಾನ ಪ್ರಾರಂಭವಾಗಿದೆ ಮತ್ತು ನಾವು ಎಲ್ಲಾ ದೇವಾಲಯಗಳಲ್ಲಿ ಪೋಸ್ಟರ್ಗಳನ್ನು ಹಾಕುತ್ತೇವೆ. ದೇವಸ್ಥಾನಗಳಿಗೆ ಭೇಟಿ ನೀಡುವಾಗ ಜನರು 'ಸಾತ್ವಿಕ' ಉಡುಪುಗಳನ್ನು ಧರಿಸಬೇಕು." ಎಂದು ಹೇಳಿರುವುದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.
ಬೆಂಗಳೂರಿನ ವಸಂತನಗರದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಹಿಂದೂ ಜನಜಾಗೃತಿ ಸಮಿತಿಯು ಹಾಕಿರುವ ಪೋಸ್ಟರ್ಗಳಲ್ಲಿ ಭಕ್ತರು ಅಸಭ್ಯ ಉಡುಗೆ ಧರಿಸಿ ದೇವಸ್ಥಾನಗಳಿಗೆ ಪ್ರವೇಶಿಸಬಾರದು ಎಂದು ಮನವಿ ಮಾಡಿದ್ದಾರೆ. ದೇವಾಲಯದ ಪಾವಿತ್ರ್ಯತೆಯನ್ನು ರಕ್ಷಿಸುವುದು ಧಾರ್ಮಿಕ ಕರ್ತವ್ಯಕ್ಕೆ ಅತಿಮುಖ್ಯ ಎಂದು ಹೇಳಿದ್ದಾರೆ.
ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಒಕ್ಕೂಟವು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಸಭೆ ನಡೆಸಿ ವಸ್ತ್ರ ಸಂಹಿತೆ ಜಾರಿಗೊಳಿಸುವ ಅಗತ್ಯವಿದೆ ಎಂದು ನಿರ್ಧಾರ ಮಾಡಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications