ಕೌರವನಿಗೂ ಅಂಟಿತು ಕೊರೊನಾವೈರಸ್; ಗೃಹ ದಿಗ್ಬಂಧನದಲ್ಲಿ ಬಿ.ಸಿ.ಪಾಟೀಲ್!
ಬೆಂಗಳೂರು, ಜುಲೈ.31: ಕೊರೊನಾವೈರಸ್ ಸೋಂಕು ಯಾವಾಗ, ಯಾರಿಗೆ, ಯಾವ ರೀತಿಯಲ್ಲಿ ಅಂಟಿಕೊಳ್ಳುತ್ತೆ ಎನ್ನುವುದನ್ನು ಊಹಿಸುವುದಕ್ಕೆ ಆಗುತ್ತಿಲ್ಲ. ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಸಿ. ಪಾಟೀಲ್ ಅವರಿಗೂ ಕೊವಿಡ್-19 ಸೋಂಕು ತಗಲಿರುವುದು ಪತ್ತೆಯಾಗಿದೆ.
ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾವೈರಸ್ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಸ್ವತಃ ಶಾಸಕ ಬಿ.ಸಿ ಪಾಟೀಲ್ ಅವರೇ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗೂ ಕೊರೊನಾವೈರಸ್ ಪಾಸಿಟಿವ್ ಎಂದು ವರದಿ ಬಂದಿದೆ. ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೊವಿಡ್-19 ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಶಾಸಕ ಬಿ.ಸಿ ಪಾಟೀಲ್ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ ಎಂದಿದ್ದಾರೆ.

ಶಾಸಕರ ಪತ್ನಿ ಸೇರಿ ಐವರಿಗೆ ಕೊರೊನಾವೈರಸ್:
ಇನ್ನು, ಶಾಸಕ ಬಿ.ಸಿ.ಪಾಟೀಲ್ ಅವರಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗುವ ಮೊದಲೇ ತಮ್ಮ ಪತ್ನಿಗೆ ಸೋಂಕು ತಗಲಿರುವ ಬಗ್ಗೆ ಮಾಹಿತಿ ನೀಡಿದ್ದರು. "ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೊವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ" ಎಂದು ಶಾಸಕರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications