Holi 2024: ಇತ್ತ ಕುಡಿಯಲು ನೀರಿಲ್ಲದೆ ಜನರ ಪರದಾಟ.. ಅತ್ತ ಪೂಲ್ ಪಾರ್ಟಿ ಆಯೋಜಿಸುತ್ತಿವೆ ಹೋಟೆಲ್, ರೆಸಾರ್ಟ್ಗಳು!
ಬೆಂಗಳೂರು, ಮಾರ್ಚ್ 17: ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ನೀರಿನ ವ್ಯವಸ್ಥೆ ಮಾಡಲು ಸರ್ಕಾರ, ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ, ಇದರ ನಡುವೆಯೇ ಹೋಟೆಲ್ಗಳು, ರೆಸಾರ್ಟ್ಗಳು ಮತ್ತು ಕಾರ್ಯಕ್ರಮ ಸಂಘಟಕರು ಮಾರ್ಚ್ 25 ರಂದು ಹೋಳಿ ಹಬ್ಬಕ್ಕೆ ಸಿದ್ಧತೆಗಳನ್ನು ಪ್ರಾರಂಭಿಸಿದ್ದಾರೆ.
ಹೋಳಿ ಹಬ್ಬಕ್ಕಾಗಿ ಪೂಲ್ ಪಾರ್ಟಿಗಳು, ಮಳೆ ನೃತ್ಯಗಳು ಮತ್ತು ಬಣ್ಣದ ಆಟಗಳನ್ನು ಆಯೋಜಿಸಲಾಗುತ್ತಿದೆ. ವಿವಿಧ ಬುಕಿಂಗ್ ಅಪ್ಲಿಕೇಶನ್ಗಳಲ್ಲಿ ಕನಿಷ್ಠ 70 ರಿಂದ 80 ಈವೆಂಟ್ಗಳನ್ನು ಪಟ್ಟಿ ಮಾಡಲಾಗಿದೆ. ನಗರದಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರಲ್ಲಿ ಹೆಚ್ಚಿನವು ಪೂರ್ವ ಮತ್ತು ಆಗ್ನೇಯ ಬೆಂಗಳೂರಿನಲ್ಲಿ ನಡೆಯಲಿವೆ.

ಈ ಪಾರ್ಟಿಗಳಲ್ಲಿ ಹೆಚ್ಚಿನವು ಒಂದಕ್ಕಿಂತ ಹೆಚ್ಚು ದಿನಗಳು ಮತ್ತು ಕೆಲವು ಕಾರ್ಯಕ್ರಮಗಳನ್ನು ವಾರಾಂತ್ಯದಲ್ಲಿ ಆಯೋಜಿಸಿರುವುದು ಹೆಚ್ಚು ಆತಂಕಕಾರಿಯಾಗಿದೆ ಎಂದು ನಗರದ ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಮಾಣದ ನೀರಿನ ಅಗತ್ಯವಿರುತ್ತದೆ. ಕುಡಿಯುವ ನೀರಿನ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಯೋಚಿಸಬೇಕು ಎಂದು ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.
"ನೀರಿನ ಬಿಕ್ಕಟ್ಟಿನ ಇಂತಹ ಸಮಯದಲ್ಲಿ ಈ ಕಾರ್ಯಕ್ರಮಗಳಲ್ಲಿ ನೀರನ್ನು ವ್ಯರ್ಥ ಮಾಡುವುದು ಸೂಕ್ತವಲ್ಲ. ಜನರು ತಮ್ಮ ಮನೆಗಳಲ್ಲಿ ಇದನ್ನು ಸಣ್ಣ ಪ್ರಮಾಣದಲ್ಲಿ ಆಚರಿಸುವುದು ತಪ್ಪಲ್ಲ, ಏಕೆಂದರೆ ಹಬ್ಬಗಳನ್ನು ಆಚರಿಸುವುದು ಮುಖ್ಯ. ಆದರೆ, ಇಂತಹ ದೊಡ್ಡ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಇಂತಹ ದೊಡ್ಡ ಕಾರ್ಯಕ್ರಮಗಳಿಗೆ ಸರ್ಕಾರ ಕಡಿವಾಣ ಹಾಕುತ್ತದೆ ಎಂದು ಆಶಿಸುತ್ತೇವೆ" ಎಂದು ಕೋರಮಂಗಲದ ನಾಗರಿಕ ಹೋರಾಟಗಾರ ನಿತಿನ್ ಶೇಷಾದ್ರಿ ಅವರನ್ನು ದಿ ಹಿಂದು ಉಲ್ಲೇಖಿಸಿದೆ. .
ಈ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಬಗ್ಗೆ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ಮಾಡಿದ್ದಾರೆ. ಸರ್ಕಾರ ಮತ್ತು ನಾಗರಿಕರು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. "ನೀರಿನ ಸಮಸ್ಯೆಯಿಂದಾಗಿ ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಹೋಳಿ ಆಚರಣೆಯನ್ನು ದಯವಿಟ್ಟು ನಿಷೇಧಿಸಿ. ಹೋಟೆಲ್ಗಳು/ರೆಸಾರ್ಟ್ಗಳು ಮತ್ತು ಪಾರ್ಟಿಗಳಲ್ಲಿ ಹೋಳಿ ಪಾರ್ಟಿಗಳಲ್ಲಿ ಹೆಚ್ಚು ನೀರು ವ್ಯರ್ಥವಾಗುತ್ತದೆ" ಎಂದು ಹಲವು ಮಂದಿ ಟ್ವೀಟ್ ಮಾಡಿದ್ದಾರೆ.

ನೀರಿಲ್ಲದೆ ಬಣ್ಣಗಳ ಹೋಳಿ ಹಬ್ಬ!
ಇನ್ನು ಕೆಲವು ಸಂಘಟಕರು ನೀರಿಲ್ಲದ ಹೋಳಿ ಈವೆಂಟ್ಗಳು, ಹೂವಿನ ಹೋಳಿ ಈವೆಂಟ್ಗಳು ಮತ್ತು ಸಿಂಥೆಟಿಕ್ ಬಣ್ಣಗಳು ಅಥವಾ ನೀರನ್ನು ಬಳಸದ ಸಾಕುಪ್ರಾಣಿ ಸ್ನೇಹಿ ಹೋಳಿ ಕಾರ್ಯಕ್ರಮಗಳನ್ನು ಆಯೋಜಿಸುವುದಾಗಿ ಘೋಷಿಸಿದ್ದಾರೆ. ಇತ್ತ, ಮರುಬಳಕೆಯ ನೀರನ್ನು ಪಾರ್ಟಿಗಳಿಗೆ ಬಳಸಲಾಗುತ್ತದೆ ಹೀಗಾಗಿ ಹೋಳಿ ಆಚರಣೆಯಿಂದ ಹೆಚ್ಚು ನೀರು ವ್ಯರ್ಥವಾಗುವುದಿಲ್ಲ ಎಂದು ಹೋಟೆಲ್ಗಳು ಮತ್ತು ರೆಸಾರ್ಟ್ಗಳು ವಾದಿಸುತ್ತಿವೆ.
"ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುತ್ತಿರುವಾಗ, ಆ ದಿನದಂದು ಹೋಟೆಲ್ ಮತ್ತು ರೆಸಾರ್ಟ್ಗಳ ವ್ಯಾಪಾರವನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಹೇಳುವುದು ಸರಿಯಲ್ಲ. ಇದು ವರ್ಷಕ್ಕೊಮ್ಮೆ ಬರುತ್ತದೆ. ನಾವು ನೀರನ್ನು ವ್ಯರ್ಥ ಮಾಡಲು ಬಯಸುವುದಿಲ್ಲ. ಹೀಗಾಗಿ ಫಿಲ್ಟರ್ಗಳಿಂದ ಹೊರಹಾಕಲ್ಪಟ್ಟ ನೀರು ಮತ್ತು ಇತರ ಮರುಬಳಕೆಯ ನೀರನ್ನು ಪೂಲ್ ಪಾರ್ಟಿಗಳು ಮತ್ತು ಮಳೆ ನೃತ್ಯಗಳಿಗೆ ಬಳಸಲಾಗುತ್ತದೆ. ಮಳೆಯ ಕುಣಿತದ ನೀರನ್ನು ಮುಂದಿನ ಬ್ಯಾಚ್ಗೆ ಮರುಬಳಕೆ ಮಾಡಲಾಗುವುದು" ಎಂದು ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಪಿ.ಸಿ. ರಾವ್ ಹೇಳಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ











Click it and Unblock the Notifications