ನಿವೃತ್ತ ಇನ್ಸ್ಪೆಕ್ಟರ್ನಿಂದ ಲಂಚ ಪಡೆಯುತ್ತಿದ್ದ ಹೋಂಗಾರ್ಡ್ ಬಂಧನ
ಬೆಂಗಳೂರು, ನವೆಂಬರ್ 23: ಕರ್ನಾಟಕ ಗೃಹ ಇಲಾಖೆಗೆ ಸೇರಿದ ಗೃಹ ರಕ್ಷಕರೊಬ್ಬರು ಮಂಗಳವಾರ ಮಧ್ಯಾಹ್ನ ಹೋಟೆಲ್ ಒಂದರಲ್ಲಿ ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ನಿಂದ 20,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಅಶೋಕ್. ಕೆ. ವಿ ನೇತೃತ್ವದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಅಂಥೋನಿ ಜಾನ್ ನೇತೃತ್ವದ ತಂಡ ಗೃಹರಕ್ಷಕ ಸತೀಶನನ್ನು ಬಂಧಿಸಿದ್ದಾರೆ. ಬಾಕಿ ಉಳಿದಿರುವ ವೈದ್ಯಕೀಯ ಮೊತ್ತವನ್ನು ತೆರವುಗೊಳಿಸಲು ಸ್ವಯಂ ನಿವೃತ್ತಿಗೆ ಆಯ್ಕೆ ಮಾಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ಪಿ ಎನ್ ಗಣೇಶ್ ಅವರಿಗೆ ಹೋಂಗಾರ್ಡ್ ಸತೀಶ್ 20,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಹೋಂಗಾರ್ಡ್ ಸತೀಶನು ವಿಧಾನಸೌಧದ ಗೃಹ ಇಲಾಖೆಯ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರ ಪರವಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಗಣೇಶ್ ಅವರು ಕೆಲವು ವರ್ಷಗಳ ಹಿಂದೆ ಸೇವೆಯಿಂದ ಸ್ವಯಂ ನಿವೃತ್ತಿಗೆ ಆಯ್ಕೆ ಮಾಡಿಕೊಂಡಿದ್ದರು.

2017 ರಲ್ಲಿ ಗಣೇಶ್ ಕೋಮಾಗೆ ಹೋಗಿದ್ದರು. ಅವರ ವೈದ್ಯಕೀಯ ಬಿಲ್ ಸುಮಾರು 9 ಲಕ್ಷ ರೂ. ಆಗಿತ್ತು. ಅದರಲ್ಲಿ 2 ಲಕ್ಷ ಮರುಪಾವತಿಗೆ ಸರ್ಕಾರ ಅನುಮೋದನೆ ನೀಡಿತ್ತು. ಈ ಹಣ ಬಿಡುಗಡೆ ಮಾಡಲು 20 ಸಾವಿರ ಲಂಚ ನೀಡುವಂತೆ ಸತೀಶ್ ಕೇಳಿದ್ದರು. ಆಗ ಅವರು ಗೃಹರಕ್ಷಕ ದಳದಲ್ಲಿ ಉಪ ಕಮಾಂಡೆಂಟ್ ಆಗಿದ್ದರು. ಅದೇ ವರ್ಷ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ತಮ್ಮ ವೈದ್ಯಕೀಯ ಬಿಲ್ಗಳನ್ನು ಸಲ್ಲಿಸಿದ್ದರು. ಅಂದಿನಿಂದ ಹಣ ಬಿಡುಗಡೆ ಮಾಡಿಸಿಕೊಳ್ಳಲು ಸಾಕಷ್ಟು ಓಡುತ್ತಿದ್ದರು.

ಲಂಚ ಕೊಡಲು ಒಪ್ಪದ ಇನ್ಸ್ಪೆಕ್ಟರ್ ಗಣೇಶ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು. ಅವರ ಸೂಚನೆಯಂತೆ ಹಣವನ್ನು ತೆಗೆದುಕೊಂಡು ಮಧ್ಯಾಹ್ನ 3.30ರ ಸುಮಾರಿಗೆ ಹೋಟೆಲ್ ಪರಾಗ್ನಲ್ಲಿ ಸತೀಶನನ್ನು ಭೇಟಿಯಾಗಿದ್ದರು. ಆ ವೇಳೆ ಹೋಂಗಾರ್ಡ್ ಸತೀಶ ಲಂಚ ಪಡೆಯುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿ ಹಣ ವಶಪಡಿಸಿಕೊಂಡಿದ್ದಾರೆ.
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications