ಏ.1ರಂದು ಸಿದ್ದಗಂಗಾ ಮಠಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ; ಚುನಾವಣಾ ಪ್ರಚಾರಕ್ಕೂ ಚಾಲನೆ ಸಾಧ್ಯತೆ
ಬೆಂಗಳೂರು, ಮಾರ್ಚ್ 26: ಕೇಂದ್ರ ಗೃಹ ಸಚಿವ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕ ಅಮಿತ್ ಶಾ ಅವರು ಮುಂದಿನ ವಾರ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ.
ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ನಂತರ ಏಪ್ರಿಲ್ 1ರಂದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ವಿಧಾನಸಭೆ ಚುನಾವಣೆಗೆ ಒಂದು ವರ್ಷ ಮುಂಚಿತವಾಗಿ ಅವರು ಕರ್ನಾಟಕದಲ್ಲಿ ಪಕ್ಷದ ಪ್ರಚಾರವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಮುಖ್ಯಮಂತ್ರಿ ಮತ್ತು ರಾಜ್ಯ ನಾಯಕರೊಂದಿಗೆ ಚರ್ಚಿಸಲಿದ್ದಾರೆ ಎನ್ನುವ ಮಾತಿದೆ.
ವಿಶೇಷವಾಗಿ, ರಾಜ್ಯದ ಪ್ರಮುಖ ಲಿಂಗಾಯತ ಧಾರ್ಮಿಕ ಕ್ಷೇತ್ರವಾದ ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.

ಕರ್ನಾಟಕದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಕಾರ್ಯಕ್ರಮದಲ್ಲಿ ದೇಶದ ಮೊದಲ ಸಹಕಾರ ಸಚಿವ ಶಾ ಅವರು ಭಾಗವಹಿಸುವ ಸಾಧ್ಯತೆ ಇದೆ. ಅವರ ಭೇಟಿ ಈಗಾಗಲೇ ಬಿಜೆಪಿ ವಲಯದಲ್ಲಿ ಅಲೆಗಳನ್ನು ಸೃಷ್ಟಿಸಲು ಪ್ರಾರಂಭಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆಗೆ ಮತ್ತು ಮಂಡಳಿ ಮತ್ತು ನಿಗಮಗಳಿಗೆ ನಾಮನಿರ್ದೇಶಿತರ ಪಟ್ಟಿಗೆ ಅವರು ಒಪ್ಪಿಗೆ ನೀಡುತ್ತಾರೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ಮುಂದಿನ ವಿಧಾನಸಭೆ ಚುನಾವಣೆಯನ್ನು ಕರ್ನಾಟಕದಲ್ಲಿ ಬೊಮ್ಮಾಯಿ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಶಾ ಪ್ರತಿಪಾದಿಸಿದ್ದರು. ಈಗ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಶಾ ಮತ್ತು ಮುಖ್ಯಮಂತ್ರಿ ಅಭ್ಯರ್ಥಿಯ ಸಂಯೋಜಿತ ನಾಯಕತ್ವದಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳನ್ನು ಗೆದ್ದ ನಂತರ ಅಮಿತ್ ಶಾ ಅವರು ಬೊಮ್ಮಾಯಿ ಅವರೊಂದಿಗೆ ಇದೇ ರೀತಿಯ ತಂತ್ರವನ್ನು ರೂಪಿಸಬಹುದು.

ಅಮಿತ್ ಶಾ ಭೇಟಿಯ ವೇಳೆ ಪಕ್ಷದಲ್ಲಿನ ಪದಾಧಿಕಾರಿ ಬದಲಾವಣೆ ಚರ್ಚೆಗೆ ಬರುವ ಸಾಧ್ಯತೆ ಇದೆ. ಅವರ ಭೇಟಿಗೂ ಮುನ್ನ ಬೊಮ್ಮಾಯಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಖಾಸಗಿಯಾಗಿ ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications