ಮತ್ತೊಮ್ಮೆ ಲಾಕ್ಡೌನ್: ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು?
ಬೆಂಗಳೂರು, ಜೂನ್ 24: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚು ಹರಡುತ್ತಿದ್ದು, ಮತ್ತೊಮ್ಮೆ ಲಾಕ್ಡೌನ್ ಮಾಡಬೇಕಾ ಎಂಬ ವಿಷಯ ವ್ಯಾಪಕವಾಗಿ ಚರ್ಚೆಯಾಗ್ತಿದೆ. ವಿಶೇಷವಾಗಿ ಬೆಂಗಳೂರಿನಲ್ಲಿ ಹೊಸ ಕೇಸ್ಗಳ ಏರಿಕೆಯಾಗಿದ್ದು, ಸಹಜವಾಗಿ ಆತಂಕ ಹೆಚ್ಚಿಸಿದೆ.
Recommended Video
ಈ ಬೆನ್ನಲ್ಲೆ ಮತ್ತೊಮ್ಮೆ ಲಾಕ್ಡೌನ್ ಮಾಡುವುದು ಅನಿವಾರ್ಯ ಎಂಬ ವಾದವೂ ಕೇಳಿ ಬರುತ್ತಿದೆ. ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 20 ದಿನಗಳ ಕಾಲ ಬೆಂಗಳೂರು ಲಾಕ್ಡೌನ್ ಮಾಡಿ ಎಂದು ಒತ್ತಾಯಿಸಿದ್ದಾರೆ.
ಮತ್ತೊಮ್ಮೆ ಲಾಕ್ಡೌನ್ ಮಾಡುವ ವಿಷಯದ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ''ಲಾಕ್ ಡೌನ್ ವ್ಯಾಪಕವಾದ ಚರ್ಚೆ ಆಗ್ತಿದೆ. ಸಿಎಂ ಕೂಡ ಎಲ್ಲ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡ್ತಿದ್ದಾರೆ. ಲಾಕ್ ಡೌನ್ ಓಪನ್ ಆದ್ಮೇಲೆ ಏನೆಲ್ಲಾ ನಡೆಯುತ್ತಿದೆ ಅನ್ನೋದನ್ನ ಕೂಡ ಗಮನಿಸಲಾಗ್ತಿದೆ. ಮತ್ತೆ ಲಾಕ್ ಡೌನ್ ಮಾಡಬೇಕಾ ಅಥವಾ ಬೇಡವೇ ಅನ್ನೋದನ್ನ ಸಿಎಂ ನಿರ್ಧಾರ ತೆಗೆದುಕೊಳ್ಳುತ್ತಾರೆ'' ಎಂದು ತಿಳಿಸಿದ್ದಾರೆ.

''ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಬೇಕಾ? ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ಮಾಡಬೇಕಾ ಅಥವಾ ಟಾಸ್ಕ್ ಫೋರ್ಸ್ ಕಮೀಟಿ ಜೊತೆ ಚರ್ಚೆ ಮಾಡಬೇಕಾ ಅನ್ನೋದರ ಬಗ್ಗೆ ಸಿಎಂ ತೀರ್ಮಾನ ಮಾಡ್ತಾರೆ. ಕೊರೊನಾ ಹೆಚ್ಚಳ ಆಗ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಬೇಕಾ..? ಬೇಡ್ವಾ.? ಅನ್ನೋ ಅಭಿಪ್ರಾಯಗಳನ್ನು ಗಂಭೀರವಾಗಿ ಪರಿಗಣಿಸುತ್ತೆ ಸರ್ಕಾರ'' ಎಂದು ಹೇಳಿದ್ದಾರೆ.
ಇದಕ್ಕೂ ಮುಂಚೆ ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿದ್ದು ''ಲಾಕ್ ಡೌನ್ ಬೇಕಾ ಬೇಡವೋ ಎಂದು ತೀರ್ಮಾನ ಮಾಡೋಕೆ ತಜ್ಞರ ಸಮಿತಿ ಇದೆ. ಅವರು ಸಲಹೆ ಸೂಚನೆ ಕೊಡ್ತಾರೆ'' ಎಂದಿದ್ದಾರೆ.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications